ಸಮಾಜದ ಒಳಿತಿಗೆ ಬ್ರಾಹ್ಮಣರ ಕೊಡುಗೆ ಅಪಾರ
Team Udayavani, Jun 17, 2021, 10:51 PM IST
ಸಾಗರ: ಪುರಾಣ ಕಾಲದಿಂದಲೂ ಸಮಾಜದ ಒಳಿತಿಗಾಗಿ ಬ್ರಾಹ್ಮಣರು ಗುರುತರವಾದ ಕೊಡುಗೆ ನೀಡುತ್ತ ಬಂದಿದ್ದಾರೆ. ಅವುಗಳನ್ನು ಪರಿಗಣಿಸದೆ ಏಕಾಏಕಿ ಅವರ ವಿರುದ್ಧ ಅಶಾಂತಿ ಮೂಡಿಸುವ ಕೆಲಸ ಯಾರಿಂದಲೂ ಆಗಬಾರದು ಎಂದು ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಅಭಿಪ್ರಾಯಪಟ್ಟರು.
ಇಲ್ಲಿನ ಗಾಂ ಧಿ ನಗರದ ಗೌತಮ ಸಭಾಂಗಣದಲ್ಲಿ ಅಖೀಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಸಾಗರ ತಾಲೂಕು ಬ್ರಾಹ್ಮಣ ಸಂಘ, ವಿಪ್ರ ನೌಕರರ ಸಂಘ, ವಿಪ್ರ ವೈದಿಕ ಪರಿಷತ್, ಜೋಶಿ ಫೌಂಡೇಷನ್, ಸಾಗರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಲೋಕಕಲ್ಯಾಣಾರ್ಥ ಏರ್ಪಡಿಸಿದ್ದ ರುದ್ರ ಪಾರಾಯಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಪ್ರಚಾರ ಗಿಟ್ಟಿಸುವ ದೃಷ್ಟಿಯಿಂದ ಮತ್ತೂಬ್ಬರನ್ನು ಹೀನಾಯವಾಗಿ ದೂಷಿಸುವ ಪ್ರವೃತ್ತಿ ಹೆಚ್ಚುತ್ತಿದೆ. ಇದು ಪರಸ್ಪರರಲ್ಲಿ ದ್ವೇಷ ಹುಟ್ಟುಹಾಕಿ ಜನಸಾಮಾನ್ಯರ ಸಂಕಷ್ಟ ಹೆಚ್ಚಿಸುವಂತೆ ಮಾಡುತ್ತದೆ. ಸ್ವಜಾತಿ, ಧರ್ಮವನ್ನು ಪ್ರೀತಿಸುವುದು ತಪ್ಪಲ್ಲ. ಆದರೆ ಇತರರನ್ನು ಕೊಂಕಿಲ್ಲದೆ ಗೌರವಿಸುವ ಮನೋಭಾವ ಬೆಳೆಸಿಕೊಂಡರೆ ಸಮಾಜ ಹೆಚ್ಚು ಆರೋಗ್ಯಕರವಾಗಿರುತ್ತದೆ ಎಂದರು.
ಬ್ರಾಹ್ಮಣ ಸಮುದಾಯ ರುದ್ರ ಪಾರಾಯಣದಂತಹ ಧಾರ್ಮಿಕ ಚಟುವಟಿಕೆ ನಡೆಸುವುದರ ಹಿಂದೆಯೂ ಈ ಕೊರೊನಾ ಸೋಂಕಿನ ಕಾಲದಲ್ಲಿ ಇಡೀ ಮಾನವ ಸಮುದಾಯಕ್ಕೆ ಒಳಿತಾಗಲಿ ಎಂಬ ಆಶಯವೇ ಅಡಗಿದೆ. ಜಗತ್ತಿನ ಎಲ್ಲ ಜಾತಿ, ಧರ್ಮ, ಪರಂಪರೆಗಳು ಸರ್ವರ ಹಿತವನ್ನೇ ಬಯಸಿವೆ. ಆದರೆ ಆಚರಣೆಯಲ್ಲಿ ಸೋಲುವ ನಾವು ದ್ವೇಷ, ನಾಶದ ಮನೋಭಾವ ಪ್ರದರ್ಶಿಸುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.
ಬ್ರಾಹ್ಮಣ ಮಹಾಸಭಾ ರಾಜ್ಯ ಪ್ರಧಾನ ವಕ್ತಾರ ಮ.ಸ.ನಂಜುಂಡಸ್ವಾಮಿ ಅವರು ಈಶ್ವರಪ್ಪ ಅವರಿಗೆ ತಮ್ಮ ಆತ್ಮಕಥನದ ಪುಸ್ತಕ ನೀಡಿ ಮಾತನಾಡಿ, ಸಮಾಜದಲ್ಲಿ ಕೆಲವು ವೃತ್ತಿಗಳು ಹೆಚ್ಚಿನ ತ್ಯಾಗ ಬಯಸುತ್ತವೆ. ಓರ್ವ ಗುಮಾಸ್ತ, ಗಾರ್ಮೆಂಟ್ ನೌಕರರಂತಹವರಿಗೆ ಕೆಲಸದ ಸಮಯದ ನಂತರ ಸಿಗುವ ಸ್ವಾತಂತ್ರÂ ಅರ್ಚಕ, ಪುರೋಹಿತರಿಗೆ, ಶಿಕ್ಷಕರಿಗೆ ಸಿಗುವುದಿಲ್ಲ.
ಅವರು ಕಾನೂನುಬದ್ಧವಾಗಿಯಷ್ಟೇ ಅಲ್ಲ, ನೈತಿಕತೆಯ, ಸಭ್ಯತೆಯ ಎಲ್ಲೆ ಮೀರುವಂತಿರಬಾರದು. ಅವರು ಮಾಡಬೇಕಾದ ತ್ಯಾಗಗಳಿಗೆ ಸಮಾಜ ಅವರಿಗೆ ಪೂರ್ಣ ಪ್ರಮಾಣದಲ್ಲಿ ಗೌರವ ಸಲ್ಲಿಸಬೇಕೇ ವಿನಃ ಹೀಗಳಿಕೆ ಸರಿಯಲ್ಲ ಎಂದರು. ಈ ಸಂದರ್ಭದಲ್ಲಿ ಸಚಿವರ ವಿಶೇಷ ಅಧಿಕಾರಿ ಲೋಕೇಶ್, ಜ್ಯೋತಿ ನಂಜುಂಡಸ್ವಾಮಿ, ವೈ. ಮೋಹನ್, ವಸಂತ್, ಸುಜಾತಾ, ಬದರಿನಾಥ್ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; 2ಎ ಮೀಸಲಾತಿ ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ
Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್.. ಕಾಲಿನಲ್ಲಿ ನೇತಾಡಿದ ಮಗು.!
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
Belthangady: ತೋಡಿಗೆ ಅಡಿಕೆ ಮರವೇ ಸಂಕ!
Tirupati Laddu Case; ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.