ಹಣತೆ ಹಚ್ಚೋಣ ಕಾರ್ಯಕ್ರಮಕ್ಕೆ ಚಾಲನೆ
Team Udayavani, Jun 29, 2021, 11:15 PM IST
ಸಾಗರ: ಸಂವಿಧಾನದ ಮೂಲಭೂತ ಹಕ್ಕುಗಳ ಪಟ್ಟಿಗೆ ಆರೋಗ್ಯದ ವಿಷಯ ಕೂಡ ಸೇರ್ಪಡೆಯಾಗಬೇಕು ಎಂದು ರಾಜ್ಯದ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ದಾಸ್ ಪ್ರತಿಪಾದಿಸಿದ್ದಾರೆ. ಇಲ್ಲಿನ ಸ್ಪಂದನ ರಂಗತಂಡ ಉಪನ್ಯಾಸಕ, ಸಾಮಾಜಿಕ ಕಾರ್ಯಕರ್ತ ಡಾ| ವಿಠಲ್ ಭಂಡಾರಿ ಅವರ ನೆನಪಿನಲ್ಲಿ ಭಾನುವಾರ ವೆಬಿನಾರ್ನಲ್ಲಿ ಆಯೋಜಿಸಿದ್ದ “ಹಣತೆ ಹಚ್ಚೋಣ’ ಸರಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಆರೋಗ್ಯದ ವಿಷಯವು ಸಂವಿಧಾನದ ರಾಜ್ಯ ನಿರ್ದೇಶಕ ತತ್ವಗಳ ಪಟ್ಟಿಯಲ್ಲಿ ಸೇರಿದೆ. ಹೀಗಾಗಿ ಜನರ ಆರೋಗ್ಯ ರಕ್ಷಣೆಯ ವಿಷಯದಲ್ಲಿ ಸರ್ಕಾರದ ಹೊಣೆಗಾರಿಕೆ ಸೀಮಿತವಾಗಿದೆ. ಕೋವಿಡ್ನಂತಹ ಸಾಂಕ್ರಾಮಿಕ ರೋಗ ದೇಶದ ಎಲ್ಲೆಡೆ ವ್ಯಾಪಕವಾಗಿ ಹರಡಿರುವ ಈ ಹೊತ್ತಿನಲ್ಲಿ ಆರೋಗ್ಯದ ವಿಷಯ ಸಂವಿಧಾನದ ಮೂಲಭೂತ ಹಕ್ಕುಗಳ ಪಟ್ಟಿಗೆ ಸೇರಿದರೆ ಸರ್ಕಾರದ ಜವಾಬ್ದಾರಿಗೊಂದು ಸ್ಪಷ್ಟ ರೂಪ ದೊರಕುತ್ತದೆ ಎಂದು ಅಭಿಪ್ರಾಯಪಟ್ಟರು.
ಆರೋಗ್ಯ ಕ್ಷೇತ್ರದಲ್ಲಿ ಸರ್ಕಾರಿ ವಲಯವನ್ನು ಸಾಧ್ಯವಾದಷ್ಟು ಮಟ್ಟಿಗೆ ಬಲಿಷ್ಟಗೊಳಿಸಿದಾಗ ಮಾತ್ರ ಸಾಮಾನ್ಯ ಜನರಿಗೂ ಉತ್ತಮ ಸೇವೆ ಸಿಗಲು ಸಾಧ್ಯ. ಹಾಗೆಂದು ಖಾಸಗಿ ವಲಯಕ್ಕೆ ಪ್ರೋತ್ಸಾಹ ನೀಡುವುದನ್ನು ನಿಲ್ಲಿಸುವ ಅಗತ್ಯವಿಲ್ಲ. ಆದರೆ ಖಾಸಗಿ ವಲಯಕ್ಕೆ ಆರೋಗ್ಯ ಕ್ಷೇತ್ರ ಒಂದು ವ್ಯಾಪಾರದಂತೆ ಆಗಲು ಅವಕಾಶ ನೀಡಬಾರದು. ಸೂಕ್ತ ಕಾನೂನುಗಳ ಮೂಲಕ ನಿಯಂತ್ರಣ ಹೇರಲು ಸರ್ಕಾರ ಮುಂದಾಗಬೇಕು ಎಂದು ಅವರು ಒತ್ತಾಯಿಸಿದರು.
ಶಾಸಕಾಂಗ, ಕಾರ್ಯಾಂಗ ತನ್ನ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸದಿದ್ದಾಗ ಮಧ್ಯೆ ಪ್ರವೇಶಿಸುವುದು ನ್ಯಾಯಾಂಗಕ್ಕೆ ಅನಿವಾರ್ಯವಾಗುತ್ತದೆ. ಕೋವಿಡ್ ಕಾಲದಲ್ಲೂ ನ್ಯಾಯಾಲಯ ಸರ್ಕಾರದ ಕಿವಿ ಹಿಂಡಿದ ಕಾರಣ ಎಲ್ಲರಿಗೂ ಉಚಿತ ಲಸಿಕೆ ನೀಡುವಂತಹ ಕಾರ್ಯಕ್ರಮ ಘೋಷಣೆಯಾಯಿತು. ನ್ಯಾಯಾಂಗದ ಮಧ್ಯೆ ಪ್ರವೇಶವನ್ನು ವಿಮರ್ಶಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈ ಕುರಿತು ಅವಹೇಳನ ಮಾಡುವ ಪ್ರವೃತ್ತಿ ಸರಿಯಲ್ಲ ಎಂದರು. ಸಂಸ್ಕೃತಿ ಚಿಂತಕ ಕೆ. ಫಣಿರಾಜ್ ಆಶಯ ಭಾಷಣ ಮಾಡಿದರು.
ಮುನೀರ್ ಕಟಿಪಳ್ಳ, ಪೂರ್ಣಿಮಾ, ಎಂ.ಎಸ್. ಶೆಟ್ಟಿ, ಕಿರಣ್ ಭಟ್ ಮಾತನಾಡಿದರು. ರೇಖಾಂಬ ಪ್ರಾರ್ಥಿಸಿದರು. ರಿಯಾಜ್ ಸ್ಪಂದನ ಸ್ವಾಗತಿಸಿದರು. ನವೀನ್ ಹಾಸನ ವಂದಿಸಿದರು. ಎಂ. ರಾಘವೇಂದ್ರ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
Belthangady: ತೋಡಿಗೆ ಅಡಿಕೆ ಮರವೇ ಸಂಕ!
Tirupati Laddu Case; ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ
Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ
Belthangady: ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.