ಅಂಜನಾಪುರ ಜಲಾಶಯಕ್ಕೆ ಸಂಸದ ಬಿವೈಆರ್ ಬಾಗಿನ ಅರ್ಪಣೆ
Team Udayavani, Jul 12, 2021, 10:52 PM IST
ಶಿಕಾರಿಪುರ: ತಾಲೂಕಿನ ಎಲ್ಲ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಒಂದು ವರ್ಷದಲ್ಲಿ ಪೂರ್ಣಗೊಳಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದಾಖಲೆ ನಿರ್ಮಿಸುವ ಜತೆಗೆ ಆಧುನಿಕ ಭಗೀರಥ ಎನಿಸಿಕೊಂಡಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ತಾಲೂಕಿನ ಅಂಜನಾಪುರ ಜಲಾಶಯಕ್ಕೆ ಭಾನುವಾರ ಬಾಗಿನ ಅರ್ಪಿಸಿ ಅವರು ಮಾತನಾಡಿದರು. ಅಂಜನಾಪುರ ಜಲಾಶಯ ಒಡೆದ ಸಂದರ್ಭದಲ್ಲಿ ಬಿಎಸ್ವೈ ಕಣ್ಣೀರು ಹಾಕಿದ್ದಲ್ಲದೆ ಸುಮ್ಮನೆ ಕೂರದೆ ಕೂಡಲೇ ಕಾರ್ಯಪ್ರವೃತ್ತರಾಗಿ ಹರಿಯುವ ನೀರು ನಿಲ್ಲಿಸುವುದಕ್ಕೆ ಶ್ರಮದಾನ ಆಯೋಜಿಸಿ ತಾತ್ಕಾಲಿಕ ಒಡ್ಡು ನಿರ್ಮಿಸಿ ರೈತರ ಭತ್ತಕ್ಕೆ ನೀರು ಒದಗಿಸುವಲ್ಲಿ ಯಶಸ್ವಿಯಾದರು.
ಜಲಾಶಯ ತುಂಬಿದಾಗ ಗೇಟ್ ತಾನಾಗಿಯೇ ತೆಗೆಯುವ ತಂತ್ರಜ್ಞಾನದ ಗೋಡ್ಬೋಲೆ ಗೇಟ್ ನಿರ್ಮಿಸಿ ಹೊಸ ತಂತ್ರಜ್ಞಾನವನ್ನು ತಾಲೂಕಿನ ಜನರಿಗೆ ಪರಿಚಯಿಸಿದರು. ಇದೀಗ ತಾಲೂಕಿನ ಎಲ್ಲಾ ಕೆರೆ ತುಂಬಿಸುವುದಕ್ಕಾಗಿ ಮೂರು ಯೋಜನೆ ರೂಪಿಸಿದ್ದು ಅವುಗಳೆಲ್ಲವೂ ಇನ್ನೊಂದು ತಿಂಗಳಲ್ಲಿ ಪೂರ್ಣಗೊಳ್ಳಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹಾರೇಗೊಪ್ಪ ಸುತ್ತಲಿನ ಗ್ರಾಮಗಳ ಕುಡಿಯುವ ನೀರಿಗಾಗಿ ಮತ್ತೂಂದು ಏತ ನೀರಾವರಿ ಯೋಜನೆ ಜಾರಿಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಎಂಎಡಿಬಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ ಮಾತನಾಡಿ, ತಾಲೂಕಿನ 6500 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಒದಗಿಸುವ ಅಂಜನಾಪುರ ಜಲಾಶಯದಿಂದ ಶಿಕಾರಿಪುರ, ಶಿರಾಳಕೊಪ್ಪ ಪಟ್ಟಣಕ್ಕೆ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ.
ಅಂಜನಾಪುರ ಜಲಾಶಯಕ್ಕೆ ತುಂಗಾ ನದಿಯಿಂದ ನೀರು ತರುವ ಹೊಸಳ್ಳಿ ಏತ ನೀರಾವರಿ ಕಾಮಗಾರಿ ಭರದಿಂದ ಸಾಗಿದ್ದು ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ. ತಾಲೂಕಿನ ಜನರಿಗೆ ಚುನಾವಣೆಯಲ್ಲಿ ಹೆಂಡ, ಹಣ ಹಂಚಿ ರಾಜಕೀಯ ಮಾಡುವುದಕ್ಕಿಂತಲೂ ಜನತೆ ನಿರಂತರವಾಗಿ ನೀರು ನೀಡುವ ಕೆಲಸ ಮಾಡಿರುವ ಬಿಎಸ್ವೈ ಅಭಿನಂದನಾರ್ಹರು.
ತಾಲೂಕಿನಲ್ಲಿ ಇಷ್ಟೆಲ್ಲಾ ಅಭಿವೃದ್ಧಿ ಕೆಲಸ ಆಗಿದ್ದರೂ ಟೀಕೆ ಮಾಡುವವರೂ ಇದ್ದಾರೆ. ಅವರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಕಾರ್ಯಕರ್ತರು ಮಾಡಬೇಕು ಎಂದರು. ಸಂಸದರ ಪತ್ನಿ ತೇಜಸ್ವಿನಿ, ಅಪರ್ಣ, ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಕೆ. ರೇವಣಪ್ಪ, ತಾಪಂ ಅಧ್ಯಕ್ಷ ಸುರೇಶ್ ನಾಯ್ಕ, ನೀರಾವರಿ ಇಲಾಖೆ ಅ ಧಿಕಾರಿ ಯತೀಶ್ಚಂದ್ರ, ಮುಖಂಡರಾದ ಚುರ್ಚಿಗುಂಡಿ ಶಶಿಧರ, ಟಿ.ಎಸ್. ಮೋಹನ್, ನಿವೇದಿತಾ, ಕೆ. ಹಾಲಪ್ಪ, ಸುಕೇಂದ್ರಪ್ಪ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.