ವಿವಿಧ ರೈಲ್ವೆ ಅಭಿವೃದ್ಧಿ ಕಾಮಗಾರಿಗೆ ರಾಘವೇಂದ್ರ ಮನವಿ


Team Udayavani, Aug 5, 2021, 6:48 PM IST

5-16

ಶಿವಮೊಗ್ಗ: ವಿವಿಧ ರೈಲ್ವೆ ಅಭಿವೃದ್ಧಿ ಕಾಮಗಾರಿಗಳ ಸಂಬಂಧ ಸಂಸದ ಬಿ.ವೈ. ರಾಘವೇಂದ್ರ ಮಂಗಳವಾರ ಕೇಂದ್ರ ರೈಲ್ವೆ ಸಚಿವರಾದ ಅಶ್ವಿ‌ನಿ ವೈಷ್ಣವ್‌ ಅವರಿಗೆ ಮನವಿ ಸಲ್ಲಿಸಿದರು. 76 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ ಹತ್ತಿರದ ಕೋಟೆಗಂಗೂರಿನಲ್ಲಿ ರೈಲ್ವೆ ಕೋಚಿಂಗ್‌ ಡಿಪೋ ನಿರ್ಮಿಸಲು ಈಗಾಗಲೇ ಕೇಂದ್ರ ಸರ್ಕಾರ ಮಂಜೂರಾತಿ ನೀಡಿದ್ದು, ರಾಜ್ಯ ಸರ್ಕಾರ 43.14 ಎಕರೆ ಭೂಮಿಯನ್ನು 10 ಕೋಟಿ ರೂ. ವೆಚ್ಚದಲ್ಲಿ ಸಾರ್ವಜನಿಕರಿಂದ ಖರೀದಿಸಿ ನೀಡಲಾಗುತ್ತಿದ್ದು, ರೈಲ್ವೆ ಇಲಾಖೆಯು ಈಗಾಗಲೇ ಯೋಜನೆಯ ಪ್ರಾಥಮಿಕ ಹಂತದ ಕಾಮಗಾರಿಗಳ ಅನುಷ್ಠಾನಕ್ಕೆ ಏಜೆನ್ಸಿಯನ್ನು ನಿಗದಿಪಡಿಸಿದೆ.

ಆದಷ್ಟು ಬೇಗನೇ ರೈಲ್ವೆ ಇಲಾಖೆಯ ವತಿಯಿಂದ 21 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಬೇಕಾಗಿರುವ ರೈಲ್ವೆ ಕೋಚಿಂಗ್‌ ಡಿಪೋ ನಿರ್ಮಾಣ ಕಾರ್ಯವನ್ನು ಆದಷ್ಟು ತ್ವರಿತವಾಗಿ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು. ರಾಜ್ಯ ಸರ್ಕಾರ ಶಿವಮೊಗ್ಗ-ಶಿಕಾ ರಿಪುರ-ರಾಣಿಬೆನ್ನೂರು ಹೊಸ ರೈಲ್ವೆ ಮಾರ್ಗಕ್ಕೆ ಶೇ.50ರಷ್ಟು ಅನುದಾನವನ್ನು ನೀಡುತ್ತಿದ್ದು, ಈಗಾಗಲೇ ಅಗತ್ಯವಿರುವ 427 ಎಕರೆ ಭೂ ಸ್ವಾ ಧೀನ ಪೈಕಿ ಈಗಾಗಲೇ 378 ಎಕರೆ ಭೂಮಿಯನ್ನು ಸ್ವಾ ಧೀನಪಡಿಸಿಕೊಳ್ಳಲಾಗಿದ್ದು, ರೈಲ್ವೆ ಇಲಾಖೆಯಿಂದ ಆದಷ್ಟು ಬೇಗನೇ 2021-22ರ ಕೇಂದ್ರ ಆಯವ್ಯಯದಲ್ಲಿ ಘೋಷಿಸಿರುವಂತೆ 100 ಕೋಟಿ ರೂ. ವೆಚ್ಚದಲ್ಲಿ ಮೊದಲ ಹಂತದ ಕಾಮಗಾರಿ ಅನುಷ್ಠಾನಕ್ಕೆ ಟೆಂಡರ್‌ ಆಹ್ವಾನಿಸುವಂತೆ ಮನವಿ ಮಾಡಿದರು.

ಜಗತ್ಪಸಿದ್ದ ಜೋಗ ಜಲಪಾತಕ್ಕೆ ಗೇಟ್‌ವೇ ಎನಿಸಿರುವ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜಂಬಗಾರು ರೈಲ್ವೆ ನಿಲ್ದಾಣದ ಸಮಗ್ರ ಅಭಿವೃದ್ಧಿಯಾಗಬೇಕಿದ್ದು, ಈ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ, ಹೊಸ ರೈಲ್ವೆ ನಿಲ್ದಾಣ ಕಟ್ಟಡ ಹಾಗೂ 2ನೇ ಫ್ಲಾಟ್‌ ಫಾರಂ ಸೇರಿದಂತೆ ಇನ್ನಿತರೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವಂತೆ ಕೋರಿದರು. 2019ರಲ್ಲಿ ಶಿವಮೊಗ್ಗದಿಂದ ರೇಣಿಗುಂಟ ಮತ್ತು ಚೆನ್ನೆ çಗೆ ವಾರದಲ್ಲಿ ಎರಡು ದಿನಗಳ ಎರಡು ಹೊಸ ರೈಲುಗಳ ಓಡಾಟ ಪ್ರಾರಂಭಿಸಲಾಗಿತ್ತಾದರೂ, ಈ ರೈಲುಗಳ ಸಮಯವು ಸೂಕ್ತವಾಗಿರದ ಕಾರಣ, ಪ್ರಯಾಣಿಕರಿಗೆ ಅನುಕೂಲಕರ ವಾಗಿರುವುದಿಲ್ಲ.

ಆದ್ದರಿಂದ ಈ ಎರಡೂ ರೈಲುಗಳನ್ನು ಒಗ್ಗೂಡಿಸಿ ವಾರದಲ್ಲಿ ನಾಲ್ಕು ದಿನಗಳು ಶಿವಮೊಗ್ಗದಿಂದ ಚೆನ್ನೆ ಗೆ ರೇಣಿಗುಂಟ ಮಾರ್ಗವಾಗಿ ಚಲಿಸುವಂತೆ ಮಾಡಿದ್ದಲ್ಲಿ, ಪ್ರಯಾಣಿಕರಿಗೆ ಅನುಕೂಲವಾಗುತ್ತದೆ ಎಂಬ ಅಂಶವನ್ನು ಸಭೆಯ ಗಮನಕ್ಕೆ ತಂದರು.

ಪ್ರಸಿದ್ಧ ಯಾತ್ರಾ ಸ್ಥಳವಾದ ಕೊಲ್ಲೂರಿನ ಮೂಕಾಂಬಿಕ ದೇವಸ್ಥಾನಕ್ಕೆ ಹೋಗುವವರಿಗೆ ಇಳಿಯಲು ಮುಕಾಂಬಿಕ ರೋಡ್‌ ಬೈಂದೂರು ರೈಲ್ವೆ ನಿಲ್ದಾಣವು ಹತ್ತಿರದ ಸ್ಟೇಷನ್‌ ಆಗಿದ್ದು, ಗರೀಬ್‌ ರಥ್‌ ಎಕ್ಸೆಸ್‌ ರೈಲಿಗೆ ಈ ನಿಲ್ದಾಣಕ್ಕೆ ನಿಲುಗಡೆಯನ್ನು ನೀಡಿದ್ದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರಿಗೆ ಇಲ್ಲಿ ಇಳಿದು ಕೊಲ್ಲೂರಿಗೆ ತೆರಳಲು ಅತ್ಯಂತ ಉಪಯುಕ್ತ ಆಗುವುದನ್ನು ಸಭೆಯ ಗಮನಕ್ಕೆ ತರಲಾಯಿತು.

ಈ ಬಗ್ಗೆ ಆದಷ್ಟು ತ್ವರಿತವಾಗಿ ನಿಲುಗಡೆ ನೀಡುವ ವ್ಯವಸ್ಥೆಗೆ ಕ್ರಮ ಕೈಗೊಳ್ಳುವುದಾಗಿ ರೈಲ್ವೆ ಸಚಿವರು ಭರವಸೆ ನೀಡಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.