ರೈತರ ಹಿತ ಕಾಪಾಡುವಲ್ಲಿ ಶಾಸಕರು ವಿಫಲ: ಶ್ರೀನಿವಾಸ್‌

ಸಾಗರ

Team Udayavani, Feb 7, 2021, 6:23 PM IST

7-34

ಸಾಗರ: ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಹಿತ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿರುವಂತೆ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಎಚ್‌.ಹಾಲಪ್ಪ ಹರತಾಳು ಸಹ ರೈತರ ಬಗ್ಗೆ ಕಿಂಚಿತ್‌ ಕಾಳಜಿ ಇಲ್ಲದಂತೆ ವರ್ತಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ಮಾಜಿ ಜಿಲ್ಲಾಧ್ಯಕ್ಷ ತೀ.ನ. ಶ್ರೀನಿವಾಸ್‌ ದೂರಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ 24 ಸಾವಿರಕ್ಕೂ ಹೆಚ್ಚು ಬಗರ್‌ಹುಕುಂ ಅರ್ಜಿಗಳು ಬಾಕಿ ಇವೆ. ಬಗರ್‌ಹುಕುಂ ಸಮಿತಿ
ರಚನೆಯಾಗಿ ವರ್ಷ ಕಳೆಯುತ್ತಾ ಬಂದಿದೆ. ಒಂದು ಬಾರಿ ಮಾತ್ರ ಸಮಿತಿ ಸಭೆ ಸೇರಿದ್ದು, ಈತನಕ ಒಂದು ಅರ್ಜಿಯನ್ನು ಸಹ ವಿಲೇವಾರಿ ಮಾಡಿಲ್ಲ. ಹೊಸನಗರದಲ್ಲಿ 20 ಸಾವಿರ ಬಗರ್‌ಹುಕುಂ ಅರ್ಜಿ ವಿಲೇಯಾಗದೆ ಹಾಗೆ ಬಾಕಿ ಉಳಿದಿದೆ ಎಂದು ಹೇಳಿದರು.

ಫಾರಂ ನಂ. 53ಗೆ ಸಂಬಂಧಪಟ್ಟ 500 ಅರ್ಜಿ ವಿಲೇವಾರಿಯಾಗಿಲ್ಲ. ಉಪವಿಭಾಗಾಧಿ ಕಾರಿಗಳ ಕಚೇರಿಯಲ್ಲಿ 800ಕ್ಕೂ ಹೆಚ್ಚು ಅರ್ಜಿಗಳಿದ್ದು ಅದನ್ನು ವಿಲೇವಾರಿ ಮಾಡಿಲ್ಲ. 94ಸಿ ಅಡಿಯಲ್ಲಿ ಸರ್ಕಾರಿ ಜಾಗ ಸಕ್ರಮಗೊಳಿಸುವ ಸುಮಾರು 4 ಸಾವಿರ ಅರ್ಜಿಯಿದ್ದು ಅದರ ಬಗ್ಗೆ ಶಾಸಕರ ಗಮನ ಹರಿಸಿಲ್ಲ. ಅರಣ್ಯಹಕ್ಕು ಕಾಯ್ದೆಯಡಿ ಒಂದೂ ಹಕ್ಕುಪತ್ರವನ್ನು ನೀಡಿಲ್ಲ. ಒಟ್ಟಾರೆ ಶಾಸಕರು ಗ್ರಾಮೀಣ ಭಾಗದ ರೈತರನ್ನು ಕಚೇರಿ ಅಲೆಯುವ ಸ್ಥಿತಿಗೆ ತಂದು ನಿಲ್ಲಿಸಿದ್ದಾರೆ.  ರೈತರಿಗೆ ನ್ಯಾಯ ದೊರಕಿಸಿಕೊಡುವ ಕೆಲಸವನ್ನು ಶಾಸಕ ಹಾಲಪ್ಪ ಮಾಡುತ್ತಿಲ್ಲ ಎಂದು ಹೇಳಿದರು.

ತಾಲೂಕಿನ ತಹಶೀಲ್ದಾರ್‌ ಕಚೇರಿ, ಸರ್ವೇ ಕಚೇರಿ, ನಗರಸಭೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಶಾಸಕರೇ ಸಾರ್ವಜನಿಕವಾಗಿ ಹೇಳುತ್ತಿದ್ದಾರೆ. ಆದರೆ ಈತನಕ ಭ್ರಷ್ಟಾಚಾರವನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಾಸಕರು ಏನು ಕ್ರಮ ಕೈಗೊಂಡಿದ್ದಾರೆ ಎಂದು ಸಾರ್ವಜನಿಕರಿಗೆ ತಿಳಿಸಬೇಕು ಎಂದು ಒತ್ತಾಯಿಸಿದ ತೀ.ನ., ಆಶ್ರಯ ಲೇಔಟ್‌ಗಳಲ್ಲಿ ರಿಯಲ್‌ ಎಸ್ಟೇಟ್‌ ಮಾಫಿಯಾದವರು ಅಕ್ರಮ ನಡೆಸಿದ್ದಾರೆ ಎಂದು ಶಾಸಕರು ಆರೋಪಿಸಿದ್ದಾರೆ.

ಇದರ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿ ಸಲಿ ಎಂದು ಸವಾಲು ಹಾಕಿದರು. ತಹಶೀಲ್ದಾರ್‌ ಕಚೇರಿಯಲ್ಲಿ ಎರಡು ಮೂರು ಜನ ತಹಶೀಲ್ದಾರರಾಗಿದ್ದಾರೆ. ಅಧಿಕೃತ ತಹಶೀಲ್ದಾರ್‌ಗೆ ಯಾವ ಮಾಹಿತಿಯೂ ಇರುವುದಿಲ್ಲ. ಯಾರೂ ಆಸಕ್ತಿವಹಿಸಿ ಕೆಲಸ ಮಾಡುತ್ತಿಲ್ಲ. ಅಧಿ ಕಾರಿಗಳ ಮೇಲೆ ಶಾಸಕರ ನಿಯಂತ್ರಣ ಇಲ್ಲದೆ ಇರುವುದೇ ಇದಕ್ಕೆ ಕಾರಣವಾಗಿದೆ. ಶಾಸಕರು ಆಡಳಿತ ವ್ಯವಸ್ಥೆಯನ್ನು ಸರಿಪಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಆಡಳಿತ ವೈಫಲ್ಯ ಖಂಡಿಸಿ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಗೋಷ್ಠಿಯಲ್ಲಿ ಎಲ್‌.ವಿ. ಸುಭಾಷ್‌, ವಸಂತ ಶೇಟ್‌, ರವಿ ಜಂಬಗಾರು, ಮಹಾಬಲೇಶ್ವರ ಶೇಟ್‌ ಇದ್ದರು.

ಓದಿ :ಉತ್ತರಾಖಂಡ ಹಿಮಪಾತ; ಪ್ರವಾಹ ಪೀಡಿತರ ರಕ್ಷಣೆಗೆ ಕೇಂದ್ರ ಸಿದ್ಧ: ಅಮಿತ್ ಶಾ

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

sagara

Sagara: ಕಾಡಾನೆಗಳ ಹಾವಳಿ; ಲಕ್ಷಾಂತರ ರೂ. ಬೆಳೆ ನಷ್ಟ

19-thirthahalli

Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು

1-edd

Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.