ಚರ್ಚೆಗೆ ಗ್ರಾಸವಾದ ಮಾರುಕಟ್ಟೆ ಲೀಸ್‌ ಅವಧಿ ಏರಿಕೆ


Team Udayavani, Apr 11, 2021, 6:23 PM IST

11-22

ಶಿವಮೊಗ್ಗ: ಇಲ್ಲಿನ ಶಿವಪ್ಪ ನಾಯಕ ಮಾರುಕಟ್ಟೆ (ಸಿಟಿ ಸೆಂಟರ್‌) ಗುತ್ತಿಗೆ ಅವ ಧಿ ಮುಗಿಯುವ ಮೊದಲೇ 99 ವರ್ಷಕ್ಕೆ ಏರಿಸಲು ಪಾಲಿಕೆ ಅಜೆಂಡಾದಲ್ಲಿ ಪ್ರಸ್ತಾಪಿಸಿರುವುದು ಹಾಗೂ ಈ ವಿಷಯ ಮೇಯರ್‌ ಅವರಿಗೇ ಗೊತ್ತಿಲ್ಲದಿರುವುದು ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಸಿಟಿ ಸೆಂಟರ್‌ ಮಾಲ್‌ ಅನ್ನು ಖಾಸಗಿ ಸಂಸ್ಥೆಯೊಂದಕ್ಕೆ 2 ವರ್ಷ ನಿರ್ಮಾಣ ಕಾಮಗಾರಿ ಸೇರಿ 32 ವರ್ಷಕ್ಕೆ ಲೀಸ್‌ ನೀಡಲಾಗಿತ್ತು. ಅದರಲ್ಲಿ ಈಗ 12 ವರ್ಷ ಪೂರ್ಣಗೊಂಡಿದೆ. ಇನ್ನೂ 20 ವರ್ಷ ಅವಧಿ ಬಾಕಿ ಇರುವಾಗಲೇ ಮಹಾನಗರ ಪಾಲಿಕೆ ಸಭೆಯ ಅಜೆಂಡಾದಲ್ಲಿ ಈ ವಿಷಯ ಸೇರಿಸಿರುವುದು ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ಆಕ್ರೋಶಕ್ಕೆ ಕಾರಣವಾಗಿದೆ.

ಅಲ್ಲದೆ ಗಮನಕ್ಕಿಲ್ಲದೆ ಈ ವಿಷಯ ಚರ್ಚೆಗೆ ಅಂಜೆಡಾದಲ್ಲಿ ಸೇರಿಸಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಯಾವುದೇ ವಿಷಯ ಅಜೆಂಡಾದಲ್ಲಿ ಸೇರ್ಪಡೆಯಾಗಬೇಕಾದರೆ ನಿಯಮದ ಪ್ರಕಾರ, ಮೇಯರ್‌ ಇಲ್ಲವೇ ಆಯುಕ್ತರಿಂದ ಅನುಮೋದನೆಗೊಳ್ಳಲೇಬೇಕು. ನಂತರ, ಅದನ್ನು ಕೌನ್ಸಿಲ್‌ ಕಾರ್ಯದರ್ಶಿಗಳು ಗಮನಿಸಬೇಕು. ಬೇಡದ ವಿಚಾರಗಳಿದ್ದರೆ ಅದನ್ನು ಅಲ್ಲಿಯೇ ಕೈಬಿಡಲಾಗುತ್ತದೆ. ಈ ಎರಡೂ ಹಂತಗಳನ್ನು ದಾಟಿ ಈ ವಿಷಯ ಅಜೆಂಡಾದಲ್ಲಿ ಜಾಗ ಪಡೆದಿದ್ದು ಹೇಗೆ ಎಂಬ ಪ್ರಶ್ನೆ ಈಗ ಉದ್ಭವಿಸಿದೆ.

2020 ರಲ್ಲಿ ನಡೆದ ತೆರಿಗೆ ಸ್ಥಾಯಿ ಸಮಿತಿಯಲ್ಲಿ ಈ ವಿಚಾರ ಆಗಿನ ಮೇಯರ್‌ ಅವರ ಗಮನಕ್ಕೆ ತರದೇ ಅಜೆಂಡಾಗೆ ಸೇರಿಸಲಾಗಿತ್ತು. ಭಾರಿ ಚರ್ಚೆಯ ಬಳಿಕ ಅದನ್ನು ಅಲ್ಲಿಗೆ ಕೈ ಬಿಡಲಾಗಿತ್ತು. ಈಗ ಮತ್ತೆ ಇದು ಮುನ್ನೆಲೆಗೆ ಬಂದಿದೆ. ಪ್ರತಿಪಕ್ಷದವರು ಆಡಳಿತ ಪಕ್ಷದ ಮೇಲೆ ಆರೋಪ ಮಾಡುತ್ತಿದ್ದು, ಆಡಳಿತ ಪಕ್ಷದವರು ಅ ಧಿಕಾರಿಗಳ ತಪ್ಪಿನಿಂದ ಈ ಕೆಲಸ ಆಗಿದೆ ಎಂದು ಜಾರಿಕೊಳ್ಳುತ್ತಿದ್ದಾರೆ.

ಆದರೆ, ಯಾವ ಉದ್ದೇಶಕ್ಕಾಗಿ ಈ ವಿಷಯ ಪದೇ ಪದೆ ಅಜೆಂಡಾದಲ್ಲಿ ಸೇರ್ಪಡೆಯಾಗುತ್ತಿದೆ ಎಂಬುದು ಯಕ್ಷಪ್ರಶ್ನೆಯಾಗಿದೆ. ಪಾಲಿಕೆಯಲ್ಲಿ ಗುರುವಾರ ಜಿಲ್ಲಾವಾಣಿಜ್ಯ ಮತ್ತು ಕೈಗಾರಿಕಾ ಸಂಘಗಳು ಹಾಗೂ ಪಾಲಿಕೆಯ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆದಿತ್ತು. ಆಗ ಲೀಸ್‌ ಅವ ಧಿ 99 ವರ್ಷಕ್ಕೆ ವಿಸ್ತರಣೆ ಮಾಡುವ ವಿಚಾರ ಅಜೆಂಡಾದಲ್ಲಿರುವುದು ಗಮನಕ್ಕೆ ಬಂದಿದೆ. ಆದರೆ, ಮೇಯರ್‌ ಅವರು ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗದು ಎಂದು ಕೈಬಿಟ್ಟಿದ್ದಾರೆ.

ಟಾಪ್ ನ್ಯೂಸ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

4-sakleshpura

Sakleshpura: ಸತ್ತ ಕೋಳಿ ಬಾಯಲ್ಲಿ ಬೆಂಕಿ! ಗ್ರಾಮಸ್ಥರಿಗೆ ಅಚ್ಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

sagara

Sagara: ಕಾಡಾನೆಗಳ ಹಾವಳಿ; ಲಕ್ಷಾಂತರ ರೂ. ಬೆಳೆ ನಷ್ಟ

19-thirthahalli

Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು

1-edd

Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು

9

Shivamogga: ಅಯೋಧ್ಯೆ ರೀತಿ ವ‌ಕ್ಫ್ ಹಗರಣಕ್ಕೂ ನ್ಯಾಯ ಸಿಕ್ಕೇ ಸಿಗುತ್ತದೆ; ಈಶ್ವರಪ್ಪ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

1

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.