Shivamogga: ಉಚಿತ ಪ್ರವಾಸ ಆಮಿಷವೊಡ್ಡಿ ವಂಚನೆ ಪತ್ತೆ


Team Udayavani, Jul 24, 2024, 8:36 AM IST

3-shivamogga

ಶಿವಮೊಗ್ಗ: “ಮೇಕ್‌ ಫ್ರೀ ಟ್ರಿಪ್‌, ಮೇಕ್‌ ಫ್ರೀ ಮನಿ’ ಎಂಬ ಕಂಪೆನಿ ಹೆಸರಿನಲ್ಲಿ ಉಚಿತವಾಗಿ ಪ್ರವಾಸ ಕರೆದುಕೊಂಡು ಹೋಗುವ ಭರವಸೆ ನೀಡಿ ವಂಚಿಸುತ್ತಿದ್ದ ಜಾಲವನ್ನು ಜಯನಗರ ಠಾಣೆ ಪೊಲೀಸರು ಬಯಲಿಗೆ ಎಳೆದಿದ್ದಾರೆ.

ಕಿಶೋರ್‌ ಕುಮಾರ್‌ ಎಂಬುವವರಿಗೆ ನಾಗರಾಜ್‌ ಎಂಬವರು ನೀವು 9 ಸಾವಿರ ರೂ. ಕಟ್ಟಿ ಸದಸ್ಯರಾಗಿ, ಆರು ಜನರನ್ನು ಸೇರಿಸಿದರೆ ಹೊರರಾಜ್ಯಕ್ಕೆ ಉಚಿತವಾಗಿ ಕರೆದುಕೊಂಡು ಹೋಗುತ್ತೇವೆ, ಜತೆಗೆ 9 ಸಾವಿರ ರೂ. ವಾಪಸ್‌ ಕೊಡುತ್ತೇವೆ. 90 ಸಾವಿರ ರೂ. ಹೂಡಿಕೆ ಮಾಡಿದರೆ ಬೆಂಗಳೂರಿನಿಂದ ಮುಂಬೈಗೆ ಕರೆದುಕೊಂಡು ಹೋಗಿ ಅಲ್ಲಿ ಕ್ರೂಜ್‌ ಮೂಲಕ ಗೋವಾಗೆ 2 ರಾತ್ರಿ, ಮೂರು ಹಗಲು ಉಚಿತವಾಗಿ ಟ್ರಿಪ್‌ ಕರೆದುಕೊಂಡು ಹೋಗುತ್ತೇವೆ. ಅಲ್ಲದೇ ಹಣ ಹೂಡಿಕೆ ಮಾಡಿದ್ದಕ್ಕೆ ಪ್ರತಿಫಲವಾಗಿ ಪ್ರತಿ ತಿಂಗಳು 6 ಸಾವಿರ ರೂ., ನಂತರ 33 ತಿಂಗಳು 1.98 ಲಕ್ಷ ರೂ. ವಾಪಸ್‌ ಕೊಡುವುದಾಗಿ ನಂಬಿಸಿ ಮೋಸ ಮಾಡಿದ್ದ ಬಗ್ಗೆ ದೂರು ದಾಖಲಾಗಿತ್ತು.

ಅಲ್ಲದೇ ನಾಗರಾಜ್‌ ಜತೆಗೆ ಉಳಿದ ಆರೋಪಿಗಳಾದ ಮಹಮ್ಮದ್‌ ಲತೀಫ್‌, ಕಿಶೋರ್‌ ಬಿ.ಕೆ., ಮಹಮ್ಮದ್‌ ಅಶ್ರಫ್‌ ಅವರು ಖಾಸಗಿ ಹೋಟೆಲ್‌ಗ‌ಳಲ್ಲಿ ಸಾರ್ವಜನಿಕರನ್ನು ಸೇರಿಸಿ ಕಾರ್ಯಕ್ರಮ ಮಾಡಿ ನಂಬಿಕೆ ಹುಟ್ಟಿಸಿದ್ದರು. ಅವರ ಮಾತು ನಂಬಿ ಕಿಶೋರ್‌ ಕುಮಾರ್‌ ಅವರು ನಗದು ರೂಪದಲ್ಲಿ 7.52 ಲಕ್ಷ ರೂ., ಕಿಶೋರ್‌ ಖಾತೆಗೆ ಫೋನ್‌ ಪೇ, ಗೂಗಲ್‌ ಪೇ ಮೂಲಕ 1.16 ಲಕ್ಷ ರೂ., ಮಹಮದ್‌ ಆಶ್ರಫ್‌ ಬ್ಯಾಂಕ್‌ ಖಾತೆಗೆ 1ಲಕ್ಷ ರೂ. ಹಾಗೂ ಮಹಮದ್‌ ಲತೀಫ್‌ ಅವರ ಹೆಂಡತಿ ಫಾತೀಮಾ ಬ್ಯಾಂಕ್‌ ಖಾತೆಗೆ 2.80 ಲಕ್ಷ ರೂ. ಹಾಕಿದ್ದರು.

ಅನಂತರ ಕಿಶೋರ್‌ ಕುಮಾರ್‌ ಹಾಗೂ ಅವರು ಕುಟುಂಬದವರಿಗೆ ಒರಿಸ್ಸಾ ಹಾಗೂ ಗೋವಾಕ್ಕೆ ಪ್ರವಾಸ ಕರೆದುಕೊಂಡು ಹೋಗಿದ್ದರು ಹಾಗೂ ಕಂಪೆನಿಯಿಂದ 12 ಸಾವಿರ ರೂ. ಮಾತ್ರ ವಾಪಸ್‌ ಕೊಟ್ಟಿದ್ದರು. ಕಿಶೋರ್‌ ಕುಮಾರ್‌ ಅವರಂತೆ ಪ್ರಸನ್ನ ಎಂಬುವರು 90 ಸಾವಿರ ರೂ., ಗೈಬಾನ್‌ ಖಾನ್‌ 1.80 ಲಕ್ಷ ರೂ, ದೊಡ್ಡವೀರಪ್ಪ 2.18 ಲಕ್ಷ ರೂ., ಮೋಹನ್‌ 4.85 ಲಕ್ಷ ರೂ., ಶಿವಶಂಕರ ಶಾಸ್ತಿÅ 2.13 ಲಕ್ಷ ರೂ., ಗಂಗಾವತಿ 45 ಸಾವಿರ ರೂ., ರಮೇಶ 9 ಸಾವಿರ ರೂ., ಅಬ್ದುಲ್‌ ಮುತಲಬ್‌ 9 ಸಾವಿರ ರೂ. ಹೂಡಿಕೆ ಮಾಡಿದ್ದು ಅವರಿಗೂ ಸಹ ಹಣ ವಾಪಸ್‌ ಬಂದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕಂಪೆನಿಗೆ ಹೂಡಿಕೆ ಮಾಡಿ ಮೋಸ ಹೋದವರು ಯಾರಾದರೂ ಇದ್ದಲ್ಲಿ ಠಾಣೆಗೆ ಭೇಟಿ ನೀಡಿ ಮಾಹಿತಿ ನೀಡುವಂತೆ ಜಯನಗರ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK-Shiavamogga

Industry: ಕುದುರೆಮುಖದ ಕಂಪನಿಗೆ ದಿನಕ್ಕೆ 27 ಕೋಟಿ ರೂ.ನಷ್ಟ: ಎಚ್‌.ಡಿ.ಕುಮಾರಸ್ವಾಮಿ

Beluru

Shivamogga: ಸಾಗರ ಜನರಲ್ ಆಸ್ಪತ್ರೆ ಮೇಲ್ದರ್ಜೆಗೆ, ನೂರು ಹಾಸಿಗೆ ವ್ಯವಸ್ಥೆ: ಶಾಸಕ ಬೇಳೂರು

Shimoga; ಕೆಂಪಣ್ಣ ಆಯೋಗ ವರದಿ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಲಿ: ಕುಮಾರಸ್ವಾಮಿ

Shimoga; ಕೆಂಪಣ್ಣ ಆಯೋಗ ವರದಿ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಲಿ: ಕುಮಾರಸ್ವಾಮಿ

Theertha-Land

Landslide: ಆಗುಂಬೆ ಬಳಿಯ ಕಾರ್ ಬೈಲು ಗುಡ್ಡ ಕುಸಿತ!

Theerthalli

Theerthahalli: ವಾಹನ ಚಲಾಯಿಸುವ ವೇಳೆಯೇ ಕುಸಿದು ಬಿದ್ದು ಯುವಕ ದುರ್ಮರಣ!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.