ಭಾರತ ವಿಶ್ವದಲ್ಲೇ ಸುರಕ್ಷಿತ ರಾಷ್ಟ್ರ


Team Udayavani, Aug 22, 2021, 6:51 PM IST

22-16

ಶಿವಮೊಗ್ಗ : ವಿಶ್ವದಲ್ಲಿಯೇ ಭಾರತ ಸುರಕ್ಷಿತ ರಾಷ್ಟ್ರ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು. ಸ್ವಾತಂತತ್ರ್ಯ ದ ಅಮೃತ ಮಹೋತ್ಸದ ಅಂಗವಾಗಿ ಬಿಜೆಪಿ ನಗರ ಯುವ ಮೋರ್ಚಾ ವತಿಯಿಂದ ಶನಿವಾರ ಆಯೋಜಿಸಿದ್ದ ಸೈಕಲ್‌ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಗತ್ತಿನ ರಾ ರಾಷ್ಟ್ರಗಳಲ್ಲಿ ಭಾರತ ಶಾಂತಿಪ್ರಿಯ ದೇಶವಾಗಿದೆ. ಇಲ್ಲಿ ಧರ್ಮಗಳ ಮಧ್ಯೆ ಪ್ರೀತಿ, ಮಾನವೀಯತೆ ಇದೆ.

ಇಲ್ಲಿ ಜೀವಿಸುವುದೇ ನಮ್ಮ ಪುಣ್ಯ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ ಉಗ್ರರ ಚಟುವಟಿಕೆಗಳನ್ನು ಕಂಡರೆ ಇದು ಅರ್ಥವಾಗುತ್ತದೆ. ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ ಹೆಚ್ಚಾಗುತ್ತಿದೆ. ಇಡೀ ಜಗತ್ತು ತಲೆ ತಗ್ಗಿಸುವಂತಹ ಕೆಲಸ ನಡೆಯುತ್ತಿದೆ. ಕ್ರೂರತೆ ಅಲ್ಲಿ ವಿಜೃಂಭಿಸುತ್ತಿದ್ದು, ಮಾನವೀಯತೆ ಮರೆಯಾಗಿದೆ. ಇದನ್ನೆಲ್ಲ ನೋಡಿದರೆ, ಭಾರತ ಅತ್ಯಂತ ಸುರಕ್ಷಿತ ರಾಷ್ಟ್ರ ಎಂದರು.

ದೇಶ ಸ್ವಾತಂತ್ರ್ಯ ಪಡೆದು 2047 ಕ್ಕೆ 100 ವರ್ಷ ಆಗಲಿರುವುದರಿಂದ ಮಾದರಿ ರಾಷ್ಟ್ರ ನಿರ್ಮಾಣ ಮಾಡಲು ಎಲ್ಲರೂ ಪಾಲ್ಗೊಳ್ಳುವಂತೆ ಕರೆ ನೀಡಿದ ಅವರು, ಸ್ವಾತಂತ್ರ್ಯ ದ ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿಯೂ ದೇಶದಲ್ಲಿ ಉಗ್ರಗಾಮಿಗಳು, ದೇಶದ್ರೋಹಿಗಳು ಅಲ್ಲಲ್ಲಿ ಅಡಗಿ ಕುಳಿತಿದ್ದಾರೆ. ಅವರನ್ನು ಸದೆ ಬಡಿಯುವ ಕೆಲಸವೂ ಆಗಬೇಕಿದೆ ಎಂದರು. ಯುವ ಸಮುದಾಯದಲ್ಲಿ ರಾಷ್ಟ್ರ ಭಕ್ತಿ ಬೆಳೆಸಲು ಹಾಗೂ ಸ್ವಾತಂತ್ರ್ಯ ಹೋರಾಟದ ಮಹತ್ವ ತಿಳಿಸುವ ಸಲುವಾಗಿ ಹೃದಯದಲ್ಲಿ ರಾಷ್ಟ್ರ ಭಕ್ತಿಯೊಂದಿಗೆ ಸೈಕಲ್‌ ಜಾಥಾ ನಡೆಸಲಾಗುತ್ತಿದೆ.

ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಯಶಸ್ವಿಗೊಳಿಸುವಂತೆ ತಿಳಿಸಿದರು. ವಿಶ್ವದಲ್ಲಿಯೇ ಭಾರತ ಶಾಂತಿಪ್ರಿಯ ರಾಷ್ಟ್ರ ವಾಗಿದೆ. ನಾವಾಗಿ ನಾವು ಯಾರ ತಂಟೆಗೂ ಹೋಗುವುದಿಲ್ಲ. ಆದರೆ, ನಮ್ಮ ಸುದ್ದಿಗೆ ಬಂದರೆ ಬಿಡುವುದಿಲ್ಲ ಎಂಬ ಸಂದೇಶವನ್ನು ಈಗಾಗಲೇ ನೀಡಲಾಗಿದೆ. ಮುಂದೆಯೂ ನಮ್ಮ ತಂಟೆಗೆ ಬರುವವರಿಗೆ ತಕ್ಕ ಉತ್ತರ ನೀಡಲಾಗುತ್ತದೆ ಎಂದರು.

ಅಫ್ಘಾನಿಸ್ಥಾನದಲ್ಲಿ ಏನಾಗುತ್ತಿದೆ ಎಂಬುದನ್ನು ಇಡೀ ಜಗತ್ತು ನೋಡುತ್ತಿದೆ. ಮಕ್ಕಳು, ಮಹಿಳೆಯರು ಹಾಗೂ ಅಲ್ಲಿನ ದೇಶಭಕ್ತರ ಮೇಲೆ ನಿರಂತರವಾಗಿ ತಾಲಿಬಾನಿಗಳು ದೌರ್ಜನ್ಯ ನಡೆಸುತ್ತಿದ್ದಾರೆ. ಹಿಂದಿನಿಂದಲೂ ಉಗ್ರಗಾಮಿಗಳನ್ನು ಬೆಂಬಲಿಸಿಕೊಂಡು ಬಂದಿರುವ ದೇಶದಲ್ಲಿನ ಕೆಲವು ಸ್ವಯಂಘೋಷಿತ ಬುದ್ಧಿಜೀವಿಗಳು, ವಿಚಾರವಾದಿಗಳು ಇದರ ಬಗ್ಗೆ ಈಗ ಬಾಯಿ ಮುಚ್ಚಿಕೊಂಡು ಸುಮ್ಮನಿದ್ದಾರೆ ಎಂದು ಹರಿಹಾಯ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಮೊಗ್ಗ ನಗರ ಯುವಮೋರ್ಚಾದ ಅಧ್ಯಕ್ಷ ದರ್ಶನ್‌ ಆರ್‌.ವಿ. ವಹಿಸಿದ್ದರು. ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್‌, ನಗರ ಬಿಜೆಪಿ ಅಧ್ಯಕ್ಷ ಎನ್‌.ಕೆ. ಜಗದೀಶ್‌, ಮೇಯರ್‌ ಸುನಿತಾ ಅಣ್ಣಪ್ಪ, ಉಪ ಮೇಯರ್‌ ಗನ್ನಿ ಶಂಕರ್‌, ವಿಭಾಗ ಪ್ರಭಾರಿ ಗಿರೀಶ್‌ ಪಟೇಲ್‌, ಜ್ಯೋತಿ ಪ್ರಕಾಶ್‌, ಎಸ್‌. ದತ್ತಾತ್ರಿ, ಬಳ್ಳೆಕೆರೆ ಸಂತೋಷ್‌ ಮತ್ತಿತರರು ಇದ್ದರು.

ನೆಹರು ಕ್ರೀಡಾಂಗಣ, ಉಷಾ ನಸಿಂìಗ್‌ ಹೋಮ್‌, ಲಕ್ಷ್ಮೀ ಟಾಕೀಸ್‌, ಜೈಲ್‌ ವೃತ್ತ ರಸ್ತೆ, ಪ್ರವಾಸಿ ಮಂದಿರ ವೃತ್ತ, ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದ ವೃತ್ತ, ಶಿವಪ್ಪ ನಾಯಕ ವೃತ್ತ, ಗೋಪಿ ವೃತ್ತ, ಮಹಾವೀರ ವೃತ್ತದ ಮೂಲಕ ಪುನಃ ನೆಹರು ಕ್ರೀಡಾಂಗಣದವರೆಗೆ ಜಾಥಾ ನಡೆಸಲಾಯಿತು.

ಟಾಪ್ ನ್ಯೂಸ್

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

KUNDAPURA-BOA

Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.