ಜನರಿಗೆ ಸೌಲಭ್ಯ ತಲುಪಿಸಿ: ಈಶ್ವರಪ್ಪ
Team Udayavani, Aug 29, 2021, 8:51 PM IST
ಸೊರಬ: ಗ್ರಾಪಂನಲ್ಲಿ ರಾಜಕೀಯ ಬೆರಸದೆಹಳ್ಳಿಗಳ ಅಭಿವೃದ್ಧಿಗೆ ಸದಸ್ಯರು ಒಗಟ್ಟಿನಿಂದ ಕಾರ್ಯ ನಿರ್ವಹಿಸುವ ಮೂಲಕ ಜನತೆಗೆ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದುಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಪಟ್ಟಣದ ರಂಗಮಂದಿರದಲ್ಲಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್, ಅಬ್ದುಲ್ ನಜೀರ್ ಸಾಬ್ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಂಸ್ಥೆ ಮೈಸೂರು, ಜಿಪಂ ಮತ್ತುತಾಪಂ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಗ್ರಾಪಂಗಳ ಚುನಾಯಿತ ಸದಸ್ಯರ ಒಂದುದಿನದ ಕಾರ್ಯಾಗಾರ ಉದ್ಘಾಟಿಸಿ ಅವರುಮಾತನಾಡಿದರು. ಗ್ರಾಮೀಣ ಪ್ರದೇಶಗಳು ಅಭಿವೃದ್ಧಿಯಾಗಬೇಕಾದರೆ ಸ್ಥಳೀಯ ಜನಪ್ರತಿನಿಧಿಗಳು ಸರ್ಕಾರದ ಯೋಜನೆಗಳನ್ನುತಿಳಿದುಕೊಳ್ಳಬೇಕು ಮತ್ತು ಗ್ರಾಪಂಅಭಿವೃದ್ಧಿ ಅಧಿಕಾರಿ ಜೊತೆ ಚರ್ಚೆಗಳು ನಡೆಯಬೇಕು.
ನಿತ್ಯ ಮನೆಗಳಿಗೆ ಭೇಟಿನೀಡಿ, ಜನತೆಯ ಮೂಲ ಸಮಸ್ಯೆಗಳಕುರಿತು ಅರಿತುಕೊಳ್ಳಬೇಕು ಎಂದ ಅವರು,ಗ್ರಾಮದ ಕೆರೆಗಳ ಅಭಿವೃದ್ಧಿ, ಸ್ವತ್ಛತೆ,ಕುಡಿಯುವ ನೀರು, ಜಲಸಂರಕ್ಷಣೆ ಅನೇಕಕಾಮಗಾರಿಗಳನ್ನು ನರೇಗಾ ಯೋಜನೆಯಡಿ ಕೈಗೊಳ್ಳಬಹುದಾಗಿದೆ ಎಂದರು.
ಅಧಿಕಾರಿಗಳು ಗ್ರಾಮಸಭೆಗೆಕಡ್ಡಾಯವಾಗಿ ಹಾಜರಾಗಿ ಅಲ್ಲಿಯಆಗಬೇಕಾದ ಕೆಲಸಗಳನ್ನು ಪಟ್ಟಿ ಮಾಡಿಅವುಗಳ ಬಗ್ಗೆ ಒತ್ತು ನೀಡಬೇಕು.ಗ್ರಾಮಸಭೆಗೆ ಅಧಿಕಾರಿಗಳು ಗೈರಾದರೆಅಂತಹ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಗುರುವಾರ ಕುಪ್ಪಗಡ್ಡೆಗ್ರಾಪಂನಲ್ಲಿ ಮಹಿಳಾ ಅಧ್ಯಕ್ಷೆಯೊಬ್ಬರುಅಧಿಕಾರಿಗಳು ಗೈರಾಗಿರುವುದನ್ನು ಖಂಡಿಸಿಸಭೆಯನ್ನೇ ರದ್ದು ಪಡೆಸುವ ಉತ್ತಮನಿರ್ಧಾರ ತೆಗೆದುಕೊಂಡಿರುವುದುಮೆಚ್ಚುವಂತಹದ್ದಾಗಿದೆ ಎಂದರು.
ಜಿಪಂ ಸಿಇಒ ವೈಶಾಲಿ ಎಂ.ಎಲ್.ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಸಕಕುಮಾರ್ ಬಂಗಾರಪ್ಪ, ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯಆರ್. ಪ್ರಸನ್ನ ಕುಮಾರ್, ಸಂಪನ್ಮೂಲವ್ಯಕ್ತಿಗಳಾದ ಶಿವಾನಂದ ಕಳವೆ, ಪ್ರಮೋದಹೆಗಡೆ, ಸ್ವಪ್ನ, ಜಿ. ಮಲ್ಲಿಕಾರ್ಜುನ ಸ್ವಾಮಿ,ಪ್ರಕಾಶ, ಮನು, ಮಂಜುನಾಥ, ತಾಪಂಇಒ ಕೆ.ಜಿ. ಕುಮಾರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ
Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ
US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ
Nervous Disease: ಕರಾವಳಿಯಲ್ಲೂ ಬ್ರೈನ್ ಹೆಲ್ತ್ ಕ್ಲಿನಿಕ್ ಕಾರ್ಯಾರಂಭ
Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.