ಸರ್ಕಾರದಲ್ಲಿ ಗೊಂದಲವಿದ್ದಿದ್ದು ನಿಜ : ಈಶ್ವರಪ್ಪ
Team Udayavani, Jun 21, 2021, 10:05 PM IST
ಶಿವಮೊಗ್ಗ: ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಅಲ್ಲೊಂದು ಇಲ್ಲೊಂದು ಗೊಂದಲ ಇದ್ದಿದ್ದು ನಿಜ. ನಮ್ಮ ನಾಯಕರಾದ ಅರುಣ್ ಸಿಂಗ್ ಬಂದು ಸಮಸ್ಯೆ ಪರಿಹಾರ ಮಾಡಿದ್ದಾರೆ. ನಾಲ್ಕು ಗೋಡೆ ಮಧ್ಯೆ ಕುಳಿತು ಎಲ್ಲರ ಸಮಸ್ಯೆ ಕೇಳಿ ಬಗೆಹರಿಸಿದ್ದಾರೆ.
ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಸಹ ಸ್ಪಷ್ಟಪಡಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರುಣ ಸಿಂಗ್ ಬರುವ ಮುಂಚೆ ಇದ್ದ ಗೊಂದಲ ಬಗೆಹರಿದಿದ್ದು, ಸರ್ಕಾರ ಶಕ್ತಿಶಾಲಿಯಾಗಿ ಕೆಲಸ ಮಾಡಲಿದೆ. ಜತೆಗೆ ಯಾರೂ ಕೂಡ ಪರ-ವಿರೋಧದ ಬಹಿರಂಗ ಹೇಳಿಕೆ ನೀಡದಂತೆ ಸೂಚಿಸಿದ್ದಾರೆ.
ಅಭಿವೃದ್ಧಿ, ಪಕ್ಷದ ಸಂಘಟನೆ ಬಗ್ಗೆ ಗಮನ ಹರಿಸಲು ಮಾತ್ರ ಸೂಚನೆ ನೀಡಿದ್ದಾರೆ ಎಂದರು. ಕಾಂಗ್ರೆಸ್ಸಿಗರು ಐದು ವರ್ಷ ಹಾಗೋ ಹೀಗೋ ಅ ಧಿಕಾರ ಮಾಡಿದ್ರು. ಬಳಿಕ ರಾಜ್ಯದ ಜನ ತಿರಸ್ಕಾರ ಮಾಡಿದ್ರು. ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ, ಸಚಿವರು, ಶಾಸಕರು ಸೋತು ಸರ್ಕಾರವೇ ಹೋಯ್ತು. ಸರ್ಕಾರ ಹೋದ ಮೇಲೂ ಕೆಲವು ನಾಯಕರು ಸಿಎಂ ಸ್ಥಾನದ ಕನಸು ಕಾಣಾನೇ ಇದ್ದಾರೆ.
ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ ಮೇಲ್ನೋಟಕ್ಕೆ ಇಬ್ಬರು ಸಿಎಂ ಸ್ಥಾನಕ್ಕೆ ಹೋರಾಟ ಮಾಡ್ತಿದ್ದಾರೆ. ಸಿಎಂ ಸ್ಥಾನದ ಬಗ್ಗೆ ಅವರು ಹೇಳಲ್ಲ. ಯಾರೋ ಜನ ಹೇಳ್ತಾರೆ. ಶಾಸಕರು ಹೇಳ್ತಾರೆ ಅಂತಾರೆ. ಅದು ಜಮೀರ್ ವೈಯಕ್ತಿಕ ಅಭಿಪ್ರಾಯ ಅಂತಾರೆ. ಹಾಗಾದ್ರೆ ನಿಮ್ಮ ಅಭಿಪ್ರಾಯ ಏನು? ನೀವು ಮೊದಲು ಶಾಸಕರಾಗಿ ಗೆಲ್ತಿàರಾ ನೋಡಿಕೊಳ್ಳಿ. ಜನ ನಿಮ್ಮನ್ನು ತಿರಸ್ಕಾರ ಮಾಡಿದ್ದಾರೆ. ಸಿಎಂ ಸ್ಥಾನದ ಕನಸು ಬಿಟ್ಟು ಮೊದಲನೆಯದಾಗಿ ಇಬ್ಬರೂ ಶಾಸಕರಾಗಿ ಗೆದ್ದು ಬನ್ನಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್
Panemangalore ಗ್ರಾಮ ಆಡಳಿತ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯಾಚರಣೆ
Belagavi; 2ಎ ಮೀಸಲಾತಿ ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ
Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್.. ಕಾಲಿನಲ್ಲಿ ನೇತಾಡಿದ ಮಗು.!
Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.