ಭಟ್ಕಳದ ಶಂಕಿತ ಉಗ್ರ ಸದ್ದಾಂ ಹುಸೇನ್ ಪತ್ನಿ ಶಾಹಿರಾ ಬಂಧನ


Team Udayavani, Oct 22, 2021, 9:32 PM IST

shivamogga news

ಶಿವಮೊಗ್ಗ: ಜಿಲ್ಲೆಯ ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿ ಹಣ ವಸೂಲಿ ಮಾಡಿದ ಪ್ರಕರಣದಲ್ಲಿ ಶಂಕಿತ ಉಗ್ರನ ಪತ್ನಿಯನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಭಟ್ಕಳದ ಶಂಕಿತ ಉಗ್ರ ಸದ್ದಾಂ ಹುಸೇನ್ ಪತ್ನಿ ಶಾಹಿರಾ ಬಂಧಿತೆ.

ಪ್ರಕರಣದ ಹಿನ್ನೆಲೆ

ಶಿವಮೊಗ್ಗದ ಉದ್ಯಮಿ ಶರತ್ ಕುಮಾರ್ ಎಂಬುವರಿಗೆ ಜುಲೈನಲ್ಲಿ ಇಂಟರ್‌ನೆಟ್ ಕರೆ ಮೂಲಕ ನಾನು ಹೆಬ್ಬೆಟ್ಟು ಮಂಜ, ನನಗೆ 5 ಲಕ್ಷ ಹಣ ಕೊಡಬೇಕು ಎಂದು ತಿಳಿಸಿದ್ದಾನೆ. ಹಣ ಇಲ್ಲ ಎಂದಾಗ ನಿನ್ನ ನಂಬರ್ ಸಿಕ್ಕಿದೆ ಎಂದರೆ ನಿನ್ನ ಬಳಿ ಬರುವುದು ಕಷ್ಟವೇನಲ್ಲ. ಮನೆ ಹತ್ತಿರ ಹುಡುಗರನ್ನು ಕಳಿಸುತ್ತೇನೆ. ನಾನು ಏನೆಂದು ನಿನಗೆ ಸ್ಯಾಂಪಲ್ ತೋರಿಸುತ್ತೇನೆ ಎಂದು ಬೆದರಿಕೆ ಹಾಕಿದ ಹಿನ್ನೆಲೆ ಭಯದಿಂದ ಅವರು ಕೊಟ್ಟ ಅಕೌಂಟ್ ನಂಬರ್‌ಗೆ 50 ಸಾವಿರ ಹಣ ಜಮಾ ಮಾಡಿದ್ದರು.

ನಂತರ ಕೂಡ ಬೆದರಿಕೆ ಕರೆಗಳು ಮುಂದುವರೆದಿದ್ದವು. ದಿಕ್ಕು ತೋಚದೆ ಸೈಬರ್ ಠಾಣೆಗೆ ದೂರು ದಾಖಲಿಸಿದ್ದರು. ತನಿಖೆ ಕೈಗೊಂಡ ಪೊಲೀಸರಿಗೆ ಅದೊಂದು ಮಹಿಳೆಯ ಅಕೌಂಟ್ ಎಂಬುವುದು ತಿಳಿದುಬಂದಿದೆ.

ಹೆಚ್ಚಿನ ವಿಚಾರಣೆ ಮಾಡಿದಾಗ ಆಕೆ ಬೆಂಗಳೂರು ಸ್ಫೋಟ ಪ್ರಕರಣದಲ್ಲಿ ಬಂಧಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಸದ್ದಾಂ ಹುಸೇನ್ ಪತ್ನಿ ಎಂದು ತಿಳಿದು ಬಂದಿದೆ. ಶಿವಮೊಗ್ಗ ಪೊಲೀಸರು ಆಕೆಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಕರೆ ಬಂದಿದ್ದು ಹೇಗೆ?

ಸದ್ದಾಂ ಹುಸೇನ್ ಜೈಲಿನಲ್ಲಿ ಇದ್ದರೂ ಕರೆ ಬಂದಿದ್ದು ಹೇಗೆ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ. ಅಲ್ಲದೇ ಆತ ಹೆಬ್ಬೆಟ್ಟು ಮಂಜ ಹೆಸರು ಬಳಸಿದ್ದು ಯಾಕೆ ಎಂದು ಸಹ ತನಿಖೆ ನಡೆಯುತ್ತಿದೆ. ಮೂಲಗಳ ಪ್ರಕಾರ ಆ ಕರೆಗಳು ಜೈಲಿನಿಂದಲೇ ಬಂದಿವೆ ಎನ್ನಲಾಗಿದೆ. ತುಮಕೂರಿನ ರೌಡಿಶೀಟರ್ ನೆರವಿನಿಂದ ಜೈಲಿನಿಂದಲೇ ಕರೆ ಮಾಡಿ ಪತ್ನಿ ಅಕೌಂಟ್ ಹಣ ಹಾಕಿಸಿದ್ದಾನೆ.

ಬೆಂಗಳೂರಿನಿಂದ ಕರೆಗಳು ಬಂದಿರುವ ಹಿಂದೆ ಬೃಹತ್ ಜಾಲವಿದ್ದು ಅದನ್ನು ಪೊಲೀಸರು ಕೂಲಂಕುಷವಾಗಿ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಕೊವಿಡ್‌ 3ನೇ ಡೋಸ್‌ ಕೊಡುವ ಪ್ರಸ್ತಾಪ ಇಲ್ಲ : ಡಾ. ಅಶ್ವತ್ಥ್ ನಾರಾಯಣ

ಸದ್ದಾಂ ಹುಸೇನ್ ಯಾರು?

ಸದ್ದಾಂ ಹುಸೇನ್ 2015ರಲ್ಲಿ ಬೆಂಗಳೂರಿನಲ್ಲಿ ನಡೆದ ಪುಲಕೇಶಿ ನಗರ, ಚಿನ್ನಸ್ವಾಮಿ ಕ್ರೀಡಾಂಗಣ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಬಂಧಿಯಾಗಿರುವ ಅರೋಪಿ. ಈತ ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ. 35 ವರ್ಷಗಳಿಂದ ಭಟ್ಕಳದ ಜಾಲಿನಗರ ವ್ಯಾಪ್ತಿಯಲ್ಲಿ ಕುಟುಂಬದ ಜತೆ ವಾಸವಾಗಿದ್ದ. ಸ್ಥಳೀಯವಾಗಿ ಗುಜರಿ ವ್ಯಾಪಾರಿಯಾಗಿದ್ದ ಈತ ಬಾಂಬ್ ತಯಾರಿಕೆಗೆ ಬೇಕಾಗಿದ್ದ ಜಿಲೆಟಿನ್‌ಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪವಿದೆ.

ಇದೇ ಆರೋಪದ ಮೇಲೆ 2015ರಲ್ಲಿ ಭಟ್ಕಳದಲ್ಲಿ ಈತನನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಲಾಗಿತ್ತು. ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲಿದ್ದಾನೆ. ಈತನಿಗೆ ಪತ್ನಿ ಸಾಹಿರಾ ಸೇರಿ ಮೂರು ಜನ ಮಕ್ಕಳು, ತಂದೆ, ತಾಯಿ, ತಂಗಿ ಕೂಡ ಭಟ್ಕಳದಲ್ಲೇ ವಾಸವಾಗಿದ್ದಾರೆ.

ಟಾಪ್ ನ್ಯೂಸ್

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Aranthodu: ವಿದ್ಯಾರ್ಥಿಯ ಮರ್ಮಾಂಗ ಹಿಡಿದೆಳೆದು ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.