ನರೇಗಾದಡಿ ರಾಜ್ಯದಡಿ ಗುರಿ ಮೀರಿ ಸಾಧನೆ
Team Udayavani, Dec 28, 2021, 5:31 PM IST
ಶಿವಮೊಗ್ಗ: ಮಹಾತ್ಮಾ ಗಾಂ ಧಿ ನರೇಗಾಯೋಜನೆಯಡಿ 2021 -22 ನೇ ಸಾಲಿಗೆನೀಡಲಾಗಿದ್ದ 13 ಕೋಟಿ ಮಾನವ ದಿನಗಳಗುರಿಯನ್ನು ಮೀರಿ ಇಲ್ಲಿಯವರೆಗೆ 13.4 ಕೋಟಿಮಾನವ ದಿನಗಳ ಉದ್ಯೋಗ ಸƒಷ್ಟಿ ಮಾಡಲಾಗಿದೆಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ರಾಜ್ಯ ಸರ್ಕಾರದ ಬೇಡಿಕೆ ಪರಿಗಣಿಸಿ ಕೇಂದ್ರಸರ್ಕಾರ ನಿಗದಿತ ಗುರಿಯನ್ನು ಅವ ಧಿಗೆ ಮುನ್ನಪೂರ್ಣಗೊಳಿಸಿದ್ದಕ್ಕಾಗಿ ಹೆಚ್ಚುವರಿಯಾಗಿ 1.40ಕೋಟಿ ಮಾನವ ದಿನಗಳ ಉದ್ಯೋಗ ಸೃಷ್ಟಿಗೆ ಅವಕಾಶಕಲ್ಪಿಸಿದ್ದು, ರಾಜ್ಯಕ್ಕೆ ಹೆಚ್ಚುವರಿಯಾಗಿ715 ಕೋಟಿ ರೂ. ಅನುದಾನ ನೀಡಿದೆಎಂದರು.ನರೇಗಾ ಕೂಲಿ ಪಾವತಿಸಲು ಕೇಂದ್ರಸರ್ಕಾರ ಡಿ. 24 ರಂದು 661.24 ಕೋಟಿರೂ. ಅನುದಾನ ಬಿಡುಗಡೆ ಮಾಡಿದ್ದು,ಇಲ್ಲಿಯವರೆಗಿನ ಸಂಪೂರ್ಣ ಬಾಕಿ ಚುಕ್ತಾಆದಂತಾಗಿದೆ ಎಂದರು.ಡಿ.31 ರ ಬಂದ್ ಮತ್ತು ನೈಟ್ ಕರ್ಫ್ಯೂಗೆ ಸಂಬಂ ಧಿಸಿದಂತೆ ವ್ಯಾಪಾರಿಗಳ ಆಕ್ಷೇಪದಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರನಿಯಮಾವಳಿಯನ್ನು ಶಿವಮೊಗ್ಗದಜನತೆ ಮತ್ತು ವ್ಯಾಪಾರಿಗಳು ಆರೋಗ್ಯದದೃಷ್ಟಿಯಿಂದ ಬೆಂಬಲಿಸುತ್ತಾ ಬಂದಿದ್ದು,ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ ಸೂಚಿಸಿದಮಾರ್ಗಸೂಚಿಗಳು ಶಿವಮೊಗ್ಗದಲ್ಲೂಕಟ್ಟುನಿಟ್ಟಾಗಿ ಪಾಲನೆ ಮಾಡುತ್ತೇವೆ.
ಕೆಲವು ಅಪಸ್ವರಗಳು ಬರುವುದು ಸಹಜ. ಆದರೆ,ಆರೋಗ್ಯವಿದ್ದರೆ ಯಾವಾಗ ಬೇಕಾದರೂ ದುಡಿಮೆಮಾಡಿಕೊಳ್ಳಬಹುದೆಂಬುದನ್ನು ಅವರು ಅರ್ಥಮಾಡಿಕೊಳ್ಳಬೇಕು ಎಂದರು.ಮಹಾರಾಷ್ಟÅ ಏಕೀಕರಣ ಸಮಿತಿ(ಎಂಇಎಸ್)ನಿಷೇ ಧಿಸುವ ವಿಚಾರವಾಗಿ ಈಗಾಗಲೇ ಸರ್ಕಾರಚರ್ಚೆ ನಡೆಸಿದೆ. ರಾಜ್ಯದ ಗಡಿ, ಜಲ ವಿಚಾರದಲ್ಲಿರಾಜೀಯಾಗೋ ಪ್ರಶ್ನೆಯೇ ಇಲ್ಲ. ಮೇಕೆದಾಟುಯೋಜನೆ ಜಾರಿಗೆ ತಂದಿದ್ದೆ ಬಿಜೆಪಿ. ಕೇಂದ್ರಸರ್ಕಾರದ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದು,ಜಾರಿಗೊಳಿಸಲು ಪ್ರಯತ್ನ ಮಾಡುತ್ತಿದ್ದೇವೆ. ಕಾಂಗ್ರೆಸ್ಅ ಧಿಕಾರದಲ್ಲಿದ್ದಾಗ ಯಾಕೆ ಮಾಡಲಿಲ್ಲ ಎಂದುಪ್ರಶ್ನಿಸಿದರು.ಮತಾಂತರ ಕಾಯ್ದೆ ದೊಡ್ಡ ವಿಷಯವಲ್ಲ ಎಂದುಸಿದ್ಧರಾಮಯ್ಯನವರು ಈಗ ಹೇಳಿಕೆ ನೀಡುತ್ತಿದ್ದಾರೆ.
ಆಬಿಲ್ ಅನ್ನು ಮೊದಲು ಜಾರಿಗೆ ತರಲು ಪ್ರಯತ್ನಿಸಿದ್ದೇಕಾಂಗ್ರೆಸ್. ಈಗ ಇದೇ ವಿಚಾರಕ್ಕೆ ಸದನದ ಸಮಯವ್ಯರ್ಥಗೊಳಿಸಿದ್ದೇಕೆ ಎಂದು ಪ್ರಶ್ನಿಸಿದರು.ಉತ್ತರ ಕರ್ನಾಟಕ ಜ್ವಲಂತ ಸಮಸ್ಯೆಗಳ ಬಗ್ಗೆಚರ್ಚೆ ನಡೆಸುವ ಬದಲು ಮತಾಂತರ ಕಾಯ್ದೆ ಬಗ್ಗೆಕ್ಯಾತೆ ತೆಗೆದು ಉತ್ತರ ಕರ್ನಾಟಕದ ಜನತೆಗೆ ದ್ರೋಹಮಾಡಿದ್ದಾರೆ. ಈಗ ಮೇಕೆದಾಟು ಯೋಜನೆಯಕ್ಯಾತೆ ತೆಗೆದು ಅಣ್ಣ ತಮ್ಮಂದಿರಂತೆ ಇರುವ ತಮಿಳುಮತ್ತು ಕನ್ನಡ ಭಾಷಿಕರನ್ನು ಎತ್ತಿಕಟ್ಟಿ ಸಮಾಜದಶಾಂತಿ ಕದಡುವ ಹುನ್ನಾರ ಕಾಂಗ್ರೆಸ್ ನಡೆಸುತ್ತಿದೆಎಂದು ಅವರು ಆರೋಪಿಸಿದರು. ಈ ಸಂದರ್ಭದಲ್ಲಿಬಿಜೆಪಿಯ ಹಲವು ಪ್ರಮುಖರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.