ಪೂರ್ಣಪ್ರಮಾಣದ ತರಗತಿ ಆರಂಭಕ್ಕೆ ಆಗ್ರಹ
Team Udayavani, Dec 29, 2021, 3:25 PM IST
ಶಿವಮೊಗ್ಗ: ಪದವಿ ಕಾಲೇಜಿನಲ್ಲಿಪೂರ್ಣಪ್ರಮಾಣದ ತರಗತಿಗಳನ್ನುಪ್ರಾರಂಭಿಸಬೇಕೆಂದು ಆಗ್ರಹಿಸಿ ಮತ್ತುಇಂಜಿನಿಯರಿಂಗ್ ಪ್ರವೇಶ ಶುಲ್ಕ ಏರಿಕೆಮಾಡಿರುವುದನ್ನು ಖಂಡಿಸಿ ಅಖೀಲಭಾರತೀಯ ವಿದ್ಯಾರ್ಥಿ ಪರಿಷತ್ಶಿವಮೊಗ್ಗ ಘಟಕದ ವತಿಯಿಂದಜಿಲ್ಲಾ ಧಿಕಾರಿ ಕಚೇರಿ ಆವರಣದಲ್ಲಿಪ್ರತಿಭಟನೆ ನಡೆಸಿ ಜಿಲ್ಲಾಡಳಿತದಮೂಲಕ ಮುಖ್ಯಮಂತ್ರಿಗಳಿಗೆ ಮನವಿಸಲ್ಲಿಸಲಾಯಿತು.
ರಾಜ್ಯದಲ್ಲಿ ಕೋವಿಡ್ 2ನೇ ಲಾಕ್ಡೌನ್ ನಂತರ ಶಾಲಾ ಕಾಲೇಜುಗಳುಪ್ರಾರಂಭವಾಗಿ ತಿಂಗಳುಗಳೇ ಕಳೆದಿವೆ.ಈಗಾಗಲೇ ಶೈಕ್ಷಣಿಕ ಚಟುವಟಿಕೆಗಳುಭರದಿಂದ ಸಾಗಿವೆ. ಇದರ ಜೊತೆಯಲ್ಲಿಅನೇಕ ವಿದ್ಯಾರ್ಥಿಗಳು ವಿವಿಧ ಕೋಸ್ìಗಳಿಗೆ ಪ್ರವೇಶ ಪಡೆಯಲು ತಯಾರಿನಡೆಸುತ್ತಿದ್ದಾರೆ. ಇಂತಹ ಸಮಯದಲ್ಲಿಅತಿಥಿ ಉಪನ್ಯಾಸಕರು ತರಗತಿಗಳನ್ನುಬಹಿಷ್ಕರಿಸಿರುವುದರಿಂದ ಪೂರ್ಣಪ್ರಮಾಣದ ತರಗತಿಗಳು ನಡೆಯದೇಇರುವುದರಿಂದ ತೊಂದರೆಯಾಗಿದೆ.ಅಲ್ಲದೆ ಸರ್ಕಾರ ಇಂಜಿನಿಯರಿಂಗ್ಪ್ರವೇಶ ಶುಲ್ಕ ಏರಿಕೆ ಮಾಡಿರುವುದುಸರಿಯಲ್ಲ ಎಂದು ಪ್ರತಿಭಟನಾಕಾರರುದೂರಿದರು.
ತರಗತಿಗಳು ಸರಾಗವಾಗಿ ನಡೆಯುವಅವಶ್ಯಕತೆ ಇದೆ. ಆದರೆ ರಾಜ್ಯದಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೇವೆಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರುತಮ್ಮ ಹಲವಾರು ಬೇಡಿಕೆಗಳಈಡೇರಿಕೆಗೆ ಒತ್ತಾಯಿಸಿ ತರಗತಿಗಳನ್ನುಬಹಿಷ್ಕರಿಸಿರುವುದರಿಂದ ತರಗತಿನಡೆಯದೆ ವಿದ್ಯಾರ್ಥಿಗಳು ತೊಂದರೆಅನುಭವಿಸುತ್ತಿದ್ದಾರೆ.
ಆದ್ದರಿಂದಈ ನಿಟ್ಟಿನಲ್ಲಿ ಸರ್ಕಾರ ಆದಷ್ಟುಬೇಗ ಕ್ರಮವಹಿಸಿ ಉಪನ್ಯಾಸಕರಬೇಡಿಕೆಗಳನ್ನು ಈಡೇರಿಸಬೇಕು ಮತ್ತುತರಗತಿಗಳನ್ನು ಪೂರ್ಣ ಪ್ರಮಾಣದಲ್ಲಿಆರಂಭಿಸಬೇಕೆಂದು ಆಗ್ರಹಿಸಿದರು.ರಾಜ್ಯದ ಸರ್ಕಾರಿ ಹಾಗೂ ಖಾಸಗಿವಿಶ್ವವಿದ್ಯಾಲಯಗಳಲ್ಲಿನ ಸರ್ಕಾರಿಕೋಟಾದ ಇಂಜಿನಿಯರಿಂಗ್ವಿದ್ಯಾರ್ಥಿಗಳಿಗಾಗಿ ಸರ್ಕಾರವು2021-22ನೇ ಸಾಲಿನಿಂದ 20,000ರೂ.ಕಾಲೇಜು ಶುಲ್ಕ ಹಾಗೂ ಸ್ಕಿಲ್ಲ್ಯಾಬ್ ಸೌಲಭ್ಯಕ್ಕಾಗಿ 10,000ರೂ.ನಿಂದ 20,000 ರೂ.ವರೆಗೆಹೆಚ್ಚುವರಿ ಶುಲ್ಕ ವಸೂಲಿಗೆ ಸರ್ಕಾರಕಾಲೇಜುಗಳಿಗೆ ಅವಕಾಶ ಕಲ್ಪಿಸಿದೆ.
ಇದರಿಂದಾಗಿ 40,000 ರೂ.ವರೆಗೆ ಶುಲ್ಕವನ್ನು ಹೆಚ್ಚುವರಿಯಾಗಿವಿದ್ಯಾರ್ಥಿಗಳು ನೀಡಬೇಕಾಗಿದೆ. ಬಡಪ್ರತಿಭಾವಂತ ವಿದ್ಯಾರ್ಥಿಗಳು ಮತ್ತುಕೋವಿಡ್ನಿಂದಾಗಿ ಆರ್ಥಿಕ ಸಂಕಷ್ಟಕ್ಕೆತುತ್ತಾಗಿರುವ ಪಾಲಕ, ಪೋಷಕರಹಿತವನ್ನು ಗಮನದಲ್ಲಿಟ್ಟುಕೊಂಡುಸರ್ಕಾರ ಶುಲ್ಕ ಹೆಚ್ಚಳಕ್ಕೆಹೊರಡಿಸಿರುವ ಆದೇಶವನ್ನು ತಕ್ಷಣಹಿಂಪಡೆಯಬೇಕೆಂದು ಮನವಿಯಲ್ಲಿಒತ್ತಾಯಿಸಲಾಗಿದೆ. ಪ್ರತಿಭಟನೆಯಲ್ಲಿಎಬಿವಿಪಿ ಮುಖಂಡರಾದ ದರ್ಶನ್,ಮನೋಹರ, ಚಂದನ್, ಅಭಿಹಾಗೂ ನೂರಾರು ವಿದ್ಯಾರ್ಥಿಗಳುಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.