Shivamogga: ಭಾರಿ ಮಳೆ: ರೈಲ್ವೆ ಹಳಿಗೆ ಜಲ್ಲಿಕಲ್ಲುಗಳು ಕೊಚ್ಚಿ ಹೋಗಿ ಸಂಚಾರದಲ್ಲಿ ವ್ಯತ್ಯಯ
Team Udayavani, Oct 9, 2024, 12:09 PM IST
ಸಾಂದರ್ಭಿಕ ಚಿತ್ರ
ಶಿವಮೊಗ್ಗ: ಅ.8ರ ಮಂಗಳವಾರ ತಡರಾತ್ರಿ ಸುರಿದ ಭಾರಿ ಮಳೆಗೆ ರೈಲ್ವೆ ಹಳಿಗೆ ಜಲ್ಲಿಕಲ್ಲುಗಳು ಕೊಚ್ಚಿ ಹೋಗಿದ್ದು ಸಂಚಾರದಲ್ಲಿ ವ್ಯತ್ಯಯವಾಗಿದೆ.
ಟ್ರ್ಯಾಕ್ ಮ್ಯಾನ್ ಗಳ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಹಳಿ ರಿಪೇರಿ ಕಾರ್ಯದ ಹಿನ್ನೆಲೆ ತಾಳಗುಪ್ಪದಿಂದ ಬೆಂಗಳೂರು ಮತ್ತು ಮೈಸೂರಿಗೆ ಹೊರಟಿದ್ದ ರೈಲುಗಳು ತಡವಾಗಿ ಸಂಚರಿಸುತ್ತಿವೆ.
ಕುಂಸಿ – ಆನಂದಪುರ ರೈಲ್ವೆ ಮಾರ್ಗದ ನಡುವಿನ ಸೂಡುರು ಬಳಿ ಜಲ್ಲಿ ಕೊಚ್ಚಿ ಹೋಗಿತ್ತು. ಇಳಿಜಾರು ಪ್ರದೇಶವಾಗಿದ್ದರಿಂದ ಮಳೆ ನೀರು ರಭಸವಾಗಿ ಹರಿದಾಗ ಜಲ್ಲಿ ಕೊಚ್ಚಿ ಹೋಗಿದೆ ಎನ್ನಲಾಗಿದೆ. ಟ್ರ್ಯಾಕ್ ಮ್ಯಾನ್ಗಳು ಗಸ್ತು ವೇಳೆ ಜಲ್ಲಿ ಕೊಚ್ಚಿ ಹೋಗಿರುವುದು ಗೊತ್ತಾಗಿದೆ. ಕೂಡಲೇ ರೈಲು ನಿಲ್ದಾಣಗಳಿಗೆ ವಿಷಯ ತಿಳಿಸಿದ್ದರು. ರೈಲ್ವೆ ಇಂಜಿನಿಯರಿಂಗ್ ತಂಡ, ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲದೆ ಜಲ್ಲಿ ಭರ್ತಿ ಮಾಡಿ ರೈಲುಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಟ್ರ್ಯಾಕ್ ರಿಪೇರಿ ಹಿನ್ನೆಲೆ ಈ ಮಾರ್ಗದಲ್ಲಿ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು. ಬೆಳಗ್ಗೆ 5.15ಕ್ಕೆ ತಾಳಗುಪ್ಪದಿಂದ ಹೊರಟಿದ್ದ ಇಂಟರ್ಸಿಟಿ ರೈಲು ಸಾಗರ – ಆನಂದಪುರ ನಿಲ್ದಾಣಗಳ ನಡುವೆ ನಿಲ್ಲಿಸಲಾಗಿತ್ತು. ಸದ್ಯ ಈ ರೈಲು ಸುಮಾರು 2 ಗಂಟೆ ತಡವಾಗಿ ಸಂಚರಿಸುತ್ತಿದೆ. ಬೆಳಗ್ಗೆ 6.15ಕ್ಕೆ ತಾಳಗುಪ್ಪದಿಂದ ಮೈಸೂರಿಗೆ ಹೊರಟಿದ್ದ ಕುವೆಂಪು ಎಕ್ಸ್ಪ್ರೆಸ್ ರೈಲು ಕೂಡ ವಿಳಂಬವಾಗಿ ಸಂಚರಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosanagara: 3 ಚಿನ್ನದ ಉಂಗುರ ಸಹಿತ ನಗದು ದೋಚಿ ಪರಾರಿಯಾದ ಕಳ್ಳರು
Sagara: ನಗರಸಭೆ ಸಾಮಾನ್ಯ ಸಭೆ; ಲಲಿತಮ್ಮರ ತಡೆಯಾಜ್ಞೆ ವಿರುದ್ಧ ಸದಸ್ಯರ ತೀವ್ರ ಆಕ್ರೋಶ
Shivamogga: ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಬೈಕ್ ಸಹಿತ ಕೊಚ್ಚಿ ಹೋದ ವ್ಯಕ್ತಿ
Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ
Sagara: ಎಲೆಲೆ, ಎಲೆ ಕೀಟ; ಅಪರೂಪಕ್ಕೆ ಕಂಡ ನೋಟ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Toxic Movie: ಮುಂಬೈನತ್ತ ಯಶ್ ಟಾಕ್ಸಿಕ್ ಪಯಣ
Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್ ಬಾಬಾʼನಾದ ಕಾರ್ತಿಕ್
MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ
Hosanagara: 3 ಚಿನ್ನದ ಉಂಗುರ ಸಹಿತ ನಗದು ದೋಚಿ ಪರಾರಿಯಾದ ಕಳ್ಳರು
ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.