Shivamogga : ಬೀಡಿಗಾಗಿ ಖೈದಿಗಳಿಂದ ಕಲ್ಲು ತೂರಾಟ, ಸಿಬ್ಬಂದಿಗೆ ಜೀವ ಬೆದರಿಕೆ
Team Udayavani, Sep 17, 2024, 1:22 PM IST
ಶಿವಮೊಗ್ಗ: ಬೀಡಿ, ಸಿಗರೇಟು ನೀಡುವಂತೆ ಆಗ್ರಹಿಸಿ ಖೈದಿಗಳು ಕಲ್ಲು ತೂರಾಟ ನಡೆಸಿ ಕಾರಾಗ್ರಹ ಸಿಬ್ಬಂದಿಗೆ ಜೀವ ಬೆದರಿಕೆ ಹಾಕಿರುವ ಘಟನೆ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಕಳೆದ ನಾಲ್ಕು ದಿನದ ಹಿಂದೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ಗೆ ರಾಜಾಥಿತ್ಯ ಪ್ರಕರಣದ ಬೆನ್ನಲೇ ಶಿವಮೊಗ್ಗ ಜೈಲಿನಲ್ಲಿ ಬಿಗಿ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹದಲ್ಲಿ ಖೈದಿಗಳು ಬೀಡಿ, ಸಿಗರೇಟು ನೀಡುವಂತೆ ಒತ್ತಾಯಿಸಿ ಸಿಟ್ಟಿಗೆದ್ದು ಕಲ್ಲು ತೂರಾಟ ನಡೆಸಿ ಬಂಧಿಖಾನೆ ಸಿಬ್ಬಂದಿಗೆ ಜೀವ ಬೆದರಿಕೆ ಕೂಡ ಹಾಕಿದ್ದಾರೆ ಎನ್ನಲಾಗಿದೆ.
ಪರಿಸ್ಥಿತಿ ವಿಕೋಪಕ್ಕೆ ಹೋಗಿರುವ ಹಿನ್ನೆಲೆ ಬಂಧಿಖಾನೆಗೆ ಡಿಐಜಿ ದಿವ್ಯಶ್ರೀ ಭೇಟಿ ನೀಡಿದ್ದು ಎರಡು ದಿನದಿಂದ ಜೈಲಿನಲ್ಲೇ ಮೊಕ್ಕಾಂ ಹೂಡಿದ್ದಾರೆ.
ಪ್ರಕರಣದ ಬೆನ್ನಲ್ಲೇ ಕಾರಾಗೃಹದ ಅಧೀಕ್ಷಕರ ಬದಲಾವಣೆ ಮಾಡಲಾಗಿದೆ.
ಜೈಲಿನೊಳಗೆ ಬೀಡಿ, ಸಿಗರೇಟು ಸರಬರಾಜು ಸಂಪೂರ್ಣ ನಿಷೇಧ ಮಾಡಲಾಗಿದ್ದು ಇದ್ರಿಂದ ಕೆರಳಿದ ಕೈದಿಗಳು ಬೀಡಿ, ಸಿಗರೇಟಿಗಾಗಿ ಆಗ್ರಹಿಸಿ ಧರಣಿ ನಡೆಸಿದ್ರು ಅಲ್ಲದೆ ಸೆ.12ರಂದು ಜೈಲಿನ ಕೆಲವು ಕೈದಿಗಳು ಬಂಧಿಖಾನೆ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಿ ಸಿಬ್ಬಂದಿಗಳ ಲಾಠಿಗಳನ್ನು ಕಸಿದುಕೊಂಡು ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಜೈಲು ಅಧೀಕ್ಷಕಿ ಡಾ. ಆರ್.ಅನಿತಾ ಅವರು ದೂರು ನೀಡಿದ ಹಿನ್ನೆಲೆಯಲ್ಲಿ ಕಲ್ಲು ತೂರಾಟ, ಸಿಬ್ಬಂದಿಗೆ ಬೆದರಿಕೆ ಸಂಬಂಧ ರಾಜಶೇಖರ ರೆಡ್ಡಿ, ನೂರುಲ್ಲಾ, ಟಿಪ್ಪು, ಅಭಿಷೇಕ್ ಪಾಲನ್, ಟ್ವಿಸ್ಟ್ ಇಮ್ರಾನ್, ರಿಯಾಜ್ ಸೇರಿ ಒಟ್ಟು 21 ಕೈದಿಗಳ ವಿರುದ್ಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.