ಶೀಘ್ರದಲ್ಲೇ ಸಿಗಂದೂರು ಉಳಿಸಿ ಬೃಹತ್‌ ಹೋರಾಟ


Team Udayavani, Nov 27, 2020, 6:30 PM IST

ಶೀಘ್ರದಲ್ಲೇ ಸಿಗಂದೂರು ಉಳಿಸಿ ಬೃಹತ್‌ ಹೋರಾಟ

ಶಿವಮೊಗ್ಗ: ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಸರ್ಕಾರ ರಚಿಸಿರುವ ಸಲಹಾ ಸಮಿತಿ ಮತ್ತು ಮೇಲ್ವಿಚಾರಣಾ ಸಮಿತಿಯನ್ನು ರದ್ದುಗೊಳಿಸುವಂತೆಆಗ್ರಹಿಸಿ ಶೀಘ್ರದಲ್ಲೇ ಪಕ್ಷಾತೀತ, ಜಾತ್ಯತೀತವಾಗಿ ಬೃಹತ್‌ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಸಿಗಂದೂರು ಉಳಿಸಿ ಹೋರಾಟ ಸಮಿತಿ ಉಪಾಧ್ಯಕ್ಷ ಬೇಳೂರು ಗೋಪಾಲಕೃಷ್ಣ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ವಿಚಾರದಲ್ಲಿ ಸರ್ಕಾರ ಹಠಮಾರಿ ನಿಲುವು ತೆಗೆದುಕೊಳ್ಳುತ್ತಿದೆ. ಕಾಣದ ಕೈಗಳು ಸಿಗಂದೂರುದೇವಾಲಯವನ್ನು ಮುಜರಾಯಿ ಇಲಾಖೆಗೆಸೇರಿಸುವ ಹುನ್ನಾರಕ್ಕೆ ಕೈ ಹಾಕಿದ್ದಾರೆ. ಇದನ್ನುಸಿಗಂದೂರು ಉಳಿಸಿ ಹೋರಾಟ ಸಮಿತಿ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದರು.

ಶೀಘ್ರದಲ್ಲೇ ಹೋರಾಟದ ದಿನಾಂಕವನ್ನು ನಿಗಪಡಿಸಲಾಗುವುದು. ಸಿಗಂದೂರು ಉಳಿಸಿ ಹೋರಾಟಕ್ಕೆ ದೇವಾಂಗ, ಸಾದುಶೆಟ್ಟಿ, ಉಪ್ಪಾರ, ಕುರುಬ, ಒಕ್ಕಲಿಗ, ಯಾದವ, ಮಡಿವಾಳ, ತಮಿಳು ಸಮಾಜ, ಬೋವಿ, ಸವಿತಾ ಸಮಾಜ, ಗಂಗಾಮತ, ವಿಶ್ವಕರ್ಮ ಸಮಾಜಗಳು ಬೆಂಬಲ ನೀಡಿವೆ.ಹೋರಾಟದ ಸಿದ್ಧತೆ ಬಗ್ಗೆ ಈಗಾಗಲೇ ಎಲ್ಲಾ ಸಮಾಜದ ಮುಖಂಡರ ಜೊತೆ ಒಂದು ಸುತ್ತಿನ ಚರ್ಚೆ ನಡೆಸಲಾಗಿದೆ. ಮತ್ತೂಂದು ಸುತ್ತಿನ ಸಭೆ ನಡೆಸಿ,ಹೋರಾಟ ದಿನಾಂಕ ನಿಗ ದಿಪಡಿಸಿ ಬೃಹತ್‌ ಹೋರಾಟ ನಡೆಸಲಾಗುತ್ತದೆ ಎಂದರು.

ಯಡಿಯೂರಪ್ಪನವರು ಉಪಮುಖ್ಯಮಂತ್ರಿ, ಮುಖ್ಯಮಂತ್ರಿಯಾದ ಅವಧಿಯಲ್ಲಿ ಸಿಗಂದೂರು ದೇವಸ್ಥಾನ,ರಸ್ತೆ ಅಭಿವೃದ್ಧಿಗೆ ಸಾಕಷ್ಟು ಅನುದಾನ ಕೊಟ್ಟಿದ್ದಾರೆ. ಈಗ ಅಲ್ಲಿ ಅರಣ್ಯ ಒತ್ತುವರಿಯಾಗಿದೆ ಎಂದು ಹೇಳುತ್ತಿದ್ದಾರೆ.ಅಭಿವೃದ್ಧಿಗೆ ಅನುದಾನ ಕೊಡುವಾಗ ಇದು ಅರಣ್ಯಜಾಗ ಎಂದು ನೆನಪಿರಲಿಲ್ವಾ, ಅಧಿಕಾರಿಗಳು ಏನು ದನ ಕಾಯುತ್ತಿದ್ರಾ ಎಂದು ಪ್ರಶ್ನಿಸಿದರು. ಯಡಿಯೂರಪ್ಪನವರದು ದೈವಭಕ್ತ ಕುಟುಂಬ. ದೇವರನ್ನು ನಂಬುವ ಯಡಿಯೂರಪ್ಪನವರು ಶಕ್ತಿದೇವತೆ ಸಿಗಂದೂರು ಶ್ರೀ ಚೌಡೇಶ್ವರಿ ದೇವಿ ವಿಚಾರದಲ್ಲಿ ಕೈ ಹಾಕಿದ್ದಾರೆ. ದೇವಿಯ ಶಾಪ ತಟ್ಟೇ ತಟ್ಟುತ್ತದೆ ಎಂದು ಹೇಳಿದರು.

ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್‌ ಮಾತನಾಡಿ, ಸಿಗಂದೂರು ದೇವಸ್ಥಾನ ಹಿಂದುಳಿದ ವರ್ಗದವರ ದೇವಸ್ಥಾನ. ಎಲ್ಲಾ ಸಮಾಜದವರು ದೇವಿಗೆ ನಡೆದುಕೊಳ್ಳುತ್ತಾರೆ.ನಾನು ಕೂಡ ದೇವಿಯ ಭಕ್ತ. ಸರ್ಕಾರ ಸಿಗಂದೂರುದೇವಸ್ಥಾನದ ವಿಚಾರದಲ್ಲಿ ಯಾಕೆ ಮೂಗುತೂರಿಸುತ್ತಿದೆ ಎಂದು ತಿಳಿಯುತ್ತಿಲ್ಲ. ಸರ್ಕಾರಕೂಡಲೇ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆಸೇರಿಸಬಾರದು. ಜಿಲ್ಲಾಧಿಕಾರಿ ನೇತೃತ್ವದಲ್ಲಿರಚಿಸಿರುವ ಸಲಹಾ ಸಮಿತಿ, ಮೇಲ್ವಿಚಾರಣಾ ಸಮಿತಿಯನ್ನು ರದ್ದುಗೊಳಿಸಬೇಕು ಎಂದು

ಆಗ್ರಹಿಸಿದರು. ಸಿಗಂದೂರು ಉಳಿಸಿ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಘೋಷಣೆ ಮಾಡಿದರು. ಪ್ರಗತಿಪರ ಹೋರಾಟಗಾರ ಕೆ.ಪಿ. ಶ್ರೀಪಾಲ್‌ ಮಾತನಾಡಿ, ಜಿಲ್ಲೆಯ ಹಂದಿಗೋಡುಸಮಸ್ಯೆಯ ವಿಚಾರವಾಗಿ ಸಮಿತಿ ರಚನೆ ಮಾಡಿಎಂದು ಸರ್ಕಾರಕ್ಕೆ ಮನವಿ ಮಾಡಿದರೂ ಒಪ್ಪದಸರ್ಕಾರ ಸಿಗಂದೂರು ದೇವಾಲಯ ವಿಚಾರವಾಗಿ ಸಮಿತಿ ರಚನೆ ಮಾಡಿರುವುದು ಖಂಡನೀಯ ಎಂದರು.

ಸಿಗಂದೂರು ದೇವಸ್ಥಾನ ಟ್ರಸ್ಟಿನ ಹಣದ ಲೆಕ್ಕ ಕೇಳುವ ಸರ್ಕಾರ, ಮುಖ್ಯಮಂತ್ರಿಗಳ ಕುಟುಂಬದ ಒಡೆತನದ ಪ್ರೇರಣಾ ಟ್ರಸ್ಟಿನ ಲೆಕ್ಕವನ್ನುಕೊಡಿ ಎಂದು ಪ್ರಶ್ನಿಸಿದ ಅವರು, ದೇವಸ್ಥಾನದ ವಿಚಾರವಾಗಿ ಸರ್ಕಾರ ಹಸ್ತಕ್ಷೇಪ ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಸಿಗಂದೂರು ಉಳಿಸಿ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಆರ್‌. ಶ್ರೀಧರ್‌ ಹುಲ್ತಿಕೊಪ್ಪ, ಉಪಾಧ್ಯಕ್ಷ ಎಂ. ಶ್ರೀಕಾಂತ್‌, ಎಂ. ಗುರುಮೂರ್ತಿ, ಸಂಚಾಲಕ ಎಸ್‌. ರವಿಕುಮಾರ್‌, ಗೀತಾಂಜಲಿ ರತ್ನಾಕರ್‌, ಎನ್‌. ಮಂಜುನಾಥ್‌, ಜಂಟಿ ಕಾರ್ಯದರ್ಶಿ ಜಿ.ಡಿ. ಮಂಜುನಾಥ್‌ ಇದ್ದರು.

ಟಾಪ್ ನ್ಯೂಸ್

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.