‘ಕೇರ್’ ಇಲ್ಲದ ಸೆಂಟರ್: ಅವ್ಯವಸ್ಥೆಯ ಆಗರವಾದ ಸಿಎಂ ತವರು ಜಿಲ್ಲೆಯ ಕೋವಿಡ್ ಕೇರ್ ಸೆಂಟರ್


Team Udayavani, Jun 4, 2021, 1:11 PM IST

‘ಕೇರ್’ ಇಲ್ಲದ ಸೆಂಟರ್: ಅವ್ಯವಸ್ಥೆಯ ಆಗರವಾದ ಸಿಎಂ ತವರು ಜಿಲ್ಲೆಯ ಕೋವಿಡ್ ಕೇರ್ ಸೆಂಟರ್

ಶಿವಮೊಗ್ಗ: ಸೋಂಕಿನ ಗುಣ ಲಕ್ಷಣವಿಲ್ಲದಿದ್ದರೂ ಕೋವಿಡ್ ಪಾಸಿಟಿವ್ ಬಂದವರು ಕೋವಿಡ್ ಕೇರ್ ಸೆಂಟರ್ ಸೇರಬೇಕೆಂದು ಇಲ್ಲಿನ ಜಿಲ್ಲಾಡಳಿತ ಕಟ್ಟಪ್ಪಣೆ ಹೊರಡಿಸಿದೆ. ಆದರೆ ಕೇರ್ ಸೆಂಟರ್ ಗೆ ಬಂದವರು ಮಾತ್ರ ನರಕ ಯಾತನೆ ಅನುಭವಿಸುವಂತಾಗಿದೆ. ಕೋವಿಡ್ ಕೇರ್ ಸೆಂಟರ್ ನ ಒಳಗಿನಿಂದ ಸೋಂಕಿತರು ತಾವು ಅನುಭವಿಸುತ್ತಿರುವ ಸಂಕಷ್ಟವನ್ನು ವಿವರಿಸಿದ್ದಾರೆ.

ಸೋಂಕು ಹರಡುವುದನ್ನು ತಡೆಯಲು, ಮನೆ ಮಂದಿಯಲ್ಲ ಕೋವಿಡ್ ಗೆ ತುತ್ತಾಗದಂತೆ ನೋಡಿಕೊಳ್ಳಲು ಪಾಸಿಟಿವ್ ಬಂದವರನ್ನು ಕೋವಿಡ್ ಕೇರ್ ಸೆಂಟರ್ ಗೆ ದಾಖಲು ಮಾಡಲಾಗುತ್ತಿದೆ. ಆದರೆ ಈ ಕೇರ್ ಸೆಂಟರ್ ಗಳತ್ತ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ.

ಇದು ಮಲ್ಲಿಗೇನಹಳ್ಳಿಯಲ್ಲಿ ಇರುವ ಕೋವಿಡ್ ಕೇರ್ ಸೆಂಟರ್. ವೈದ್ಯಕೀಯ ಮತ್ತು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಡಾ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್ ನಲ್ಲಿ ಕೇರ್ ಸೆಂಟರ್ ಸ್ಥಾಪಿಸಲಾಗಿದೆ. ಇಲ್ಲಿ ಸುಮಾರು ಇನ್ನೂರು ಮಂದಿ ಸೋಂಕಿತರಿದ್ದಾರೆ. ಇವರೆಲ್ಲ ಕೋವಿಡ್ ಗುಣ ಲಕ್ಷಣ ಇಲ್ಲದವರು. ಆದರೂ ಪಾಸಿಟಿವ್ ಬಂದ ಹಿನ್ನೆಲೆ ಕ್ವಾರಂಟೈನ್ ಮಾಡಲಾಗಿದೆ.

ಕೇರ್ ಸೆಂಟರ್ ನಲ್ಲಿ ಅವ್ಯವಸ್ಥೆ

ಕೇರ್ ಸೆಂಟರ್ ನ ಮುಂದೆ ರಾಶಿ ರಾಶಿ ಕಸ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಒಳಗಿರುವವರು ಊಟ, ತಿಂಡಿಯಲ್ಲಿ ಅಳಿದುಳಿದ್ದದ್ದನ್ನು ಬಿಸಾಡಿದ್ದೆಲ್ಲವು ಈ ಕಸದ ರಾಶಿಯಲ್ಲಿರುತ್ತದೆ. ಅಕ್ಕಪಕ್ಕದಿಂದ ಬರುವ ನಾಯಿಗಳು, ದನಕರುಗಳು ಇದನ್ನು ತಿನ್ನುತ್ತಿವೆ ಅಂತಾ ಆರೋಪಿಸುತ್ತಾರೆ ಇಲ್ಲಿರುವವರು. ಕೇರ್ ಸೆಂಟರ್ ಒಳಗಿರುವ ಕಸದ ಬುಟ್ಟಿ ದಿನನಿತ್ಯ ಖಾಲಿ ಮಾಡುವವರೂ ಇಲ್ಲ. ಕಸದ ರಾಶಿ ಮೂರ್ನಾಲ್ಕು ದಿನಗಳ ಕಾಲ ಹಾಗೆಯೇ ಇರುತ್ತದೆ.

ಶುಚಿತ್ವದ ವಿಚಾರ ಮಾತಾಡೋ ಹಾಗೆ ಇಲ್ಲ

ಒಳಗೆ ಬಿಡುಗಾಸಿನಷ್ಟೂ ಶುಚಿತ್ವ ಇಲ್ಲ ಎಂದು ಇಲ್ಲಿರುವವರು ಆರೋಪಿಸುತ್ತಾರೆ. ಶೌಚಾಲಯವನ್ನು ಕ್ಲೀನ್ ಮಾಡಿದ್ದನ್ನು ಇಲ್ಲಿ ಯಾರೂ ಕಂಡಿಲ್ಲವಂತೆ. ಕೊಠಡಿಗಳ ಶುಚಿತ್ವದ ವಿಚಾರವೂ ದೂರದ ಮಾತು. ಅಲ್ಲಿದ್ದರವರೇ ಕ್ಲೀನ್ ಮಾಡಿ ಮಲಗುತ್ತಿದ್ದಾರೆ. ಬೆಡ್ ಶೀಟ್ ಗಳನ್ನು ಒಗೆದಿದ್ದು ಯಾವಾಗ ಎನ್ನುವುದು ಗೊತ್ತಿಲ್ಲ. ನಾವೆ ಒಗೆದುಕೊಳ್ಳುತ್ತೇವೆ ಅಂದರೂ ವ್ಯವಸ್ಥೆ ಇಲ್ಲ ಅನ್ನುತ್ತಾರೆ.

ಇದನ್ನೂ ಓದಿ:ಕೋವಿಡ್ ಪರಿಸ್ಥಿತಿ ಸುಧಾರಣೆಯಾದರೆ ಮಾತ್ರ SSLC ಪರೀಕ್ಷೆ, ಇಲ್ಲದಿದ್ದರೆ ರದ್ದು: ಬಿಎಸ್ ವೈ

ಒಂದೇ ರೀತಿಯ ಊಟ, ತಿಂಡಿ

ಕೋವಿಡ್ ಸೋಂಕಿತರಿಗೆ ಪೌಷ್ಠಿಕ ಆಹಾರ ಬೇಕು. ಆದರೆ ಇಲ್ಲಿಯ ಕೋವಿಡ್ ಕೇರ್ ಸೆಂಟರ್ ನಲ್ಲಿ ಪ್ರತಿದಿನ ಒಂದೆ ಬಗೆಯ ಊಟ, ಒಂದೆ ರೀತಿಯ ಸಾಂಬಾರು, ಪಲ್ಯ. ಇದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ ಅನ್ನುತ್ತಾರೆ ಒಳಗಿರುವವರು. ಮನೆಗೆ ಕಳುಹಿಸಿದರೆ ನಾವೆ ಪೌಷ್ಠಿಕಾಂಶಯುಕ್ತ ಆಹಾರ ತಯಾರಿಸಿಕೊಳ್ಳುತ್ತೇವೆ ಅನ್ನುತ್ತಾರೆ ಇಲ್ಲಿರುವ ಮಹಿಳೆಯರು.

ಡಾಕ್ಟರ್ ಓಕೆ, ಉಳಿದವರದ್ದೆ ಕಿರಿಕ್ಕು

ಇಲ್ಲಿ ವೈದ್ಯಕೀಯ ವ್ಯವಸ್ಥೆ ಚೆನ್ನಾಗಿದೆ. ವೈದ್ಯರು ಸಮರ್ಪಕವಾಗಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಕೇರ್ ಸೆಂಟರ್ ನಲ್ಲಿರುವವರ ಅಭಿಪ್ರಾಯ. ಆದರೆ ಉಳಿದ ಸಿಬ್ಬಂದಿಗಳು ಕೇರ್ ಸೆಂಟರ್ ನಲ್ಲಿ ಇರುವವರನ್ನು ಬೆದರಿಸುತ್ತಿದ್ದಾರೆ. ಏನನ್ನಾದರೂ ವಿಚಾರಿಸಿದರೆ ಗದರುತ್ತಾರೆ ಎಂದು ಆರೋಪಿಸುತ್ತಾರೆ.

ಇನ್ನಾದರೂ ಜಿಲ್ಲಾಡಳಿತ ಈ ಕೇರ್ ಸೆಂಟರ್ ಗಳ ಮೇಲೆ ಹದ್ದಿನ ಕಣ್ಣಿಡಬೇಕಾಗಿದೆ. ಸೋಂಕಿತರಲ್ಲಿ ಆತ್ಮಸ್ಥೈರ್ಯ ತುಂಬಬೇಕಿದೆ. ಅದಕ್ಕೆ ಪೂರಕವಾದ ವಾತಾವರಣ ನಿರ್ಮಿಸಬೇಕಿದೆ. ಇಲ್ಲವಾದಲ್ಲಿ ಸೋಂಕಿನ ಲಕ್ಷಣ ಕಂಡು ಬಂದರೂ ಜನರು ಭೀತಿಯಿಂದ ಟೆಸ್ಟ್ ಮಾಡಿಸಿಕೊಳ್ಳದೆ, ಮನೆಗಳಲ್ಲಿಯೇ ಉಳಿದುಕೊಂಡು ಅನಾಹುತ ಸೃಷ್ಟಿಸುವ ಸಾಧ್ಯತೆ ಹೆಚ್ಚು.

ಟಾಪ್ ನ್ಯೂಸ್

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

Denotification Case: ಬಿಎಸ್‌ವೈ-ಎಚ್‌ಡಿಕೆ ಮೇಲೆ ಡಿನೋಟಿಫೈ ಅಸ್ತ್ರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.