![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 28, 2022, 4:35 PM IST
ಶಿವಮೊಗ್ಗ: ಮಂಗಳೂರು ಘಟನೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಶಂಕಿತ ಉಗ್ರ ಮತಿನ್ ನನ್ನು ತಪ್ಪಿಸಿಡುವ ಪ್ರಯತ್ನವನ್ನು ಕೆಲವು ಸಂಘಟನೆಗಳು ಮಾಡಿವೆ. ಭೂಮಿ ಮೇಲೆ ಎಲ್ಲಿಯೇ ಇದ್ದರೂ ಸಿಗದೇ ಎಲ್ಲೂ ಹೋಗಲ್ಲ. ನಮ್ಮ ಪೊಲೀಸರು ಹಿಡಿದು ತರುತ್ತಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರು ಬ್ಲಾಸ್ಟ್ ಪ್ರಕರಣದ ಕೂಲಂಕಷ ತನಿಖೆ ನಡೆಯುತ್ತಿದೆ. ಆತನ ಆರೋಗ್ಯ ಸುಧಾರಿಸಬೇಕಿದೆ. ಆ ನಿಟ್ಟಿನಲ್ಲಿ ಪ್ರಯತ್ನ ನಡೆಯುತ್ತಿದೆ. ಆರೋಗ್ಯ ಸುಧಾರಿಸಿದ ನಂತರ ಆತನ ಮಾಹಿತಿ ಆಧಾರದ ಮೇಲೆ ವಿಚಾರಣೆ ನಡೆಯಲಿದೆ. ಅನೇಕ ಮಾಹಿತಿ ದೊರೆತಿದೆ. ಈ ಸಂದರ್ಭದಲ್ಲಿ ಹೇಳಲಾಗುವುದಿಲ್ಲ. ಯಾರನ್ನು ವಶಕ್ಕೆ ಪಡೆದಿಲ್ಲ, ಕೆಲವರಿಂದ ಮಾಹಿತಿ ಪಡೆಯಲು ವಿಚಾರಣೆಗೆ ಒಳಪಡಿಸಿದ್ದಾರೆ. ಆತನ ಆರೋಗ್ಯ ಸರಿಹೋದ ಮೇಲೆ ತನಿಖೆ ಒಂದು ಹಂತಕ್ಕೆ ಬರಲಿದೆ ಎಂದರು.
ಸ್ಯಾಟಲೈಟ್ ಪೋನ್ ಬಳಕೆ ವಿಚಾರವಾಗಿ ಮಾತನಾಡಿದ ಆರಗ, ಸ್ಯಾಟಲೈಟ್ ಪೋನ್ ಬಳಕೆ ಬಗ್ಗೆ ಖಾತರಿಯಾಗಿಲ್ಲ. ಕರಾವಳಿ ಭಾಗದಲ್ಲಿ ಹಡಗುಗಳಲ್ಲಿ ಸ್ಯಾಟಲೈಟ್ ಪೋನ್ ಬಳಕೆ ಮಾಡುತ್ತಾರೆ. ಪರಿಣಿತರು ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಆತ ಎಲ್ಲೆಲ್ಲಿ ಓಡಾಡಿದ್ದಾನೆ. ಅಲ್ಲೆಲ್ಲಾ ತಂಡ ಮಾಡಿ ವಿಶೇಷವಾಗಿ ತನಿಖೆ ಮಾಡುತ್ತಿದ್ದಾರೆ ಎಂದರು.
ಇದನ್ನೂ ಓದಿ:ನೀವು ಹೇಳಿದಂತೆ ಆಗಲ್ಲ…ಕೊಲಿಜಿಯಂ ವಿರುದ್ಧ ಹೇಳಿಕೆ ನೀಡಿದ್ದ ಸಚಿವ ರಿಜಿಜುಗೆ ಸುಪ್ರೀಂ ಚಾಟಿ
ಮಹಾರಾಷ್ಟ್ರ ಗಡಿ ವಿವಾದ ವಿಚಾರವಾಗಿ ಮಾತನಾಡಿದ ಅವರು, ಮಹಾರಾಷ್ಟ್ರ ಗಡಿಯಲ್ಲಿ ಅಲ್ಲಲ್ಲಿ ಸಣ್ಣಪುಟ್ಟ ಘಟನೆ ನಡೆಯುತ್ತಿದೆ. ಎರಡು ಸರಕಾರಗಳು ಮಾತುಕತೆ ನಡೆಸುತ್ತಿವೆ. ಎರಡು ಕಡೆ ಎಡಿಜಿಪಿ ಮಟ್ಟದಲ್ಲಿ ಸಭೆ ನಡೆದಿವೆ. ಗಡಿ ಜಿಲ್ಲೆಯ ಅಧಿಕಾರಿಗಳು ಸಭೆ ನಡೆಸಿದ್ದಾರೆ. ಯಾರೇ ಕಾನೊನು ಕೈಗೆತ್ತಿಕೊಂಡರೂ ಖಂಡಿತ ಬಿಡಲ್ಲ. ಈ ಸಮಸ್ಯೆಯನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು ಎಂದರು.
ತೀರ್ಥಹಳ್ಳಿ ಕ್ಷೇತ್ರದಲ್ಲಿ ಮತ್ತೆ ಆರಗ ಜ್ಞಾನೇಂದ್ರ ಆಯ್ಕೆ ಎಂಬ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ, ನಾನು ಅವರ ಗರಡಿಯಲ್ಲಿ ಪಳಗಿದವನು. ಆ ಪ್ರೀತಿ ವಿಶ್ವಾಸ ಇದೆ. ಟಿಕೆಟ್ ಕೊಡುವುದೇ ಅವರು. ಅವರ ಬಾಯಲ್ಲಿ ಇಂತಹ ಮಾತು ಬಂದಿದೆ ಅಂದರೆ ನನಗೆ ಖುಷಿಯಾಗಿದೆ ಎಂದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.