![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 20, 2021, 7:31 PM IST
ಸೊರಬ: ಭೂಮಿ ತಾಯಿಗೆ ಪೂಜೆ ಸಲ್ಲಿಸಿ, ಸಂಪ್ರದಾಯದಂತೆ ಭೂತಾಯಿಗೆ ಉಡಿ ತುಂಬುವ ಸೀಗೆಹುಣ್ಣಿಮೆಯನ್ನು ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಬುಧವಾರ ರೈತರು ಸಂಭ್ರಮದಿಂದ ಆಚರಿಸಿದರು.
ಎತ್ತಿನ ಗಾಡಿ, ಟ್ರ್ಯಾಕ್ಟರ್ ಇತ್ಯಾದಿ ವಾಹನಗಳನ್ನು ಶೃಂಗರಿಸಿ ಹೊಲಕ್ಕೆ ತೆರಳಿ ಅಲ್ಲಿ ಬೆಳೆದು ನಿಂತ ಫಸಲಿಗೆ ಪೂಜೆ ಸಲ್ಲಿಸಿ, ನಂತರ ಭೂ ತಾಯಿಗೆ ಉಡಿ ತುಂಬಿ ನೈವೇದ್ಯ ಅರ್ಪಿಸಿದರು. ಮುಂಜಾನೆ ಗದ್ದೆ ಹೊಲಗಳಿಗೆ ತೆರಳಿ ಚರಗ ಚೆಲ್ಲಿದರು.
ಭೂಮಿಯನ್ನು ಹೆಣ್ಣಿನಂತೆ ಗೌರವಿಸಿ, ಗರ್ಭಿಣಿಗೆ ಸೀಮಂತಶಾಸ್ತ್ರ ಮಾಡುವಂತೆ, ತೆನೆಯೊಡೆಯುವ ಬೆಳೆಗೆ ಕೃಷಿ ಕುಟುಂಬಗಳು ಪೂಜೆ ಸಲ್ಲಿಸಿ ಎಡೆ ಅರ್ಪಿಸುವ ಸಂಪ್ರದಾಯ ಮಲೆನಾಡ ಭಾಗದಲ್ಲಿದೆ. ಮುಂಜಾನೆಯೇ ಅಲಂಕೃತ ಭೂಮಣ್ಣಿ ಬುಟ್ಟಿಯಲ್ಲಿ ಚರಗವನ್ನು ತುಂಬಿಕೊಂಡು ರೈತರು ’ಹಚ್ಚಂಬ್ಲಿ ಹರಬಿಸೊಪ್ಪು ಹಿತ್ತಲಾಗಿರೋ ದಾರಿರೆಕಾಯಿ ಭೂಂಕವ್ವನ ಬಯ್ಕೆಬಾನ ಎದ್ದೆದ್ ಉಣ್ಣೆ ಭೂಂಕವ್ವೋ.. ಹೋಯ್ ಹೋಯ್’ ಎಂದು ಕೂಗುತ್ತಾ ಹೊಲಕ್ಕೆಲ್ಲಾ ಚೆಲ್ಲಿದರು.
ಮಧ್ಯಾಹ್ನ 12 ಗಂಟೆ ನಂತರ ತಮ್ಮ ಕುಟುಂಬದವರೆಲ್ಲರೂ ತಮ್ಮ ಬೆಳೆಗೆ ಸೀರೆ-ಕುಬಸ, ತಾಳಿ, ಮೂಗುತಿ ತೊಡಿಸಿ ವಿಶೇಷ ಪೂಜೆ ಸಲ್ಲಿಸಿ ಅಲ್ಲಿಯೇ ಊಟ ಮಾಡಿದರು. ಬೆಳೆಗೆ, ಗೂಳಿ(ಕಾಗೆ)ಗೆ, ಇಲಿಗಳಿಗೆ ಒಂದೊಂದು ಎಡೆ ನೀಡಿದರು. ಒಂದು ಕೊಟ್ಟೆ ಕಡುಬನ್ನು ಜಮೀನಿನಲ್ಲಿ ಹೂತು, ಆ ಜಮೀನಿನ ಬೆಳೆಯನ್ನು ಒಕ್ಕಲು ಮಾಡುವ ಸಂದರ್ಭದಲ್ಲಿ ಕಿತ್ತು ತಿನ್ನುವ ಸಂಪ್ರದಾಯ ಮಲೆನಾಡಿನವರದ್ದಾಗಿದೆ.
ಸೀಗೆಹುಣ್ಣಿಮೆಗೆ ವಿಶೇಷವಾಗಿ ಹೋಳಿಗೆ, ಕೊಟ್ಟೆಕಡುಬು, ಸಿಹಿ ಕಡುಬು, ಸಾಂಬಾರು ಬುತ್ತಿ, ಕಜ್ಜಾಯ, ಹುಳಿ ಚಿತ್ರನ್ನ, ಮೊಸರಿನ ಬುತ್ತಿ, ಕರ್ಚಿಕಾಯಿ, ರೊಟ್ಟಿ, ಕಟಕಲು ರೊಟ್ಟಿ, ಪುಂಡಿ ಪಲ್ಯೆ, ಎಣಗಾಯಿ ಪಲ್ಯೆ, ಕಿಚಡಿ, ಅಕ್ಕಿಹುಗ್ಗಿ, ಚೆಟ್ನಿ, ಕರಿಂಡಿ, ಇತ್ಯಾದಿ ಭಕ್ಷ್ಯಗಳನ್ನು ತಯಾರಿಸಿ ಮನೆಯ ಮಂದಿಯ ಜೊತೆಗೆ ಸುತ್ತಮುತ್ತಲಿನ ಜನರನ್ನು ಕರೆದುಕೊಂಡು ಹೊಲಗಳಿಗೆ ತೆರಳಿ ಭೋಜನ ಮಾಡಿದರು.
ಹೊಲ, ಗದ್ದೆ, ತೋಟಗಳಲ್ಲಿ ಫಸಲು ಉತ್ತಮವಾಗಿ ಬರಲಿ, ನಾಡಿನಲ್ಲಿ ಸಮೃದ್ಧಿ ನೆಲೆಸಲಿ ಎಂದು ರೈತರು ಭೂ ತಾಯಿಯನ್ನು ಪ್ರಾರ್ಥಿಸಿದರು.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
You seem to have an Ad Blocker on.
To continue reading, please turn it off or whitelist Udayavani.