ರಾಜಕೀಯ ದ್ವೇಷ ಕೊಲೆಯಲ್ಲಿ ಅಂತ್ಯ : ಪ್ರಕರಣದ ಹಾದಿ ತಪ್ಪಿಸಲು ಮಾಡಿದ ತಂತ್ರವೇ ಮುಳುವಾಯಿತು


Team Udayavani, May 2, 2022, 11:50 PM IST

ರಾಜಕೀಯ ದ್ವೇಷ ಕೊಲೆಯಲ್ಲಿ ಅಂತ್ಯ : ಪ್ರಕರಣದ ಹಾದಿ ತಪ್ಪಿಸಲು ಮಾಡಿದ ತಂತ್ರವೇ ಮುಳುವಾಯಿತು

ಸೊರಬ: ಮದುವೆಯಾಗಲು ಕನ್ಯೆಯ ಫೋಟೋ ತೋರಿಸುವುದಾಗಿ ಮನೆಗೆ ಕರೆಸಿ ಯುವಕನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ತಾಲೂಕಿನ ಮನ್ಮನೆ ಗ್ರಾಮದಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಸೊರಬ ಪೊಲೀಸರು ಯಶಸ್ವಿಯಾಗಿದ್ದಾರೆ.

ಗ್ರಾಮದ ಲೇಖಪ್ಪ (36) ಎಂಬ ಕೊಲೆಯಾದ ವ್ಯಕ್ತಿ ಮತ್ತು ಆರೋಪಿ ಕೃಷ್ಣಪ್ಪ ನಡುವೆ ಮೊದಲಿನಿಂದಲೂ ರಾಜಕೀಯವಾಗಿ ಮತ್ತು ಮಹಿಳೆಯೊಬ್ಬರ ಸ್ನೇಹದ ಸಂಬಂಧ ದ್ವೇಷವಿತ್ತು. ಈ ಹಿನ್ನೆಲೆಯಲ್ಲಿ ಲೇಖಪ್ಪನಿಗೆ ಮದುವೆಯಾಗಲು ಕನ್ಯೆಯ ಫೋಟೋ ತೋರಿಸುವುದಾಗಿ ಮನೆಗೆ ಕರೆಸಿ ಲೇಖಪ್ಪನನ್ನು ಕೊಲೆ ಮಾಡಿ, ಮೃತ ದೇಹವನ್ನು ಕಡಸೂರು ಸಮೀಪದ ವರದಾ ಸೇತುವೆಯಿಂದ ಎಸೆದಿರುವುದು ತನಿಖೆಯಿಂದ ಪತ್ತೆಯಾಗಿದೆ.

ನಿಗೂಢವಾಗಿದ್ದ ಪ್ರಕರಣ: ಮನೆಯಿಂದ ಜಮೀನು ಕೆಲಸಕ್ಕೆ ಹೋದ ಲೇಖಪ್ಪ ಏ. 11ರಂದು ನಾಪತ್ತೆಯಾಗಿರುವ ಕುರಿತು ಏ. 14ರಂದು ಲೇಖಪ್ಪನ ಸಹೋದರ ಹುಚ್ಚಪ್ಪ ದೂರು ದಾಖಲಿಸಿದ್ದರು. ಪೊಲೀಸರು ಆರಂಭದಲ್ಲಿ ಇದೊಂದು ಸಹಜ ಪ್ರಕರಣವೆಂದೇ ಭಾವಿಸಿದ್ದರು. ಆದರೆ, ಎಡಿಟೆಡ್ ಫೋಟೋ ವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಪ್ರಕರಣದ ಹಾದಿ ತಪ್ಪಿಸಲು ಹಾಗೂ ಗ್ರಾಮಸ್ಥರು ಮತ್ತು ಪೊಲೀಸರ ಗಮನವನ್ನು ಬೇರೆಡೆಗೆ ಸೆಳೆಯಲು ಲೇಖಪ್ಪನ ಜೊತೆಗೆ ಯುವತಿಯೊಬ್ಬಳು ವಿವಾಹವಾಗಿರುವಂತೆ ಫೋಟೋವನ್ನು ಕೃಷ್ಣಪ್ಪ ಹರಿಬಿಟ್ಟಿದ್ದನು ಎನ್ನಲಾಗುತ್ತಿದ್ದು, ಫೋಟೋದ ಜಾಡು ಹಿಡಿದು ಹೊರಟ ಪೊಲೀಸರಿಗೆ ಪ್ರಕರಣ ಹೊಸ ತಿರುವು ಪಡೆದಿತ್ತು. ಜೊತೆಗೆ ಮೇ.2ರಂದು ಆರೋಪಿ ಕೃಷ್ಣಪ್ಪನ ಮೇಲೆ ಅನುಮಾನವಿರುವುದಾಗಿ ಪುನಃ ಮತ್ತೊಂದು ದೂರು ಸಹ ದಾಖಲಾಗಿತ್ತು.

ಇದನ್ನೂ ಓದಿ : ಮಹತ್ವದ ಬೆಳವಣಿಗೆ : ಬಿಎಸ್ ವೈ ಭೇಟಿ ಮಾಡಿದ ಸಿಎಂ, ಡಿಸಿಎಂ ಹುದ್ದೆ ಸೃಷ್ಟಿ ಸಾಧ್ಯತೆ?

ಹತ್ಯೆಗೆ ಕಾರಣವಾಯ್ತಾ ರಾಜಕೀಯ ದ್ವೇಷ: ಮನಮನೆ ಗ್ರಾಮದಲ್ಲಿ ಬಿಜೆಪಿ ಮುಖಂಡನಾಗಿದ್ದ ಲೇಖಪ್ಪ ಗ್ರಾಮದಲ್ಲಿ ಚಿರ ಪರಿಚಿತ. ಅದೇ ಗ್ರಾಮದ ಗ್ರಾಪಂ ಸದಸ್ಯೆ ಪತಿ ಕೃಷ್ಣಪ್ಪನ ನಡುವೆ ರಾಜಕೀಯವಾಗಿ ಪೈಪೋಟಿ ಇತ್ತು ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಇತ್ತೀಚೆಗೆ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಯೊಂದನ್ನು ಲೇಖಪ್ಪ ಕೈಗೊಂಡಿದ್ದನು. ಈ ಸಂದರ್ಭದಲ್ಲಿ ಲೇಖಪ್ಪ ಮತ್ತು ಕೃಷ್ಣಪ್ಪನ ನಡುವೆ ಮಾತಿನ ಚಕಮಕಿ ನಡೆದು ಗ್ರಾಮಸ್ಥರ ಸಮ್ಮುಖದಲ್ಲಿ ರಾಜಿಪಂಚಾಯ್ತಿ ನಡೆಸಲಾಗಿತ್ತು. ರಾಜಕೀಯವಾಗಿ ಲೇಖಪ್ಪ ಬೆಳೆಯುತ್ತಿರುವುದನ್ನು ಸಹಿಸಲಾಗದೇ ಕೃಷ್ಣಪ್ಪ ಹತ್ಯೆ ಮಾಡಿದ್ದಾನೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಜಿಲ್ಲಾ ರಕ್ಷಣಾಧಿಕಾರಿ ಎಂ.ಬಿ. ಲಕ್ಷ್ಮೀ ಪ್ರಸಾದ್ ಹಾಗೂ ಡಿವೈಎಸ್‍ಪಿ ಶಿವಾನಂದ ಮದರಕಂಡಿ ಮಾರ್ಗದರ್ಶನದಲ್ಲಿ ಸಿಪಿಐ ಎಲ್ ರಾಜಶೇಖರ್ ನೇತೃತ್ವದಲ್ಲಿ ಪಿಎಸ್‍ಐ ದೇವರಾಯ ನೇತೃತ್ವದ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದೆ. ತಂಡದಲ್ಲಿ ಹೆಡ್ ಕಾನ್ಸ್‍ಟೇಬಲ್‍ಗಳಾದ ಬಿ.ನಾಗೇಶ್, ನೀಲೇಂದ್ರ ನಾಯ್ಕ್, ಸಿಬ್ಬಂದಿ ಸಲ್ಮಾನ್ ಖಾನ್ ಹಾಜಿ, ನಾಗರಾಜ್, ಮೆಹಬೂಬ್, ಸಂದೀಪ್, ಉಷಾ, ಮೋಹನ್ ಕುಮಾರ್, ಶಶಿಧರ, ಕುಮಾರ್, ಶಿವಾಜಿರಾವ್, ಸುಚಿತ್ರಾ, ಶಶಿಕಲಾ, ಗೋಪಾಲ್ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್‌ ಅಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.