Shivamogga; ದಾರಿ ಉದ್ದಕ್ಕೂ ಜಗಳದ ಬಳಿಕ ಸೌಮ್ಯ ಹತ್ಯೆ ಮಾಡಿದ ಸೃಜನ್: ಎಸ್ ಪಿ ಹೇಳಿಕೆ
ಸಾವನ್ನಪ್ಪಿದ ನಂತರ ಸಾಗರಕ್ಕೆ ಬಂದು ಕಾರು ತೆಗೆದುಕೊಂಡು ಹೋಗಿದ್ದ..!!
Team Udayavani, Jul 25, 2024, 6:34 PM IST
ಶಿವಮೊಗ್ಗ: ಪ್ರೀತಿಸಿ ಮದುವೆಯಾಗುತ್ತೇನೆ ಎಂದು ನಂಬಿಸಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದು ‘ಸೌಮ್ಯಳನ್ನು ಹತ್ಯೆ ಮಾಡಿರುವುದಾಗಿ ಆರೋಪಿ ಸೃಜನ್ ಒಪ್ಪಿಕೊಂಡಿದ್ದಾನೆ’ ಎಂದು ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್ ಗುರುವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ ‘ ಹತ್ಯೆಗೀಡಾದ ಸೌಮ್ಯಳನ್ನು ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಸೃಜನ್ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ, ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂರು ವರ್ಷದಿಂದ ಹಿಂದೆ ಇಬ್ಬರ ನಡುವೆ ಪರಿಚಯ ವಾಗಿ,ಸಲುಗೆಯಿಂದ ಪ್ರೀತಿ ಬೆಳೆದಿತ್ತು’ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಸಾಗರಕ್ಕೆ ವರ್ಗಾವಣೆ ಗೊಂಡಿದ್ದ ಸೃಜನ್ ಗೆ ಬೇರೆ ಹುಡುಗಿ ಜತೆ ಸಲುಗೆ ಬೆಳೆದಿತ್ತು. ಆ ಕಾರಣದಿಂದ ಸೌಮ್ಯ ಮದುವೆ ಆಗುವಂತೆ ಒತ್ತಾಯಿಸುತ್ತಿದ್ದಳು. ಸೌಮ್ಯ ಕೊಪ್ಪದಿಂದ ಸಾಗರಕ್ಕೆ ಬಂದು ಹೋಗುತ್ತಿದ್ದಳು. ಸೃಜನ್ ಬೇರೆ ಹುಡುಗಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕೆ ಸೌಮ್ಯ ವಿರೋಧಿಸಿದ್ದಳು. ಸೃಜನ್ ಸಾಗರದಿಂದ ಸೌಮ್ಯಳನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗಿದ್ದಾನೆ.ದಾರಿ ಉದ್ದಕ್ಕೂ ಜಗಳ ಮಾಡಿಕೊಂಡು ಬಂದಿದ್ದಾರೆ. ಕೋಪದಿಂದ ಸೌಮ್ಯಳಿಗೆ ಹೊಡೆದಿದ್ದು ಆಕೆ ಕೆಳಕ್ಕೆ ಬಿದ್ದ ನಂತರ ಕಾಲಿನಿಂದ ಕುತ್ತಿಗೆಗೆ ತುಳಿದಿದ್ದಾನೆ. ಸಾವನ್ನಪ್ಪಿದ ನಂತರ ಸಾಗರಕ್ಕೆ ಬಂದು ಕಾರು ತೆಗೆದುಕೊಂಡು ಹೋಗಿದ್ದಾನೆ. ಕಾರಿನಲ್ಲಿ ಮೃತದೇಹ ತಂದು ಜಲಜೀವನ್ ಕಾಮಗಾರಿಯ ಕಾಲುವೆಯಲ್ಲಿ ಹೂತಿಟ್ಟಿದ್ದಾನೆ. ಈಗ ಕುಟುಂಬಸ್ಥರು,ಎಸಿ ಸಮ್ಮುಖದಲ್ಲಿ ಮೃತದೇಹ ಹೊರತೆಗೆಯಲಾಗಿದೆ’ ಎಂದು ತಿಳಿಸಿದರು.
ಸೌಮ್ಯ ಕೊಪ್ಪ ತಾಲೂಕಿನ ಗುಣವಂತೆ ಸಮೀಪ ಹಚ್ಚರಡಿ ಗ್ರಾಮದವಳಾಗಿದ್ದು, ಆರೋಪಿ ಭರತ್ ಕೂಡ ಕೊಪ್ಪ ಮೂಲದವನು. ನರ್ಸಿಂಗ್ ಕಲಿಯುತ್ತಿದ್ದ ಸೌಮ್ಯ ಜು.2 ರಂದು ಕಾಣೆಯಾಗಿದ್ದು, ಮನೆಯವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.