ತೀರ್ಥಹಳ್ಳಿ: ಶ್ರೀ ರಾಮೇಶ್ವರ ಕ್ಷೇತ್ರದಲ್ಲಿ ಎಳ್ಳಮಾವಾಸ್ಯೆ ಜಾತ್ರೆ: ಭಕ್ತರಿಂದ ತೀರ್ಥಸ್ನಾನ


Team Udayavani, Jan 11, 2024, 10:09 AM IST

ತೀರ್ಥಹಳ್ಳಿ: ಶ್ರೀ ರಾಮೇಶ್ವರ ಕ್ಷೇತ್ರದಲ್ಲಿ ಎಳ್ಳಮಾವಾಸ್ಯೆ ಜಾತ್ರೆ: ಭಕ್ತರಿಂದ ತೀರ್ಥಸ್ನಾನ

ತೀರ್ಥಹಳ್ಳಿ: ಪುರಾಣ ಪ್ರಸಿದ್ಧ ಐತಿಹಾಸಿಕ ಹಿನ್ನೆಲೆ ಇರುವ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆ ಮಂಗಳವಾರದಿಂದ ಆರಂಭವಾಗಿದ್ದು ಗುರುವಾರ ತುಂಗಾನದಿ ಮಧ್ಯದಲ್ಲಿರುವ ಪರಶುರಾಮ ಕೊಂಡದಲ್ಲಿ ಸಾವಿರಾರು ಭಕ್ತರು ಸರದಿ ಸಾಲಿನಲ್ಲಿ ನಿಂತು ತೀರ್ಥ ಸ್ನಾನ ಮಾಡಿದರು.

ಗುರುವಾರ ನಸುಕಿನಲ್ಲಿ ಶ್ರೀ ರಾಮೇಶ್ವರ ದೇವರ ಪಲ್ಲಕ್ಕಿ ಉತ್ಸವ ನದಿ ದಡಕ್ಕೆ ಆಗಮಿಸಿ ರಾಮಕೊಂಡಕ್ಕೆ ಪೂಜೆ ಸಲ್ಲಿಸಿದ ನಂತರ ಭಕ್ತರು ನದಿಯಲ್ಲಿ ಮಿಂದು ಶ್ರೀ ರಾಮೇಶ್ವರ ದೇವರ ದರ್ಶನ ಪಡೆದು ಪುನೀತರಾದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಗೀತಾ ರಮೇಶ್ ಮತ್ತು ತೆಪ್ಪೋತ್ಸವ ಸಮಿತಿಯ ಸಂಚಾಲಕ ಸೊಪ್ಪುಗುಡ್ಡೆ ರಾಘವೇಂದ್ರ ತಹಸೀಲ್ದಾರ್ ಜಕ್ಕಣ್ಣ ಗೌಡರ್ ,ಪ ಪಂ ಸದಸ್ಯರಾದ ಸುಶೀಲಾ ಶೆಟ್ಟಿ ಹಾಗೂ ಜಾತ್ರಾ ಸಮಿತಿಯ ಸದಸ್ಯರು ಸೇರಿದಂತೆ ಸಾವಿರಾರು ಭಕ್ತರು ಉಪಸ್ಥಿತರಿದ್ದರು.

ಇತ್ತೀಚಿನ ಕೆಲವು ಬೆಳವಣಿಗೆ ಹಿನ್ನೆಲೆಯಲ್ಲಿ ಸುರಕ್ಷತೆಯ ದೃಷ್ಟಿಯಿಂದ ಡಿವೈಎಸ್ಪಿ ಗಜಾನನ ವಾಮನ ಸುತಾರ ಮಾರ್ಗದರ್ಶನದಲ್ಲಿ
ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿತ್ತು.

ತೀರ್ಥ ಸ್ನಾನ ಎಂದರೆ ಏನು?

ಪರಶುರಾಮ ತಂದೆಯ ಆದೇಶದಂತೆ ತಾಯಿ ರೇಣುಕಾದೇವಿಯ ಶಿರಚ್ಛೇದನ ಮಾಡುತ್ತಾನೆ. ಆನಂತರ ಮಾತೃಹತ್ಯಾದೋಷದಿಂದ ತನ್ನ ಮುಕ್ತಿ
ಹೇಗೆಂದು ತಂದೆಯನ್ನೇ ಕೇಳುತ್ತಾನೆ. “ನೀನು ಕೊಡಲಿಯನ್ನು ಎಲ್ಲಾ ನದಿಗಳಲ್ಲಿಯೂ ಅದ್ದಿ ತೊಳೆಯತ್ತಾ ಹೋಗು. ನಿನ್ನ ಪರಶುವಿನಲ್ಲಿ
ಅಂಟಿದ ರಕ್ತದ ಕಲೆ ಪೂರ್ತಿ ತೊಳೆಯುತ್ತದೋ ಅಲ್ಲಿಗೆ ದೋಷ ಕಳೆದಂತೆ. ಆ ನೀರು ಪವಿತ್ರ ತೀರ್ಥವಾಗುತ್ತದೆ’ ಎಂದು ಜಮದಗ್ನಿ ಹೇಳುತ್ತಾನೆ.
ತಂದೆಯ ಮಾತಿನಂತೆ ಪರಶುರಾಮ ಸಂಚಾರ ಹೊರಟು ಎಲ್ಲಾ ನದಿ, ತೀರ್ಥಗಳಲ್ಲೂ ತನ್ನ ಪರಶುವನ್ನು ತೊಳೆದರೂ ಅದರಲ್ಲಿ ಅಡಗಿದ್ದ ಎಳ್ಳು
ಕಾಳಿನಷ್ಟು ರಕ್ತದ ಕಲೆ ಹಾಗೆಯೇ ಉಳಿಯಿತಂತೆ. ಕೊನೆಗೆ ತುಂಗೆಯ ಈ ಪ್ರದೇಶದಲ್ಲಿ ಕೊಡಲಿಯನ್ನು ತೊಳೆದಾಗ ಅದರಲ್ಲಿದ್ದ ಎಳ್ಳಿನ ಕಾಳಿನಷ್ಟು ಗಾತ್ರದ ಕಲೆ ಮಾಯವಾಯಿತಂತೆ. ಅದು ಮಾರ್ಗಶಿರ ಬಹುಳ ಅಮಾವಾಸ್ಯೆ.

ಪರಶುರಾಮನ ಮಾತೃಹತ್ಯಾದೋಷವನ್ನು ಪರಿಹಾರ ಮಾಡಿದ ಈ ತುಂಗಾ ನದಿಯಲ್ಲಿ ಸರ್ವಶಕ್ತಿಯೂ ಪ್ರವಹಿಸುತ್ತದೆ. ಜನರ ಪಾಪವನ್ನೆಲ್ಲಾ ತೊಳೆದು ಪುನೀತರನ್ನಾಗಿಸುತ್ತದೆ ಎಂಬ ಪ್ರತೀತಿಬೆಳೆಯಿತು. ಈ ಕಾರಣಕ್ಕಾಗಿ ಲಕ್ಷಾಂತರ ಜನರು ರಾಮಕೊಂಡದಲ್ಲಿ ಮುಳುಗಿ ತೀರ್ಥಸ್ನಾನ ಮಾಡಿ ಪಾವನರಾಗುತ್ತಾರೆ.

ಇದನ್ನೂ ಓದಿ: Bantwal: ಬೆಳಂಬೆಳಿಗ್ಗೆ ತಾಯಿ, ಮಗಳಿಗೆ ಚಾಕು ತೋರಿಸಿ ನಗನಗದು ದೋಚಿದ ಮುಸುಕುಧಾರಿಗಳು

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.