![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 24, 2021, 9:50 AM IST
ಶಿವಮೊಗ್ಗ: ನನ್ನ ನಿನ್ನೆಯ ಹೇಳಿಕೆ ಅಪಾರ್ಥವಾಗಿದೆ. ಅಕ್ರಮ ಗಣಿಗಾರಿಕೆ ನಿಲ್ಲಬೇಕು. ಅರ್ಜಿ ಹಾಕಿ ಸಕ್ರಮ ಮಾಡಿಕೊಳ್ಳಬೇಕು ಎಂದು ಹೇಳಿದ್ದೇನೆ. ಅಕ್ರಮ ಗಣಿಗಾರಿಕೆ ನಡೆದರೇ ಅಧಿಕಾರಿಗಳೇ ಹೊಣೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ನಿಲ್ಲಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅಕ್ರಮ ಗಣಿಗಾರಿಕೆ ತಕ್ಷಣ ನಿಲ್ಲಿಸಬೇಕು. ಅರ್ಜಿ ಹಾಕಿ ನಂತರ ಪರವಾನಗಿ ಪಡೆಯಬೇಕು ಎಂದರು.
ಅಧಿಕಾರಿಗಳು ಗಣಿಗಾರಿಕೆ ಸ್ಥಳಕ್ಕೆ ಭೇಟಿ ಪರಿಶೀಲನೆ ಬಳಿಕವಷ್ಟೇ ಅನುಮತಿ ನೀಡಲಾಗುವುದು. ಆದರೆ, ಸದ್ಯಕ್ಕೆ ಎಲ್ಲಾ ಅಕ್ರಮ ಕಲ್ಲುಗಣಿಗಾರಿಕೆ ನಿಲ್ಲಬೇಕು ಎಂದರು.
ಇದನ್ನೂ ಓದಿ:ರೆಸಾರ್ಟ್ನಲ್ಲಿ ಸಚಿವರು ರಾಜಕೀಯ ಕುತೂಹಲ
ಬೇಬಿ ಬೆಟ್ಟದ ಬಳಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಇದರಿಂದ ಕೆಆರ್ ಎಸ್ ಡ್ಯಾಂ ಗೆ ಸಮಸ್ಯೆಯಾಗಲಿದೆ. ಗಣಿಗಾರಿಕೆಯನ್ನು ಹಲವು ಬಾರಿ ನಿಲ್ಲಿಸುವಂತೆ ಸೂಚಿಸಲಾಗಿದೆ. ಆದರೂ ಅಲ್ಲೊಂದು ಇಲ್ಲೊಂದು ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದರು.
ಅಭಿವೃದ್ಧಿ ಕಾರ್ಯಗಳಿಗೆ ಜೆಲ್ಲಿ ಬೇಕು. ಆದರೆ, ಅಕ್ರಮ ಗಣಿಗಾರಿಕೆ ನಿಲ್ಲಬೇಕು. ಭೋವಿ ವಡ್ಡರ ಸಮಾಜದವರು ಕಲ್ಲು ಒಡೆಯುತ್ತಾರೆ. ಇದರಿಂದ ಯಾವುದೇ ಅನಾಹುತ ಸಂಭವಿಸುವುದಿಲ್ಲ. ಅಭಿವೃದ್ಧಿಗಳಿಗೆ ಕೊರತೆ ಆಗಬಾರದು ಎಂದು ಸಿಎಂ ಹೇಳಿದರು.
ಕೆಪಿಎಸ್ ಸಿ ಪೇಪರ್ ಲೀಕ್ ಆಗಿದೆ. ಪರೀಕ್ಷೆ ಮುನ್ನವೇ ಪೇಪರ್ ಲೀಕ್ ಔಟ್ ಆಗಿರುವುದು ಅಕ್ಷಮ್ಯ ಅಪರಾಧ. ಈ ಬಗ್ಗೆ ನಿನ್ನೆ ರಾತ್ರಿಯೇ ಮಾಹಿತಿ ಪಡೆದಿದ್ದೇನೆ. ಸಂಬಂಧ ಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ತಪ್ಪಿತಸ್ಥ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲು ಸೂಚಿಸಿದ್ದೇನೆ. ಅಗತ್ಯ ಬಿದ್ದರೆ ಹುದ್ದೆಯಿಂದ ವಜಾಗೊಳಿಸಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: ಕೋವಿಡ್ ಹಿನ್ನೆಲೆ: ಬಜೆಟ್ ಗಾತ್ರ ತಗ್ಗಿಸುವುದು ಅನಿವಾರ್ಯ: ಸಿಎಂ
ರೈತರ ಹೋರಾಟಕ್ಕೆ ವಿರೋಧವಿಲ್ಲ: ಜ. 26 ಕ್ಕೆ ಹಮ್ಮಿಕೊಳ್ಳಲಾಗಿರುವ ರೈತರ ಹೋರಾಟದ ಬಗ್ಗೆ ಮಾತನಾಡಿದ ಸಿಎಂ, ರೈತರ ಹೋರಾಟಕ್ಕೆ ನನ್ನ ವಿರೋಧವಿಲ್ಲ. ಸರ್ಕಾರ ರೈತರ ಪರ ಇದೆ. ರೈತರು ಶಾಂತ ರೀತಿಯಿಂದ ಪ್ರತಿಭಟನೆ ಮಾಡಬೇಕು ಎಂದು ಮನವಿ ಮಾಡಿದರು.
ಹುಣಸೋಡು ಬ್ಲಾಸ್ಟ್ ಪ್ರಕರಣದ ಬಗ್ಗೆ ಮಾತನಾಡಿದ ಅವರು, ಪ್ರಕರಣದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟ ಕುಟುಂಬಗಳಿಗೆ ಐದು ಲಕ್ಷ ಪರಿಹಾರ ನೀಡಲಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಯುತ್ತಿದೆ. ತನಿಖೆ ಬಳಿಕ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುತ್ತೇವೆ ಎಂದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.