![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 2, 2022, 12:26 PM IST
ತೀರ್ಥಹಳ್ಳಿ: ತಾಲ್ಲೂಕಿನ ಹುಂಚದಕಟ್ಟೆ ರಾಮನಸರ ಶ್ರೀನಾಗದೇವತೆ ದೇವಸ್ಥಾನದಲ್ಲಿ 16ನೇ ವರ್ಷದ ಸುಬ್ರಮಣ್ಯ ಷಷ್ಠಿ ದೀಪೋತ್ಸವ ಕಾರ್ಯಕ್ರಮ ಅತ್ಯಂತ ವೈಭವದಿಂದ ಜರುಗಿತು. ದೇವಸ್ಥಾನ ಸಾನಿಧ್ಯದಲ್ಲಿ ದೀಪೋತ್ಸವ ಕಾರ್ಯಕ್ರಮದ ಹಿನ್ನಲೆಯಲ್ಲಿ ಶ್ರೀ ನಾಗದೇವತೆಗೆ ವಿವಿಧ ಪುಷ್ಪಾಗಳಿಂದ ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಅಂದು ಬೆಳಿಗ್ಗೆ ದೇವರಿಗೆ ಕಲಾಹೋಮ, ಆಶ್ಲೇಷ ಬಲಿ ಪೂಜೆ, ಪಂಚ ವಿಂಶತಿಕಲಶ, ಕಲಾತತ್ವ ಆಧಿವಾಸ ಹೋಮ, ರಾತ್ರಿ ಕರ್ಪೂರ ಪೂಜೆ ಸೇರಿದಂತೆ ವಿವಿಧ ಪೂಜಾ ವಿಧಿವಿಧಾನಗಳು ನೆರವೇರಿಸಲಾಯಿತು. ದೀಪೋತ್ಸವ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಮೂಲೆಗಳಿಂದ ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದುಕೊಂಡರು. ಮಧ್ಯಾಹ್ನ ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ಕಾರ್ಯ ನಡೆಯಿತು.
ರಾತ್ರಿ ದೀಪೋತ್ಸವ ಅಂಗವಾಗಿ ದೇವಸ್ಥಾನ ಆವರಣದ ಸುತ್ತಮುತ್ತ ವಿದ್ಯುತ್ ದೀಪಾಲಂಕಾರದಿಂದ ಅಲಂಕೃತಗೊಳಿಸಿದ್ದು, ಇಡೀ ಆವರಣೆಗೆ ವಿದ್ಯುತ್ ದೀಪಗಳಿಂದ ಕಂಗೊಸುತ್ತಿತ್ತು. ಸಿಡಿಮದ್ದು ಪ್ರದರ್ಶನ ಆತ್ಯಾಕರ್ಷಕವಾಗಿತ್ತು. ಸನ್ನಿಧಿಗೆ ಆಗಮಿಸಿದ ಸಾವಿರಾರು ಭಕ್ತರು ಶ್ರೀ ನಾಗದೇವತೆಗೆ ದೀಪಗಳನ್ನು ಬೆಳಗುವ ಮೂಲಕ ಭಕ್ತಿಯ ಪರಕಾಷ್ಠೆಯನ್ನು ಮೆರೆದರು.
16ನೇ ವರ್ಷದ ದೀಪೋತ್ಸವ ಹಿನ್ನೆಲೆಯಲ್ಲಿ ಶ್ರೀಕ್ಷೇತ್ರದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಪುಟಾಣಿ ಮಕ್ಕಳಿಗೆ ಛದ್ಮವೇಶ, ನಾರವಾದ್ಯ, ಚೆಂಡೆ, ಸ್ಯಾಕ್ಸೋಫೋನ್, ಡೊಳ್ಳುಕುಣಿತ, ಬ್ಯಾಂಡ್, ಭರತನಾಟ್ಯ, ಜೋಗಿಯರ ಕಥೆ, ಕೋಲನೃತ್ಯ, ಕಾಡುಜನಾಂಗದ ನೃತ್ಯ, ಸುಗ್ಗಿನೃತ್ಯ ಕೋಲಾಟ, ಗೀಗೀಪದ ಭಜನೆ ನಾಟಕ ಜಾನಪದ ಗೀತೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದಿದ್ದ ಜನರ ಗಮನ ಸೆಳೆದವು.
ಕರಾವಳಿಯ ಗಂಡು ಕಲೆ ಎಂದೇ ಖ್ಯಾತಿ ಪಡೆದಿರುವ ಯಕ್ಷಗಾನ ಪ್ರದರ್ಶನ ಕೇಂದ್ರ ಬಿಂದುವಾಗಿದ್ದು, ಶ್ರೀ ಕ್ಷೇತ್ರ ಮಂದಾರ್ತಿ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ನಡೆಸಿಕೊಟ್ಟ ಐದು ಮೇಳಗಳ ಕೂಡಾಟ ನೆರೆದಿದ್ದ ಭಕ್ತರನ್ನು ಸೆಳೆಯುವಲ್ಲಿ ಯಶಸ್ವಿಯಾಯಿತು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಹಾಗೂ ಭಾಗವಹಿಸಿದ್ದ ಕಲಾತಂಡಗಳಿಗೆ ಇದೇ ವೇಳೆ ರಾಜ್ಯದ ಗೃಹ ಮಂತ್ರಿ ಆರಗ ಜ್ಞಾನೇಂದ್ರ ಅವರು ಸನ್ಮಾನಿಸಿದರು.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.