Sagara: ಮತದಾನಕ್ಕೆ ಬಂದಿದ್ದವರ ಮೊಬೈಲ್ ಕಳ್ಳತನ


Team Udayavani, Jun 3, 2024, 3:12 PM IST

12

ಸಾಂದರ್ಭಿಕ ಚಿತ್ರ

ಸಾಗರ: ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನೈಋತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾನ ಮಾಡಲು ಹೋಗಿದ್ದ ಮತದಾರರೊಬ್ಬರ ಮೊಬೈಲ್ ಕಳ್ಳತನವಾಗಿರುವ ಘಟನೆ ಸೋಮವಾರ ನಡೆದಿದೆ.

ನೈಋತ್ಯ ಪದವೀಧರ ಕ್ಷೇತ್ರಕ್ಕೆ ನಡೆಯುತ್ತಿರುವ ಚುನಾವಣೆಗೆ ಉದ್ಯಮಿ ವಿನಯ್ ಎನ್.ಆರ್. ಸೋಮವಾರ ಮತದಾನ ಮಾಡಲು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಬೆಳಿಗ್ಗೆ 9:30ಕ್ಕೆ ಹೋಗಿದ್ದರು. ಈ ಸಂದರ್ಭದಲ್ಲಿ ಮತದಾನದ ಕೊಠಡಿ ಹೊರಗಿದ್ದ ಆರಕ್ಷಕರು ಮೊಬೈಲ್ ಇರಿಸಿ ಹೋಗುವಂತೆ ತಿಳಿಸಿದ್ದಾರೆ.

ವಿನಯ್ ಮೊಬೈಲ್ ತೆಗೆದು ಆರಕ್ಷಕರು ಸೂಚಿಸಿದ ಜಾಗದಲ್ಲಿ ಇರಿಸಿ ಮತದಾನಕ್ಕೆ ಹೋಗಿದ್ದಾರೆ. ಮತದಾನ ಮಾಡಿ ಹೊರಗೆ ಬಂದಾಗ ಬೆಲೆಬಾಳುವ ಮೊಬೈಲ್ ನಾಪತ್ತೆಯಾಗಿತ್ತು. ಇಟ್ಟ ಮೊಬೈಲ್ ನಾಪತ್ತೆಯಾಗಿರುವ ಬಗ್ಗೆ ಆರಕ್ಷಕರಿಗೆ ಕೇಳಿದರೆ ಅವರು ತಮಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಮತಗಟ್ಟೆ ಹತ್ತಿರ ಸಿಸಿ ಕ್ಯಾಮರಾ ಅಳವಡಿಸಲಾಗಿತ್ತು. ವಿನಯ್ ಚುನಾವಣೆ ಅಧಿಕಾರಿಗಳ ಬಳಿ ಸಿಸಿ ಕ್ಯಾಮರಾ ಫುಟೇಜ್ ಕೇಳಿದರೆ ಸಿಸಿ ಕ್ಯಾಮರಾ ಹಾಳಾಗಿದ್ದಾಗಿ ತಿಳಿಸಿದ್ದಾರೆ.

ಪ್ರಮುಖವಾದ ಚುನಾವಣೆ ನಡೆಯುವ ಸಂದರ್ಭದಲ್ಲಿ ಚುನಾವಣಾಧಿಕಾರಿಗಳು ಸಿಸಿ ಕ್ಯಾಮರಾವನ್ನು ಪರಿಶೀಲನೆ ಮಾಡಿ ಅದರ ಕಾರ್ಯನಿರ್ವಹಣೆ ಬಗ್ಗೆ ತಿಳಿದುಕೊಳ್ಳಬೇಕಾಗಿತ್ತು. ಮತದಾನ ಕೇಂದ್ರದಲ್ಲಿ ಗಲಾಟೆ ನಡೆದರೆ ಅಧಿಕಾರಿಗಳು ಏನು ಮಾಡುತ್ತಿದ್ದರು ಎಂಬ ಪ್ರಶ್ನೆ ಕೇಳಬೇಕಾಗುತ್ತದೆ. ಚುನಾವಣಾಧಿಕಾರಿಗಳ ಬೇಜವಾಬ್ದಾರಿತನ ಇಲ್ಲಿ ಎದ್ದು ಕಾಣುತ್ತಿದೆ ಎಂದು ವಿನಯ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೊಬೈಲ್ ಕಳವಿಗೆ ಸಂಬಂಧಪಟ್ಟಂತೆ ವಿನಯ್ ನಗರ ಠಾಣೆಗೆ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdsad

Agumbe ಘಾಟಿ; ಭಾರೀ ವಾಹನ ಸಂಚಾರ ನಿಷೇಧ: ಪರ್ಯಾಯ ಮಾರ್ಗ

ತುರ್ತು ಸ್ಥಿತಿಯಲ್ಲಿ ಆರ್‌ಎಸ್‌ಎಸ್‌ ದೇಶ ರಕ್ಷಕ: ಕಲ್ಲಡ್ಕ ಪ್ರಭಾಕರ್‌ ಭಟ್‌

ತುರ್ತು ಸ್ಥಿತಿಯಲ್ಲಿ ಆರ್‌ಎಸ್‌ಎಸ್‌ ದೇಶ ರಕ್ಷಕ: ಕಲ್ಲಡ್ಕ ಪ್ರಭಾಕರ್‌ ಭಟ್‌

Tunga Reservoir filled

Shimoga; ಮಲೆನಾಡಿನ ಮಳೆಗೆ ಭರ್ತಿಯಾದ ತುಂಗಾ ಜಲಾಶಯ

Tunga ಸೇತುವೆ ಸಮೀಪ ಅಕ್ರಮವಾಗಿ ಮದ್ಯ ಸೇವನೆ… ಇಬ್ಬರ ಮೇಲೆ ಪ್ರಕರಣ ದಾಖಲು

Tunga ಸೇತುವೆ ಸಮೀಪ ಅಕ್ರಮವಾಗಿ ಮದ್ಯ ಸೇವನೆ… ಇಬ್ಬರ ಮೇಲೆ ಪ್ರಕರಣ ದಾಖಲು

Road Mishap: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಇಬ್ಬರ ಸ್ಥಿತಿ ಗಂಭೀರ!

Road Mishap: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಇಬ್ಬರ ಸ್ಥಿತಿ ಗಂಭೀರ!

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

9

Price Rise: ದರ ಏರಿಕೆ; ನಾಳೆ ರಾಜ್ಯಾದ್ಯಂತ ಬಿಜೆಪಿಯಿಂದ ಕ್ಷೀರ ಅಭಿಯಾನ

1-india

Semi Final 2; ಇಂಗ್ಲೆಂಡ್ ವಿರುದ್ಧ ಅಮೋಘ ಜಯ ಸಾಧಿಸಿದ ಭಾರತ ಫೈನಲ್ ಗೆ ಲಗ್ಗೆ

priyanka gandhi (2)

Constitution;’ಜೈ ಸಂವಿಧಾನ’ ಹೇಳುವುದು ತಪ್ಪಾ?: ಪ್ರಿಯಾಂಕಾ ಪ್ರಶ್ನೆ

1-wtr

Moving ರೈಲಿಗೆ ನೀರು ಚಿಮ್ಮಿಸಿದ ಯುವಕರಿಗೆ ಪ್ರಯಾಣಿಕರಿಂದ ಗೂಸಾ!

1-wwewwewewe

BJP ಹಿರಿಯ ನಾಯಕ ಆಡ್ವಾಣಿ ಆರೋಗ್ಯದಲ್ಲಿ ಚೇತರಿಕೆ: ಡಿಸ್ಚಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.