ರಿಯಾಲಿಟಿ ಶೋನಿಂದ ಮಕ್ಕಳಲ್ಲಿ ಅಗತ್ಯಕ್ಕಿಂತ ಹೆಚ್ಚಾಗಿ ಸ್ವಪ್ರಜ್ಞೆಯ ಅಪಾಯ: ಪಲ್ಲವಿ


Team Udayavani, Apr 1, 2022, 12:15 PM IST

10pallavi

ಸಾಗರ: ಸಾಮಾನ್ಯವಾಗಿ ಮಕ್ಕಳಲ್ಲಿ ನಾನು, ನನ್ನಿಂದ ಎಂಬ ಪ್ರಜ್ಞೆ ಇರುವುದಿಲ್ಲ. ಆದರೆ ರಿಯಾಲಿಟಿ ಶೋಗಳು ಅವರಲ್ಲಿ ಈ ಪ್ರಜ್ಞೆಯನ್ನು ಜಾಗೃತಗೊಳಿಸುತ್ತಿದೆ ಎಂದು ಗಾಯಕಿ, ರಂಗನಟಿ ಎಂ.ಡಿ. ಪಲ್ಲವಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇಲ್ಲಿನ ಎಸ್‌ಪಿಎಂ ರಸ್ತೆಯ ಬಾಪಟ್ ನಿವಾಸದಲ್ಲಿನ ಚರಕ ಅಂಗಡಿಯಲ್ಲಿ ಚರಕ ಹಾಗೂ ಕವಿಕಾವ್ಯ ಟ್ರಸ್ಟ್ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ‘ಕುಶಲೆ’ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ನಡೆದ ಹಾಡು ಹರಟೆ ಸಂವಾದದಲ್ಲಿ ಅವರು ಮಾತನಾಡಿದರು.

ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರರು ಮಕ್ಕಳನ್ನು ಉದ್ದೇಶಿಸಿ ಪದೇ ಪದೇ ನೀನು ಹೀಗೆ ಮಾಡಿದೆ, ನೀನು ಈ ರೀತಿ ನಡೆದುಕೊಂಡೆ ಎಂದು ಹೇಳುವುದರಿಂದ ಮಕ್ಕಳಲ್ಲಿ ಸ್ವಪ್ರಜ್ಞೆ ಅಗತ್ಯಕ್ಕಿಂತ ಹೆಚ್ಚಾಗಿ ಬೆಳೆಯುತ್ತಿದೆ. ಇವುಗಳಲ್ಲಿ ಭಾಗವಹಿಸುವ ಮಕ್ಕಳು ಸ್ಪರ್ಧಾರ್ಥಿಗಳಾಗುತ್ತಿದ್ದಾರೆಯೇ ಹೊರತು ಕಲಾವಿದರಾಗುತ್ತಿಲ್ಲ ಎಂದರು.

ಗ್ರಾಮೀಣ ಕರಕುಶಲ ಕಲೆ, ನೇಕಾರಿಕೆ ಮುಂತಾದವುಗಳ ಸಮಸ್ಯೆಗಳ ಬಗ್ಗೆ ಪ್ರಸನ್ನ ಅವರಿಂದಾಗಿ ನನ್ನಂತವರ ಅರಿವಿಗೆ ಬಂದಿದೆ. ಜಿಎಸ್‌ಟಿ ಸಮಸ್ಯೆ ಸೇರಿದಂತೆ ಗ್ರಾಮೀಣ ಕರಕುಶಲ ಕಲೆಗಳ ಸಮಸ್ಯೆ ಮತ್ತು ಸವಾಲುಗಳ ಸಂದರ್ಭ ಪ್ರಸನ್ನ ಸರ್ಕಾರವನ್ನು ಎಚ್ಚರಿಸಿದ್ದಾರೆ. ಪ್ರಸನ್ನರ ಚಳುವಳಿಯ ಪ್ರಭಾವದಿಂದಾಗಿ ನಾನೂ ಸಹ ಕೈ ಜೋಡಿಸಲು ಸಾಧ್ಯವಾಗಿದೆ. ಈಗ ಇಂತಹ ಪ್ರಶಸ್ತಿ ಪ್ರಸನ್ನ ಮತ್ತು ಚರಕದ ಮೂಲಕ ನನಗೆ ದೊರಕುತ್ತಿರುವುದು ಸಂತೋಷದ ಸಂಗತಿ ಎಂದರು.

ಕವಿಕಾವ್ಯ ಟ್ರಸ್ಟ್‌ನ ಕಾರ‍್ಯದರ್ಶಿ ಜಿ.ಇಂದುಕುಮಾರ್ ಮಾತನಾಡಿ,  ಗ್ರಾಮಾಂತರದ ಹೆಣ್ಣುಮಕ್ಕಳ ಸಂಸ್ಥೆಯಾಗಿರುವ ಕವಿಕಾವ್ಯ ಟ್ರಸ್ಟ್‌ನ ವತಿಯಿಂದ ಕುಶಲೆ ಪ್ರಶಸ್ತಿ ನೀಡುವ ಕಾರ‍್ಯವನ್ನು 2021-22ನೇ ಸಾಲಿನಲ್ಲಿ ಆರಂಭಿಸಲಾಗಿದೆ.  25 ಸಾವಿರ ರೂಪಾಯಿ ನಗದು, ಫಲಕ ಒಳಗೊಂಡಿರುವ ಈ ಪ್ರಶಸ್ತಿಗೆ ಕುಶಲೆ ಎಂದು ಹೆಸರಿಡಲಾಗಿದೆ.  ಮೊದಲ ಪ್ರಶಸ್ತಿಯನ್ನು ಕನ್ನಡದ ಹೆಸರಾಂತ ನಟಿ ಹಾಗೂ ಗಾಯಕಿ ಎಂ.ಡಿ. ಪಲ್ಲವಿಯವರಿಗೆ ಸಂಸ್ಥೆ ನೀಡುತ್ತಿರುವುದು ಹೆಮ್ಮೆ ತಂದಿದೆ. ಸಂಗೀತ, ನಾಟಕ ಕ್ಷೇತ್ರಕ್ಕೆ ಪಲ್ಲವಿಯವರು ನೀಡಿದ ಕೊಡುಗೆ ಹಾಗೂ ಅವರ ಸಹಕಾರಿ ಮನೋಭಾವವನ್ನು ಪರಿಗಣಿಸಿ ಕುಶಲೆ ಪ್ರಶಸ್ತಿ ನೀಡಲಾಗಿದೆ ಎಂದರು.

ಹಾಡು ಹರಟೆ ಕಾರ‍್ಯಕ್ರಮವನ್ನು ಎಂ.ವಿ.ಪ್ರತಿಭಾ ನಿರ್ವಹಿಸಿದರು. ಚರಕ ಸಂಸ್ಥೆಯ ಮಹಾಲಕ್ಷ್ಮಿ, ರಮೇಶ್, ಪೀಟರ್, ಜೀವನ್ಮುಖಿ ಸಂಸ್ಥೆಯ ನಂದಾ ಗೊಜನೂರು, ಗೀತಾ ಶ್ರೀನಾಥ್, ರೋಹಿಣಿ ಶರ್ಮಾ, ಮಂಜುಳಾ, ಚೈತ್ರ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eshwarappa

Shivamogga; ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ: ಈಶ್ವರಪ್ಪ

1-wddsadas

Shivamogga; ತಳ್ಳುವ ಗಾಡಿಯವನ ಮೇಲೆ ಪೊಲೀಸ್ ಹಲ್ಲೆ ಆರೋಪ: ವರ್ತಕರ ಆಕ್ರೋಶ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

Thirthahalli ಜಮೀನಿನಲ್ಲಿ ನೀರು ಹೋಗುವ ವಿಚಾರ: ಸಹೋದರರಿಂದ ಆತ್ಮಹತ್ಯೆ ಯತ್ನ

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

Shimoga; ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಶಿವಣ್ಣ; ತಲಾ 1 ಲಕ್ಷ ಪರಿಹಾರ ನೀಡಿದ ದಂಪತಿ

Shimoga; ಎಮ್ಮೆಹಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ಶಿವಣ್ಣ; ತಲಾ 1 ಲಕ್ಷ ಪರಿಹಾರ ನೀಡಿದ ದಂಪತಿ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.