ಮೌಲ್ಯದ ಕಡೆ ಕೊಂಡೊಯ್ಯುವ ರಂಗಭೂಮಿ : ಭಂಡಾರಿ


Team Udayavani, Mar 28, 2021, 8:21 PM IST

ಗಹಗಗ

ಸಾಗರ: ರಂಗಭೂಮಿ ಮನುಷ್ಯನೊಳಗಿನ ಪ್ರೇಕ್ಷಕರನ್ನು ಬದಲಾಯಿಸುತ್ತಾ ಮೌಲ್ಯದ ಕಡೆ ಕೊಂಡೊಯ್ಯುತ್ತದೆ. ಇತರ ಎಲ್ಲ ಮಾಧ್ಯಮಗಳಿಗಿಂತ ರಂಗಭೂಮಿ ಮಾಧ್ಯಮ ಪ್ರೇಕ್ಷಕ ಮತ್ತು ನಟನ ನಡುವೆ ನಿಕಟ ಸಂಪರ್ಕ ಹೊಂದಿದ್ದು, ಕಾಲಕಾಲಕ್ಕೆ ಬದಲಾಗುತ್ತಿರುವ ಮೌಲ್ಯವನ್ನು ಜನರ ಬಳಿಗೆ ಕೊಂಡೊಯ್ಯುವ ಕೆಲಸ ಮಾಡುತ್ತಿದೆ ಎಂದು ರಂಗ ವಿಮರ್ಶಕ ವಿಠ್ಠಲ್‌ ಭಂಡಾರಿ ತಿಳಿಸಿದರು.

ಇಲ್ಲಿನ ಎಸ್‌.ಎನ್‌. ನಗರದ ಭೂಮಿ ರಂಗಮನೆಯಲ್ಲಿ ಶನಿವಾರ ಸ್ಪಂದನ ಸಂಸ್ಥೆ ವತಿಯಿಂದ ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಂಗಭೂಮಿ ಪ್ರೇಕ್ಷಕರ ಜೊತೆ ನೇರ ಅನುಸಂಧಾನ ಮಾಡುವುದರಿಂದ ಇದು ನೋಡುಗರಿಗೆ ಹೆಚ್ಚು ಆಪ್ತ ಎನಿಸುತ್ತದೆ ಎಂದರು.

ಹಲವು ಬದಲಾವಣೆ, ಚಳುವಳಿಗಳು ಮೊದಲ್ಗೊಳ್ಳುವಲ್ಲಿ ರಂಗಭೂಮಿ ಪ್ರಮುಖ ಪಾತ್ರ ವಹಿಸಿದೆ. ಆಯಾ ಕಾಲ, ನಟ, ಪ್ರೇಕ್ಷಕರ ಮನಸ್ಥಿತಿಗೆ ಅನುಗುಣವಾಗಿ ರಂಗಭೂಮಿ ಬದಲಾಗುತ್ತಾ ಬಂದರೂ ಸತ್ಯದರ್ಶನ ಸಂದರ್ಭದಲ್ಲಿ ಯಾವುದೇ ರಾಜಿ ರಂಗಭೂಮಿ ಮಾಡಿಕೊಂಡಿಲ್ಲ. ಕೊರೊನಾದಂತಹ ಸಂದರ್ಭದಲ್ಲಿ ಸಹ ರಂಗಭೂಮಿ, ರಂಗನಟರು ತಮ್ಮದೇ ಆದ ರೀತಿಯಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಿದ್ದಾರೆ. ಇಂತಹ ರಂಗಭೂಮಿಯನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ರಂಗ ಸನ್ಮಾನ ಸ್ವೀಕರಿಸಿ ಮಾತನಾಡಿದ ಪರಶುರಾಮ್‌ ಸೂರನಗದ್ದೆ, ಗ್ರಾಮೀಣ ಪ್ರದೇಶದ ಭಾಷೆ, ಪರಿಸರ ಹಾಗೂ ಜನಜೀವನವನ್ನು ರಂಗಭೂಮಿಗೆ ಅಳವಡಿಸಿಕೊಳ್ಳುವ ಪ್ರಯತ್ನವನ್ನು ನಾನು ಮಾಡಿಕೊಂಡು ಬಂದಿದ್ದೇನೆ. ನಾವು ಬದುಕಿನ ಜೊತೆಗೆ ರಂಗಭೂಮಿ ಕಟ್ಟುವ ಕೆಲಸವನ್ನು ಮಾಡುತ್ತಿದ್ದೇವೆ. ರಂಗಭೂಮಿಗೆ ವಿಶೇಷವಾದ ಶಕ್ತಿಯಿದ್ದು ಅದು ವ್ಯಕ್ತಿತ್ವ ವಿಕಸನದ ಜೊತೆಗೆ ಮೌಲ್ಯವನ್ನು ಬಿತ್ತುತ್ತದೆ ಎಂದರು. ವಿಶ್ವರಂಗಭೂಮಿ ದಿನದ ಅಂಗವಾಗಿ ಸೂರನಗದ್ದೆ ಭೀರೇಶ್ವರ ನಾಟ್ಯ ಸಂಘದ ಜೆ. ಪರಶುರಾಮ್‌ ಅವರನ್ನು ಸನ್ಮಾನಿಸಲಾಯಿತು.

ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು, ರೈತಸಂಘದ ಮಂಜುನಾಥ ಗೌಡ, ಎನ್‌.ಡಿ. ವಸಂತಕುಮಾರ್‌, ಶಿವಾನಂದ ಕುಗ್ವೆ, ಸತೀಶ್‌ ಶೆಣೈ ಇನ್ನಿತರರು ಇದ್ದರು. ಎಂ.ವಿ. ಪ್ರತಿಭಾ ರಾಘವೇಂದ್ರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂತೋಷ್‌ ಶೇಟ್‌ ಸನ್ಮಾನಿತರ ಪರಿಚಯ ಮಾಡಿದರು. ಭೂಮಿ ರಂಗಭೂಮಿ ಸಂದೇಶ ಓದಿದರು. ಎಂ.ರಾಘವೇಂದ್ರ ನಿರೂಪಿಸಿದರು. ನಂತರ ನಾಗೇಂದ್ರ ಕುಮಟಾ ಮತ್ತು ಸಂಗಡಿಗರಿಂದ ರಂಗಗೀತೆ ಗಾಯನ ಕಾರ್ಯಕ್ರಮ ನಡೆಯಿತು. ಸ್ಪಂದನ ಸಂಸ್ಥೆ ವತಿಯಿಂದ ಪಿ. ಲಂಕೇಶ್‌ ಮೂಲಕತೆ ಆಧರಿಸಿದ, ಎಂ.ವಿ. ಪ್ರತಿಭಾ ನಿರ್ದೇಶಿಸಿ ರಂಗರೂಪಕ್ಕೆ ತಂದ “ಮುಟ್ಟಿಸಿಕೊಂಡವರು’ ನಾಟಕ ಪ್ರದರ್ಶನ ನಡೆಯಿತು.

ಟಾಪ್ ನ್ಯೂಸ್

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

8-holehonnur

Holehonnur: ಹೊಸಕೊಪ್ಪ ಗ್ರಾಮದಲ್ಲಿ ಬಲಿಗಾಗಿ ಕಾದಿರುವ ಗುಂಡಿ

Dinesh-gundurao

Vaccine: ಇನ್ನೆರಡು ವರ್ಷದೊಳಗೆ ಕೆಎಫ್‌ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.