Thirthahalli: ಮೇಲಿನಕುರುವಳ್ಳಿ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿ ದರ್ಪ !
ಪಡಿತರ ಅಕ್ಕಿಯನ್ನು ಫಲಾನುಭವಿಗಳೇ ಹಾಕಿಕೊಳ್ಳಬೇಕಂತೆ ಇದ್ಯಾವ ಕಾನೂನು!?
Team Udayavani, Sep 22, 2024, 4:09 PM IST
ತೀರ್ಥಹಳ್ಳಿ : ತಾಲೂಕಿನ ಅತೀ ದೊಡ್ಡ ಗ್ರಾಮ ಪಂಚಾಯಿತಿಯಾಗಿರುವ ಮೇಲಿನಕುರುವಳ್ಳಿಯಲ್ಲಿರುವ ಹರಿಜನ ಗಿರಿಜನ ಕಲ್ಲುಕುಟಿಕರ ಸಂಘದ ಕಟ್ಟಡದಲ್ಲಿರುವ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ನೀಡುವ ಅಕ್ಕಿಯನ್ನು ಸಾರ್ವಜನಿಕರೇ ತುಂಬಿಸಿಕೊಳ್ಳಬೇಕಂತೆ ಕೇಳಿದರೆ ದರ್ಪದ ಮಾತುಗಳನ್ನು ಅಲ್ಲಿನ ಸಿಬ್ಬಂದಿಗಳು ಆಡುತ್ತಾರೆ.
ಹೌದು ಸರ್ಕಾರ ನೀಡುವ ಅಕ್ಕಿಯನ್ನು ಸಾರ್ವಜನಿಕರೇ ಹಾಕಿಕೊಳ್ಳಬೇಕಂತೆ, ಇದನ್ನು ಪ್ರೆಶ್ನೆ ಮಾಡಿದಕ್ಕೆ ಅಕ್ಕಿ ಸರಿ ಇಲ್ಲ ಎಂದು ಹೇಳುತ್ತೀರಾ? ನಿಮಗೆ ಯಾವ ಅಕ್ಕಿ ಬೇಕೋ ಅದನ್ನು ಹಾಕಿಕೊಳ್ಳಿ ನಾನು ತೂಕ ಮಾಡಿ ಕೊಡುತ್ತೇನೆ ಎಂದು ಅಲ್ಲಿನ ಸಿಬ್ಬಂದಿಯೊಬ್ಬರು ಅತ್ಯಂತ ದರ್ಪದಿಂದ ಮಾತನಾಡುತ್ತಾರೆ.
ಅಕ್ಕಿಯನ್ನು ಚೀಲದಿಂದ ನೆಲಕ್ಕೆ ಸುರಿದು ಹಾಕಿದ್ದು ಅದರಲ್ಲಿ ಇಲಿ ಪಿಕ್ಕಿ ಸೇರಿ ಇತರ ಕಸ ಇದ್ದು ಅದನ್ನು ನೋಡಿದವರು ಬೇರೆ ಅಕ್ಕಿ ಕೊಡಿ ಎನ್ನುವುದು ಸಹಜ. ಆದರೆ ಅಲ್ಲಿನ ಸಿಬ್ಬಂದಿಯೊಬ್ಬರು ನಿಮಗೆ ಬೇಕಾದ ಅಕ್ಕಿ ನೀವೇ ಹಾಕಿಕೊಳ್ಳಿ ಎಂದು ನ್ಯಾಯಬೆಲೆ ಅಂಗಡಿಗೆ ಬರುವ ಪಡಿತರ ಪಲನುಭವಿಗಳಿಗೆ ಸಾರ್ವಜನಿಕರಿಗೆ ದರ್ಪದಿಂದ ಹೇಳುತ್ತಾರೆ ಎಂದು ಅನೇಕ ಪಲಾನುಭವಿಗಳು ದೂರಿದ್ದಾರೆ
ಸಿಬ್ಬಂದಿಗಳ ಕೊರತೆ ಇದ್ದರೆ ಮತ್ತೋರ್ವ ಪುರುಷ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಬೇಕು ಅದನ್ನು ಬಿಟ್ಟು ನ್ಯಾಯ ಬೆಲೆ ಅಂಗಡಿಗೆ ಬಂದಂತಹ ಪಡಿತರ ಫಲಾನುಭವಿಗಳಿಗೆ ದರ್ಪದಿಂದ ಮಾತನಾಡುವುದು ಪ್ರಶ್ನೆ ಮಾಡಿದರೆ ಅಕ್ಕಿ ಸರಿ ಇಲ್ಲ ಎನ್ನುತ್ತಾರೆ ಎಂದು ಸಾರ್ವಜನಿಕರನ್ನೇ ದೂರುವುದು ನ್ಯಾಯವೇ? ಈ ಹಿಂದೆಯೂ ಕೂಡ ಇದೆ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿಗಳು ದರ್ಪದ ಮಾತುಗಳನ್ನಾಡಿದ ದೂರುಗಳು ಕೇಳಿ ಬಂದಿತ್ತು.ಎಂದು ಸಾರ್ವಜನಿಕವಾಗಿ ಮಾತು ಕೇಳಿ ಬರುತ್ತಿದೆ. ಇದರ ಬಗ್ಗೆ ಆಹಾರ ನಿರೀಕ್ಷಕರು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ಅನೇಕ ಸಾರ್ವಜನಿಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Maharashtra; ಬಿಜೆಪಿಯನ್ನು ಅಳಿಸಿ ಹಾಕುತ್ತೇವೆ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್
DhruvaThare Movie Review: ಕಹಿ ಅನುಭವದಲ್ಲಿ ಸಿಹಿ ಹುಡುಕಿ ಹೊರಟವರು..
Bollywood: ಪಾಕ್ ನಟ ಫವಾದ್ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್ ಕಂಬ್ಯಾಕ್
Sisodia; ಯಾವ ರಾವಣನಿಂದಲೂ ರಾಮ-ಲಕ್ಷ್ಮಣರನ್ನು ಬೇರ್ಪಡಿಸಲು ಸಾಧ್ಯವಿಲ್ಲ
Manipal: ಪಾರ್ಕಿಂಗ್ ತಾಣವಾಗುತ್ತಿರುವ ಬಸ್ ನಿಲ್ದಾಣಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.