ಮಲೆನಾಡ ಚಿರಾಪುಂಜಿ ಆಗುಂಬೆಯಲ್ಲೇ ನೀರಿನ ಸಮಸ್ಯೆ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಚರ್ಚೆ

ನಿಮ್ಮನೆಲ್ಲಾ ಬದಲಾವಣೆ ಮಾಡಬೇಕು: ಅಧಿಕಾರಿಗಳ ವಿರುದ್ಧ ಆರಗ ಫುಲ್ ಗರಂ

Team Udayavani, Nov 28, 2023, 3:37 PM IST

8-theerthahalli

ತೀರ್ಥಹಳ್ಳಿ: ಅತೀ ಹೆಚ್ಚು ಮಳೆ ಬೀಳುವ ಪ್ರದೇಶ ಎಂಬ ಹೆಗ್ಗಳಿಕೆಯೊಂದಿಗೆ ಮಲೆನಾಡ ಚಿರಾಪುಂಜಿ ಎಂದೇ ಖ್ಯಾತಿ ಪಡೆದಿರುವ ಆಗುಂಬೆಯಲ್ಲೇ ಈ ಬಾರಿ ಅತೀ ಹೆಚ್ಚು ನೀರಿನ ಸಮಸ್ಯೆ ಆಗಲಿದೆ. ಅದಕ್ಕಾಗಿ ಟ್ಯಾಂಕರ್ ವ್ಯವಸ್ಥೆ ಆಗಬೇಕಿದೆ ಎಂದು ಅಧಿಕಾರಿಗಳು ಶಾಸಕ ಆರಗ ಜ್ಞಾನೇಂದ್ರ ಅವರಿಗೆ ತಿಳಿಸಿದರು.

ನ.28ರ ಮಂಗಳವಾರ ತಾಲೂಕು ಕಚೇರಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಬರದಿಂದ ಒದಗುವ ಸಮಸ್ಯೆಗಳ ಕುರಿತು ಟಾಸ್ಕ್ ಫೋರ್ಸ್ ಸಭೆಯಲ್ಲಿ ಮಾತನಾಡಿದ ಅವರು ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಬೇಕು, ಗ್ರಾಮಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು ಹೆಚ್ಚಿನ ಗಮನ ವಹಿಸಬೇಕು. ಎಲ್ಲಾ ಕೆಲಸ ಶಾಸಕನಾಗಿ ನಾನು ಮಾಡಲು ಆಗುವುದಿಲ್ಲ. ಕೆಲವು ಕಡೆ ನೀರಿಗಾಗಿ ತುರ್ತು ಕಾಮಗಾರಿ ನಡೆಸಿ ಇಲ್ಲದಿದ್ದರೆ ಟ್ಯಾಂಕರ್ ವ್ಯವಸ್ಥೆ ಮಾಡಿ ಎಂದು ಹೇಳಿದರು.

ಈ ಬಾರಿ ಆಗುಂಬೆ, ಮೇಗರವಳ್ಳಿ, ಕೋಣಂದೂರು,  ಕುಡುಮಲ್ಲಿಗೆ, ಗುಡ್ಡೆಕೊಪ್ಪ, ಬಸವಾನಿ ಸೇರಿದಂತೆ ಹಲವಾರು ಗ್ರಾಮಪಂಚಾಯಿತಿಗಳಿಗೆ ನೀರಿನ ಸಮಸ್ಯೆ ಎದುರಾಗಿದ್ದು, ಇನ್ನೂ ಎರಡು ತಿಂಗಳುಗಳಲ್ಲಿ ನೀರಿನ ಸಮಸ್ಯೆ ಉಲ್ಬಣವಾಗುವ ಸಾಧ್ಯತೆ ಇದೆ. ಈಗಾಗಲೇ ಜಲಜೀವನ್ ಮಿಷನ್ ಅಡಿಯಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದ್ದು, ಅದರ ಬಗ್ಗೆ ಗ್ರಾಮಪಂಚಾಯತ್ ಅಧಿಕಾರಿಗಳು ಗಮನ‌ ವಹಿಸಿ ಜನರಿಗೆ ತೊಂದರೆ ಆಗದಂತೆ ನೀರಿನ ವ್ಯವಸ್ಥೆ ಮಾಡಿಕೊಡಬೇಕೆಂದು ತಿಳಿಸಿದರು.

ಶಾಸಕರ ಎದುರು ಅಧಿಕಾರಿಗಳು ಸೈಲೆಂಟ್!

ಜನರ ಕಷ್ಟಕ್ಕೆ ಸ್ಪಂದನೆ ಮಾಡಬೇಕಾದ ಅಧಿಕಾರಿಗಳು ಗ್ರಾ.ಪಂ. ವ್ಯಾಪ್ತಿಯಲ್ಲಿ ಕೆಲವೊಂದು ನಿರ್ಣಯಗಳನ್ನು ತೆಗೆದುಕೊಂಡು ಟಾಸ್ಕ್ ಫೋರ್ಸ್ ಸಭೆಯಲ್ಲಿ ಹೇಳಲಾಗದೆ ಸೈಲೆಂಟ್ ಆದ ಘಟನೆ ಕಂಡು ಬಂತು.

ಬಸವಾನಿ ಗ್ರಾಮಪಂಚಾಯಿತಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಗ್ರಾಮಪಂಚಾಯಿತಿ ಸದಸ್ಯರು ಬೇಡ ಎಂದು ನಿರ್ಣಯ ಮಾಡಿದ್ದಾರೆ ಎಂಬ ವಿಷಯ ಅಲ್ಲಿನ ಪಿಡಿಓ ಹೇಳಿದಕ್ಕೆ ಶಾಸಕರು ಗರಂ ಆದರು.

ಈ ಬಗ್ಗೆ ಮಾತನಾಡಿದ ಅವರು, ಜನರಿಗೆ ಶುದ್ಧ ಕುಡಿಯುವ ನೀರು ಕೊಡಲು 360 ಕೋಟಿ ಯೋಜನೆಯಲ್ಲಿ ಬಹುಗ್ರಾಮ ಕುಡಿಯುವ ಯೋಜನೆ ತಂದರೆ ಬೇಡ ಎನ್ನುವುದಾದರೆ ಜನರಿಗೆ ಸದಸ್ಯರೇ ಕುಡಿಯುವ ನೀರನ್ನು ಕೊಡಲು ಹೇಳಿ ಎಂದ ಅವರು, ನಿಮ್ಮನ್ನು ಇಟ್ಟುಕೊಂಡು ಕೆಲಸ ಮಾಡಲು ಆಗುವುದಿಲ್ಲ. ನಿಮ್ಮನೆಲ್ಲಾ ಬದಲಾವಣೆ ಮಾಡಬೇಕು. ಇಲ್ಲದಿದ್ದರೆ ಜನರಿಗೆ ಈ ಬಾರಿ ಕುಡಿಯುವ ನೀರು ಕೊಡಲು ಅಸಾಧ್ಯ ಎಂದು ಗರಂ ಆದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಜಕ್ಕಣ್ಣ ಗೌಡ ಸೇರಿದಂತೆ ಅನೇಕ ಅದಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

8-holehonnur

Holehonnur: ಹೊಸಕೊಪ್ಪ ಗ್ರಾಮದಲ್ಲಿ ಬಲಿಗಾಗಿ ಕಾದಿರುವ ಗುಂಡಿ

Dinesh-gundurao

Vaccine: ಇನ್ನೆರಡು ವರ್ಷದೊಳಗೆ ಕೆಎಫ್‌ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್‌

Theerathalli

Shivamogga: ತೀರ್ಥಹಳ್ಳಿ ತಹಶೀಲ್ದಾರ್‌ ಜಕ್ಕಣ್ಣ ಗೌಡರ್ ಹೃದಯಘಾತದಿಂದ ನಿಧನ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.