![Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ](https://www.udayavani.com/wp-content/uploads/2024/12/u1-1-415x277.jpg)
ಗೊಂದಲವಿಲ್ಲ, ಆನಂದ್ ಸಿಂಗ್-ಎಂಟಿಬಿ ಅವರ ಭಾವನೆಗಳನ್ನು ಹೇಳಿದ್ದಾರಷ್ಟೇ: ಈಶ್ವರಪ್ಪ
Team Udayavani, Aug 8, 2021, 2:38 PM IST
![k-s-eshwarappa](https://www.udayavani.com/wp-content/uploads/2021/08/k-s-eshwarappa-1-620x349.jpg)
ಶಿವಮೊಗ್ಗ: ಸಚಿವ ಸಂಪುಟ- ಖಾತೆ ಹಂಚಿಕೆಯಲ್ಲಿ ಗೊಂದಲವಿಲ್ಲ. ಆನಂದ್ ಸಿಂಗ್ ಮತ್ತು ಎಂಟಿಬಿ ನಾಗರಾಜ್ ಗೆ ಬೇರೆ ಖಾತೆ ಬೇಕೆಂದು ಹೇಳುತ್ತಿದ್ದಾರೆ. ಇದ್ಯಾವುದು ಗೊಂದಲವಲ್ಲ. ಅವರ ಭಾವನೆಗಳನ್ನು ಹೇಳಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ ಸಚಿವರಿಗೆ ಮುಖ್ಯಮಂತ್ರಿಗಳು ಸಮಾಧಾನ ಮಾಡುತ್ತಾರೆ. ಇದರಲ್ಲಿ ಬಹಳ ವಿಶೇಷವೇನಿಲ್ಲ, ಗೊಂದಲ ಸಹ ಇಲ್ಲ. ಸಿಎಂ ಚರ್ಚೆ ಮಾಡಿ ಬಗೆಹರಿಸುತ್ತಾರೆ ಎಂದರು.
ಮೇಕೆದಾಟು ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮೇಕೆದಾಟು ವಿಚಾರದಲ್ಲಿ ತಮಿಳುನಾಡಿನವರು ಅವರ ರಾಜಕಾರಣ ಅವರು ಮಾಡುತ್ತಿದ್ದಾರೆ. ಸುಪ್ರಿಂ ಕೋರ್ಟ್ ನಿರ್ಧಾರದ ಹಾಗೆ ನಾವು ಮೇಕೆದಾಟುವನ್ನು ಮಾಡಿಯೇ ಮಾಡುತ್ತೇವೆ. ಉಪವಾಸವಾದರೂ ಮಾಡಲಿ ಅದು ನಮಗೆ ಸಂಬಂಧವಿಲ್ಲ. ಅವರ ರಾಜ್ಯಕ್ಕೆ ಏನು ಬೇಕೋ ಹಾಗೇ ಪೊಲಿಟಿಕಲ್ ಆಗಿ ಯೋಚನೆ ಮಾಡುತ್ತಿರುವುದು ತಪ್ಪಲ್ಲ. ಅವರು ಅಲ್ಲಿ ಹೋರಾಟವನ್ನು ಮಾಡಿ ಪಾರ್ಟಿ ಕಟ್ಟಿಕೊಳ್ಳಲಿ. ಆದರೆ, ಸುಪ್ರಿಂ ಕೋರ್ಟ್ ತೀರ್ಪಿನ ಬಗ್ಗೆಯು ಸಹ ಅವರು ಗಮನ ಇಟ್ಟಿಕೊಳ್ಳಬೇಕು. ಮೇಕೆದಾಟು ಯೋಜನೆ ಯಾವುದೇ ಕಾರಣಕ್ಕೂ ಸಹ ನಿಲ್ಲುವುದಿಲ್ಲ ಎಂದರು.
ಇದನ್ನೂ ಓದಿ:ನನಗೆ ಸಂಪುಟದರ್ಜೆ ಸ್ಥಾನಮಾನ ಬೇಡ, ಮಾಜಿ ಸಿಎಂ ಗೆ ಕೊಡುವ ಸೌಲಭ್ಯ ಸಾಕು: ಬಿಎಸ್ ವೈ
ಬೊಮ್ಮಾಯಿ- ದೇವೇಗೌಡರ ಭೇಟಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹಾಸನದಂತಹ ಜಿಲ್ಲೆಯಲ್ಲಿ ದೇವೇಗೌಡ, ರೇವಣ್ಣ, ಕುಮಾರಸ್ವಾಮಿ ಯಂತಹ ನಾಯಕರ ನಡುವೆ ಪ್ರೀತಂ ಗೌಡ ಗೆದ್ದು ಬಂದಿದ್ದಾರೆ. ಸತತವಾಗಿ ಪಕ್ಷವನ್ನು ಕಟ್ಟಲು ಪ್ರಯತ್ನ ಮಾಡುತ್ತಿದ್ದಾರೆ. ಬೊಮ್ಮಾಯಿಯವರು ದೇವೇಗೌಡರನ್ನು ಕಾಣಲಿಕ್ಕೆ ಹೋಗಿದ್ದಾರೆ. ಇಂತಹ ಸಂದರ್ಭದಲ್ಲಿ ಭೇಟಿಯಾಗಿರುವುದು ಪ್ರೀತಂ ಗೌಡರಿಗೆ ಸಮಾಧಾನ ತಂದಿಲ್ಲ. ಆದರೆ ಬೊಮ್ಮಾಯಿ ಅವರು ಜನತಾದಳ ನಾಯಕ ದೇವೇಗೌಡರು ಎಂದು ಹೋಗಿಲ್ಲ. ಮಾಜಿ ಪ್ರಧಾನಿ, ಹಿರಿಯ ರಾಜಕಾರಣಿ, ರೈತ ನಾಯಕರು ಅಂತ ಹೋಗಿದ್ದಾರೆ. ಹೀಗಾಗಿ ಅವರ ಒಳ್ಳೆಯ ಕೆಲಸವನ್ನು ಧಾರೆ ಎರೆಯಲಿ ಎಂದು ಮತ್ತು ಆಶೀರ್ವಾದ ಪಡೆಯಲು ಹೋಗಿದ್ದಾರೆ. ನಾವು ಪ್ರೀತಂ ಗೌಡರಿಗೆ ಹೇಳಿ ಒಪ್ಪಿಸುತ್ತೇವೆ. ಇದರಿಂದ ನಮ್ಮ ಸಂಘಟನೆಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಈಶ್ವರಪ್ಪ ಹೇಳಿದರು
ಟಾಪ್ ನ್ಯೂಸ್
![Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ](https://www.udayavani.com/wp-content/uploads/2024/12/u1-1-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.