ಗೊಂದಲವಿಲ್ಲ, ಆನಂದ್ ಸಿಂಗ್-ಎಂಟಿಬಿ ಅವರ ಭಾವನೆಗಳನ್ನು ಹೇಳಿದ್ದಾರಷ್ಟೇ: ಈಶ್ವರಪ್ಪ


Team Udayavani, Aug 8, 2021, 2:38 PM IST

k-s-eshwarappa

ಶಿವಮೊಗ್ಗ: ಸಚಿವ ಸಂಪುಟ- ಖಾತೆ ಹಂಚಿಕೆಯಲ್ಲಿ ಗೊಂದಲವಿಲ್ಲ. ಆನಂದ್ ಸಿಂಗ್ ಮತ್ತು ಎಂಟಿಬಿ ನಾಗರಾಜ್ ಗೆ ಬೇರೆ ಖಾತೆ ಬೇಕೆಂದು ಹೇಳುತ್ತಿದ್ದಾರೆ. ಇದ್ಯಾವುದು ಗೊಂದಲವಲ್ಲ. ಅವರ ಭಾವನೆಗಳನ್ನು ಹೇಳಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ ಸಚಿವರಿಗೆ ಮುಖ್ಯಮಂತ್ರಿಗಳು ಸಮಾಧಾನ ಮಾಡುತ್ತಾರೆ. ಇದರಲ್ಲಿ ಬಹಳ ವಿಶೇಷವೇನಿಲ್ಲ, ಗೊಂದಲ ಸಹ ಇಲ್ಲ. ಸಿಎಂ ಚರ್ಚೆ ಮಾಡಿ ಬಗೆಹರಿಸುತ್ತಾರೆ ಎಂದರು.

ಮೇಕೆದಾಟು ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮೇಕೆದಾಟು ವಿಚಾರದಲ್ಲಿ ತಮಿಳುನಾಡಿನವರು ಅವರ ರಾಜಕಾರಣ ಅವರು ಮಾಡುತ್ತಿದ್ದಾರೆ. ಸುಪ್ರಿಂ ಕೋರ್ಟ್ ನಿರ್ಧಾರದ ಹಾಗೆ ನಾವು ಮೇಕೆದಾಟುವನ್ನು ಮಾಡಿಯೇ ಮಾಡುತ್ತೇವೆ. ಉಪವಾಸವಾದರೂ ಮಾಡಲಿ ಅದು ನಮಗೆ ಸಂಬಂಧವಿಲ್ಲ. ಅವರ ರಾಜ್ಯಕ್ಕೆ ಏನು ಬೇಕೋ ಹಾಗೇ ಪೊಲಿಟಿಕಲ್ ಆಗಿ ಯೋಚನೆ ಮಾಡುತ್ತಿರುವುದು ತಪ್ಪಲ್ಲ. ಅವರು ಅಲ್ಲಿ ಹೋರಾಟವನ್ನು ಮಾಡಿ ಪಾರ್ಟಿ ಕಟ್ಟಿಕೊಳ್ಳಲಿ. ಆದರೆ, ಸುಪ್ರಿಂ ಕೋರ್ಟ್ ತೀರ್ಪಿನ ಬಗ್ಗೆಯು ಸಹ ಅವರು ಗಮನ ಇಟ್ಟಿಕೊಳ್ಳಬೇಕು. ಮೇಕೆದಾಟು ಯೋಜನೆ ಯಾವುದೇ ಕಾರಣಕ್ಕೂ ಸಹ ನಿಲ್ಲುವುದಿಲ್ಲ ಎಂದರು.

ಇದನ್ನೂ ಓದಿ:ನನಗೆ ಸಂಪುಟದರ್ಜೆ ಸ್ಥಾನಮಾನ ಬೇಡ, ಮಾಜಿ ಸಿಎಂ ಗೆ ಕೊಡುವ ಸೌಲಭ್ಯ ಸಾಕು: ಬಿಎಸ್ ವೈ

ಬೊಮ್ಮಾಯಿ- ದೇವೇಗೌಡರ ಭೇಟಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹಾಸನದಂತಹ ಜಿಲ್ಲೆಯಲ್ಲಿ ದೇವೇಗೌಡ, ರೇವಣ್ಣ, ಕುಮಾರಸ್ವಾಮಿ ಯಂತಹ ನಾಯಕರ ನಡುವೆ ಪ್ರೀತಂ ಗೌಡ ಗೆದ್ದು ಬಂದಿದ್ದಾರೆ‌. ಸತತವಾಗಿ ಪಕ್ಷವನ್ನು ಕಟ್ಟಲು ಪ್ರಯತ್ನ ಮಾಡುತ್ತಿದ್ದಾರೆ. ಬೊಮ್ಮಾಯಿಯವರು ದೇವೇಗೌಡರನ್ನು ಕಾಣಲಿಕ್ಕೆ ಹೋಗಿದ್ದಾರೆ. ಇಂತಹ ಸಂದರ್ಭದಲ್ಲಿ ಭೇಟಿಯಾಗಿರುವುದು ಪ್ರೀತಂ ಗೌಡರಿಗೆ ಸಮಾಧಾನ ತಂದಿಲ್ಲ. ಆದರೆ ಬೊಮ್ಮಾಯಿ ಅವರು ಜನತಾದಳ ನಾಯಕ ದೇವೇಗೌಡರು ಎಂದು ಹೋಗಿಲ್ಲ. ಮಾಜಿ ಪ್ರಧಾನಿ, ಹಿರಿಯ ರಾಜಕಾರಣಿ, ರೈತ ನಾಯಕರು ಅಂತ ಹೋಗಿದ್ದಾರೆ. ಹೀಗಾಗಿ ಅವರ ಒಳ್ಳೆಯ ಕೆಲಸವನ್ನು ಧಾರೆ ಎರೆಯಲಿ ಎಂದು ಮತ್ತು ಆಶೀರ್ವಾದ ಪಡೆಯಲು ಹೋಗಿದ್ದಾರೆ. ನಾವು ಪ್ರೀತಂ ಗೌಡರಿಗೆ ಹೇಳಿ ಒಪ್ಪಿಸುತ್ತೇವೆ. ಇದರಿಂದ ನಮ್ಮ ಸಂಘಟನೆಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಈಶ್ವರಪ್ಪ ಹೇಳಿದರು

ಟಾಪ್ ನ್ಯೂಸ್

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.