Thirthahalli: ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ… ಶಿಕ್ಷಕನ ಬಂಧನ, ಫೋಕ್ಸೋ ಕೇಸ್ ದಾಖಲು


Team Udayavani, Aug 21, 2024, 8:45 PM IST

Thirthahalli: ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ… ಶಿಕ್ಷಕನ ಬಂಧನ, ಫೋಕ್ಸೋ ಕೇಸ್ ದಾಖಲು

ತೀರ್ಥಹಳ್ಳಿ: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದ ಮೇಲೆ ಇಲ್ಲಿನ ಮುರಾರ್ಜಿ ವಸತಿ ಶಾಲೆಯ ಸಂಗೀತ ಶಿಕ್ಷಕ ಇಮ್ತಿಯಾಜ್ ಎಂಬಾತನನ್ನು ಬಂಧಿಸಲಾಗಿದ್ದು ಆರೋಪಿಯ ವಿರುದ್ದ ಫೋಕ್ಸೋ ಕೇಸ್ ದಾಖಲಿಸಲಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ತಿಳಿಸಿದರು.

ಬುಧವಾರ ಇಲ್ಲಿನ ಪೋಲಿಸ್ ಠಾಣೆಯಲ್ಲಿ ಶಾಸಕ ಆರಗ ಜ್ಞಾನೇಂದ್ರ ನೇತೃತ್ವದ ಪ್ರಮುಖರ ಸಮ್ಮುಖದಲ್ಲಿ ಈ ಘಟನೆಯ ಬಗ್ಗೆ ವಿವರಣೆ ನೀಡಿ, ಹತ್ತಕ್ಕೂ ಹೆಚ್ಚು ವಿದ್ಯಾರ್ಥಿನಿಯರು ತಮ್ಮೊಂದಿಗೆ ಆರೋಪಿ ಅನುಚಿತವಾಗಿ ವರ್ತಿಸುತ್ತಿರುವುದಾಗಿ ಶಾಲೆಯ ಪ್ರಿನ್ಸಿಪಾಲರಿಗೆ ಲಿಖಿತ ದೂರು ನೀಡಿದ್ದು ಈ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತಿದೆ. 12 ವರ್ಷಗಳಿಂದ ಇಲ್ಲಿಯೆ ಕೆಲಸ ನಿರ್ವಹಿಸುತ್ತಿದ್ದ ಆತ ಮಹಿಳಾ ಸಿಬ್ಬಂದಿಗಳ ಜೊತೆಯಲ್ಲೂ ಕೆಟ್ಟದಾಗಿ ವರ್ತಿಸಿರುವುದು ಪ್ರಾಥಮಿಕ ಹಂತದ ತನಿಖೆಯಲ್ಲಿ ನಮ್ಮ ಗಮನಕ್ಕೆ ಬಂದಿದೆ. ಈ ಪ್ರಕರಣದಲ್ಲಿ ಯಾವುದೇ ಒತ್ತಡಕ್ಕೂ ಮಣಿಯುವುದಿಲ್ಲಾ ಎಂದೂ ತಿಳಿಸಿದರು.

ಈ ಘಟನೆ ಮಂಗಳವಾರ ಮಧ್ಯಾಹ್ನದ ವೇಳೆಗಷ್ಟೇ ನಮಗೆ ಮಾಹಿತಿ ದೊರೆತಿದ್ದು ತಲೆ ತಪ್ಪಿಸಿಕೊಳ್ಳುವ ಯತ್ನದಲ್ಲಿದ್ದ ಆರೋಪಿಯ ಬೆನ್ನು ಹತ್ತಿದ ನಮ್ಮ ಸಿಬ್ಬಂದಿಗಳು ಅದೇ ದಿನ ರಾತ್ರಿ ಸಿನಿಮೀಯ ಘಟನೆಯ ರೀತಿಯಲ್ಲಿ ನೆಲಮಂಗಲದ ಸಮೀಪ ಅಲ್ಲಿನ ಡಿವೈಎಸ್‌ಪಿ ನೆರವಿನಿಂದ ಮಿಂಚಿನ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ ಎಂದೂ ಮೆಚ್ಚುಗೆ ವ್ಯಕ್ತಪಡಿಸಿದರು. ಸಂತ್ರಸ್ಥ ವಿಧ್ಯಾರ್ಥಿನಿಯರಿಗೆ ಸಾಂತ್ವನದ ಮಾತುಗಳನ್ನೂ ಹೇಳಲಾಗಿದೆ ಮತ್ತು ಮಫ್ತಿಯಲ್ಲಿ ಮಹಿಳಾ ಸಿಬ್ಬಂದಿಗಳನ್ನು ಕಾವಲಿಗೆ ನಿಯೋಜಿಸಲಾಗಿದೆ ಎಂದರು.

ಆರೋಪಿಯ ಪತ್ನಿ ಕೊಪ್ಪ ತಾಲೂಕಿನ ಬಾಳೆಹೊನ್ನೂರಿನಲ್ಲಿದ್ದು ಅಲ್ಲಿನ ಮನೆಯಿಂದ ಬಟ್ಟೆಯನ್ನು ಹೊಂದಿಸಿಕೊಂಡು ಚಿಕ್ಕಮಗಳೂರು ಮಾರ್ಗವಾಗಿ ಬೆಂಗಳೂರಿಗೆ ಹೊರಟಿದ್ದ. ಚಿಕ್ಕಮಗಳೂರು ಬಸ್ ನಿಲ್ದಾಣದ ಸಿಸಿ ಟಿವಿಯಲ್ಲಿ ದೊರೆತ ಆತ ತೊಟ್ಟಿದ್ದ ಅಂಗಿಯ ಬಣ್ಣದ ಮಾಹಿತಿ ಪೋಲಿಸರಿಗೆ ಆರೋಪಿಯನ್ನು ಬಂಧಿಸುವಲ್ಲಿ ಸಹಕಾರಿಯಾಗಿದೆ ಎಂದೂ ವಿವರಿಸಿದರು.

ಡಿವೈಎಸ್‌ಪಿ ಗಜಾನನ ಸುತಾರ್ ಹಾಗೂ ಪೋಲಿಸ್ ಇನ್ಸ್ ಪೆಕ್ಟರ್ ಅಶ್ವಥ್ ಗೌಡ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆಯ ತಂಡದಲ್ಲಿ ಪಿಎಸ್‌ಐ ಶಿವನಗೌಡ, ಎಚ್‌ಸಿ ಲಿಂಗನಗೌಡ ಹಾಗೂ ಕಾನ್ಸ್ಟೇಬಲ್ ವೀರೇಂದ್ರ ಇದ್ದರು.

ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ಈ ಘಟನೆ ತಾಲೂಕಿನ ಘನತೆಗೆ ಮಸಿ ಬಳಿಯುವಂತಿದ್ದು ನಂದಿತಾ ಪ್ರಕರಣದಂತೆ ಉದ್ವಿಗ್ನ ಸ್ಥಿತಿಗೆ ತಲುಪುವ ಮುನ್ನ ಆರೋಪಿಯನ್ನು ಬಂಧಿಸಿರುವುದು ಪ್ರಶಂಸನೀಯವಾಗಿದೆ. ಇಂತಹ ಹೇಯಕೃತ್ಯಕ್ಕೆ ಕಾರಣನಾದ ಆರೋಪಿಯನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದೂ ಆಗ್ರಹಿಸಿದರು.

ಡಿವೈಎಸ್‌ಪಿ ಗಜಾನನ ವಾಮನ ಸುತಾರ ಹಾಗೂ ಪೋಲಿಸ್ ಇನ್ಸ್ ಪೆಕ್ಟರ್ ಅಶ್ವಥ್ ಗೌಡ, ಬಿಜೆಪಿ ಪ್ರಮುಖರಾದ ಹೆದ್ದೂರು ನವೀನ್, ಮೋಹನಭಟ್, ಸೊಪ್ಪುಗುಡ್ಡೆ ರಾಘವೇಂದ್ರ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.

ಇದನ್ನೂ ಓದಿ: ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

1-sadsadasd

Ganesh festival; ಡೋಲು-ತಾಸೆಯವರ ಸಂಖ್ಯೆಗೆ NGT ನಿರ್ಬಂಧಕ್ಕೆ ಸುಪ್ರೀಂ ತಡೆ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

1-ffsdf

Chikkaballapur ನಗರಸಭೆ ಕೋಲಾಹಲ; ಡಾ.ಸುಧಾಕರ್ ಮೇಲುಗೈ: ಸವಾಲು ಹಾಕಿದ ಪ್ರದೀಪ್ ಈಶ್ವರ್!

HDK

Nagamangala Riots: ಗಲಭೆಗೆ ಕಾಂಗ್ರೆಸ್‌ ಸರಕಾರದ ತುಷ್ಟೀಕರಣ ನೀತಿಯೇ ಕಾರಣ: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ffsdf

Chikkaballapur ನಗರಸಭೆ ಕೋಲಾಹಲ; ಡಾ.ಸುಧಾಕರ್ ಮೇಲುಗೈ: ಸವಾಲು ಹಾಕಿದ ಪ್ರದೀಪ್ ಈಶ್ವರ್!

HDK

Nagamangala Riots: ಗಲಭೆಗೆ ಕಾಂಗ್ರೆಸ್‌ ಸರಕಾರದ ತುಷ್ಟೀಕರಣ ನೀತಿಯೇ ಕಾರಣ: ಎಚ್‌ಡಿಕೆ

If all goes well in BJP, he will soon return to the party: KS Eshwarappa

Eshwarappa: ಬಿಜೆಪಿಯಲ್ಲಿ ಎಲ್ಲಾ ಸರಿಯಾದರೆ ಶೀಘ್ರ ಪಕ್ಷಕ್ಕೆ ಮರಳುವೆ: ಕೆ.ಎಸ್.ಈಶ್ವರಪ್ಪ

Eco Park: ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿರುವ ದಾಂಡೇಲಿಯ ದಂಡಕಾರಣ್ಯ ಇಕೋ ಪಾರ್ಕ್

Eco Park: ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿರುವ ದಾಂಡೇಲಿಯ ದಂಡಕಾರಣ್ಯ ಇಕೋ ಪಾರ್ಕ್

pramod muthalik

Haveri; ಮುಸ್ಲಿಮರನ್ನು ಬಹಿಷ್ಕರಿಸಿ, ಅವರ ಜತೆ ಯಾವುದೇ ವ್ಯವಹಾರ ಮಾಡಬೇಡಿ: ಮುತಾಲಿಕ್‌ ಕಿಡಿ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

1-baghi

Hombale Films ಬಹು ನಿರೀಕ್ಷಿತ ಬಘೀರ ಚಿತ್ರದ ರಿಲೀಸ್ ಡೇಟ್ ಘೋಷಣೆ

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Ronny actress Samikshaa

Ronny ಗೆಲ್ಲುವ ಸಿನಿಮಾ: ನಟಿ ಸಮೀಕ್ಷಾ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.