Thirthahalli: ರಸ್ತೆಗಿಳಿದ ಪೊಲೀಸರು; ಶಾಲಾ ವಾಹನಗಳಿಗೆ ಖಡಕ್ ಎಚ್ಚರಿಕೆ!
Team Udayavani, Jun 25, 2024, 6:57 PM IST
ತೀರ್ಥಹಳ್ಳಿ: ಪಟ್ಟಣದಲ್ಲಿ ಮಂಗಳವಾರ ಬೆಳ್ಳಂ ಬೆಳಗ್ಗೆ ಕೊಪ್ಪ ಸರ್ಕಲ್ ನಲ್ಲಿ ದಕ್ಷ ಪೊಲೀಸ್ ಅಧಿಕಾರಿ ಡಿವೈಎಸ್ಪಿ ಗಜಾನನ ವಾಮನ ಸುತಾರ ಮಾರ್ಗದರ್ಶನದಲ್ಲಿ ಸಬ್ ಇನ್ಸ್ ಪೆಕ್ಟರ್ ಶಿವನಗೌಡ, ವಿರೇಂದ್ರ, ಮಂಜುನಾಥ್ ನಾಯಕ್, ಸುಧಾಕರ್, ದೀಪಕ್, ಸುರೇಂದ್ರ ಸೇರಿದಂತೆ ಇನ್ನಿತರ ಪೊಲೀಸರು ಸುರಿಯುವ ಮಳೆಯನ್ನು ಲೆಕ್ಕಿಸದೆ ರಸ್ತೆಗಿಳಿದು ಶಾಲಾ ವಾಹನಗಳಿಗೆ ಸುರಕ್ಷತೆ ದೃಷ್ಟಿಯಿಂದ ರಸ್ತೆಯ ನಿಯಮಾವಳಿಗಳನ್ನು ಪಾಲನೆ ಮಾಡಲು ಮನವಿ ಮಾಡಿದರು.
ಶಾಲಾ ವಾಹನಗಳಲ್ಲಿ ಮಕ್ಕಳ ಸುರಕ್ಷತೆ ಹೇಗಿರಬೇಕು?
- ನಿಗದಿಪಡಿಸಿದ ಸಂಖ್ಯೆಯ ಶಾಲಾ ಮಕ್ಕಳು ಮಾತ್ರ ಬಸ್ಸುಗಳಲ್ಲಿ ಪ್ರಯಾಣಿಸುವಂತೆ ಅಗತ್ಯ ಕ್ರಮಕೈಗೊಳ್ಳುವುದು. ನಿಗದಿತ ಸಂಖ್ಯೆಗಿಂತ
ಹೆಚ್ಚಿನ ಮಕ್ಕಳನ್ನು ಶಾಲಾ ಬಸ್ಸುಗಳಲ್ಲಿ ಪ್ರಯಾಣಿಸಲು ಅನುಮತಿ ನೀಡುವುದು ಕಾನೂನು ಬಾಹಿರವಾಗಿರುತ್ತದೆ.
- ಶಾಲಾ ಮಕ್ಕಳು ಪುಟ್ ಬೋರ್ಡ್ಗಳಲ್ಲಿ ನಿಲ್ಲದೇ ಇರುವುದನ್ನು ಖಾತ್ರಿಪಡಿಸಿಕೊಳ್ಳುವುದು.
- ಶಾಲಾ ಮಕ್ಕಳ ಬಸ್ಸುಗಳ ಚಾಲಕರು ಕಡ್ಡಾಯವಾಗಿ ಚಾಲನ ಪರವಾನಿಗೆ ಹೊಂದಿರುವುದನ್ನು ಖಾತ್ರಿಪಡಿಸಿಕೊಳ್ಳುವುದು.
- ಜಾಸ್ತಿ ಹೆಣ್ಣು ಮಕ್ಕಳು ಪ್ರಯಾಣಿಸುವ ಬಸ್ಸುಗಳಿಗೆ ಮಹಿಳಾ ನಿರ್ವಾಹಕರನ್ನು ನೇಮಕಮಾಡುವುದು.
- ಶಾಲಾ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಬಸ್ಸುಗಳಲ್ಲಿ ಸಿಸಿ ಕ್ಯಾಮರ, ಫೈರ್ ಎಸ್ಟಿಂಗ್ ವಿಷರ್, ಫಸ್ಟ್ ಏಯ್ಡ್ ಬಾಕ್ಸ್ಗಳನ್ನು ಕಡ್ಡಾಯವಾಗಿ ಇರಿಸುವುದು.
- ಶಾಲಾಮಕ್ಕಳ ಬಸ್ಸುಗಳ ಚಾಲಕರು ಮತ್ತು ನಿರ್ವಾಹಕರು ಸಮವಸ್ತ್ರದಲ್ಲಿರುವಂತೆ ನೋಡಿಕೊಳ್ಳುವುದು.
- ಶಾಲಾ ಮಕ್ಕಳ ಬಸ್ಸುಗಳಲ್ಲಿ ಯಾವುದೇ ರೀತಿಯ ಟೆಕ್ನಿಕಲ್ ಡಿಫೆಕ್ಟಗಳು ಇಲ್ಲದಂತೆ ಕಾಲಕಾಲಕ್ಕೆ ತಪಾಸಣೆಗೊಳಪಡಿಸುವುದು. ಎಮರ್ಜೆನ್ಸಿ ಎಕ್ಸಿಟ್ ಡೋರ್ ಇರುವುದನ್ನು ಖಾತ್ರಿಪಡಿಸಿಕೊಳ್ಳುವುದು. ವಾಹನಗಳನ್ನು ಉತ್ತಮವಾಗಿ ನಿರ್ವಹಣೆ ಮಾಡುವುದು.
- ಶಾಲಾಬಸ್ಸುಗಳ ಆರ್.ಸಿ., ಇನ್ನೂರನ್ಸ್, ಎಮಿಷನ್ ಸರ್ಟಿಫಿಕೇಟ್ ಇತ್ಯಾದಿ ದಾಖಲೆಗಳನ್ನು ಸಮಪರ್ಕವಾಗಿ ನಿರ್ವಹಣೆ ಮಾಡುವುದು.
- ಶಾಲಾ ವಾಹನಗಳ ಚಾಲಕರು ಮೊಬೈಲ್ ಫೋನ್, ಬ್ಲೂಟೂಥ್ಗಳನ್ನು ಬಳಸದಂತೆ ನೋಡಿಕೊಳ್ಳುವುದು ಮತ್ತು ಕಣ್ಣುಕುಕ್ಕುವ ಹೆಡ್ಲೈಟ್ಗಳನ್ನು ಬಳಸಬಾರದು.
ಮೇಲ್ಕಂಡ ಸೂಚನೆಗಳನ್ನು ಪಾಲನೆ ಮಾಡದೇ ಇದ್ದಲ್ಲಿ ಸಂಬಂಧಿಸಿದವರ ವಿರುದ್ಧ ಸಿಎಂವಿ ಕಾಯ್ದೆ ಅನ್ವಯ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM Change Issue; ಹೈಕಮಾಂಡ್ ನಿಯಮಗಳನ್ನು ಪಾಲಿಸುತ್ತೇವೆ.. ಮಧು ಬಂಗಾರಪ್ಪ ಪ್ರತಿಕ್ರಿಯೆ
Shimoga; ರಾಜ್ಯ ಸರ್ಕಾರ ಮತದಾರರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ: ಬಿ.ವೈ.ರಾಘವೇಂದ್ರ
Shimoga; ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ ಆರೋಪ
Thirthahalli: ಕಳ್ಳತನಕ್ಕೆ ಬಂದವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು !
Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು
MUST WATCH
ಹೊಸ ಸೇರ್ಪಡೆ
Excise Policy Case: ಅರವಿಂದ್ ಕೇಜ್ರಿವಾಲ್ ಗೆ 14 ದಿನಗಳ ನ್ಯಾಯಾಂಗ ಬಂಧನ : ಕೋರ್ಟ್
Operation Azm-i-Istehkam; ಅಮೆರಿಕದ ಬಳಿ ಸಣ್ಣ ಶಸ್ತ್ರಾಸ್ತ್ರಗಳನ್ನು ಕೇಳಿದ ಪಾಕಿಸ್ಥಾನ
Actors: ಪಾಕಿಸ್ತಾನದ ಸಿನಿಮಾರಂಗದಲ್ಲೂ ಬಣ್ಣ ಹಚ್ಚಿ ಮಿಂಚಿರುವ ಭಾರತೀಯ ಕಲಾವಿದರಿವರು..
Sandalwood; ಟ್ರೇಲರ್ನಲ್ಲಿ ‘ತಾಜ್’ ಪ್ರೀತಿ; ಹೊಸಬರ ಚಿತ್ರ ತೆರೆಗೆ ಸಿದ್ಧ
Byndoor; ರಾಜಕಾರಣ ನಿಂತ ನೀರಲ್ಲ, ಧೃತಿಗೆಡದೆ ಪಕ್ಷ ಸಂಘಟಿಸಿ: ಲಕ್ಷ್ಮೀ ಹೆಬ್ಬಾಳಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.