Election: ಪಟ್ಟಣ ಪಂಚಾಯತ್ ಚುನಾವಣೆ… ತೀರ್ಥಹಳ್ಳಿಯಲ್ಲಿ ರೆಸಾರ್ಟ್ ರಾಜಕೀಯ?

ಅಸಾದಿಯತ್ತ ಅದೃಷ್ಟ!? ಜಯಪ್ರಕಾಶ್'ಗೆ ಜಯಲಕ್ಷ್ಮಿ ಒಲಿಯುತ್ತಾಳ?

Team Udayavani, Aug 26, 2024, 12:43 PM IST

Thirthahalli: ಪಟ್ಟಣ ಪಂಚಾಯತ್ ಚುನಾವಣೆ… ತೀರ್ಥಹಳ್ಳಿಯಲ್ಲಿ ರೆಸಾರ್ಟ್ ರಾಜಕೀಯ?

ತೀರ್ಥಹಳ್ಳಿ : ಪಟ್ಟಣ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಗೆ ಇನ್ನು ಒಂದೇ ದಿನ ಬಾಕಿ ಇದ್ದು ಯಾರು ಗದ್ದುಗೆ ಏರಲಿದ್ದಾರೆ ಎಂಬ ಕುತೂಹಲ ಒಂದೆಡೆ ಆದರೆ ರಾಜಕೀಯದಲ್ಲಿ ಏನಾದರು ಬದಲಾವಣೆ ಆಗುವ ಸಾಧ್ಯತೆ ಹೆಚ್ಚಿರುವುದರಿಂದ ರೆಸಾರ್ಟ್ ರಾಜಕಾರಣ ಆರಂಭವಾಗಿದೆ.

ಹೌದು ತೀರ್ಥಹಳ್ಳಿಯಲ್ಲಿ ಈ ಹಿಂದೆ 20 ವರ್ಷಗಳಿಗೂ ಅಧಿಕ ಕಾಲ ಬಿಜೆಪಿ ಅಧಿಕಾರವನ್ನು ತನ್ನ ಹಿಡಿತದಲ್ಲಿ ಇಟ್ಟುಕೊಂಡಿತ್ತು. ಆದರೆ ಕಳೆದ ಚುನಾವಣೆಯಲ್ಲಿ ಜೋಡೆತ್ತುಗಳ ರೀತಿಯಲ್ಲಿ ಅಖಾಡಕ್ಕೆ ಧುಮುಕಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹಾಗೂ ಕಾಂಗ್ರೆಸ್ ರಾಜ್ಯ ನಾಯಕ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಆರ್ ಎಂ ಮಂಜುನಾಥ ಗೌಡರ ರಾಜಕೀಯ ತಂತ್ರದಿಂದ ಕಾಂಗ್ರೆಸ್ ತನ್ನತ್ತ ಅಧಿಕಾರವನ್ನು ವಶಪಡಿಸಿಕೊಂಡಿತು. ಅದರಲ್ಲೂ ಎರಡೂವರೆ ವರ್ಷಗಳ ಕಾಲ ಅಧಿಕಾರ ನಡೆಸಿ ಈಗ ಮತ್ತೊಮ್ಮೆ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆ ಹಿನ್ನಲೆಯಲ್ಲಿ ಯಾರನ್ನು ಗದ್ದುಗೆಗೆ ಏರಿಸಬೇಕು ಎಂಬುದು ಮುಖಂಡರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ.

ರೆಸಾರ್ಟ್ ರಾಜಕಾರಣದತ್ತ ರಾಜಕಾರಣಿಗಳು!?
ಈಗಾಗಲೇ ಮತ್ತೊಮ್ಮೆ ಅಧಿಕಾರ ಉಳಿಸಿಕೊಳ್ಳಲು ಪಣ ತೊಟ್ಟಿರುವ ಕಾಂಗ್ರೆಸ್ ಮುಖಂಡರು ಏನೆಲ್ಲಾ ಕಸರತ್ತು ಮಾಡಬೇಕೋ ಅದನ್ನು ಎರಡು ಮೂರು ದಿನಗಳಿಂದ ಮಾಡುತ್ತಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆ ಉದಯವಾಣಿ ಆಪರೇಷನ್ ಕಮಲ ಆಗುವ ಸಾಧ್ಯತೆ ಇದೆ ಎಂಬ ವಿಷಯವನ್ನು ವರದಿ ಮಾಡಿತ್ತು. ವರದಿ ಬೆನಲ್ಲೇ ಎಚ್ಚೆತ್ತ ಮುಖಂಡರು ಪಟ್ಟಣ ಪಂಚಾಯತ್ ಕಾಂಗ್ರೆಸ್ ಜನಪ್ರತಿನಿಧಿಗಳ ಜೊತೆಗೆ ಭಾನುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಿಸಿ ಬಿಸಿ ಚರ್ಚೆ ನಡೆಸಿ ಸಂಜೆಯ ವೇಳೆಗೆ ಅವರೆಲ್ಲರನ್ನು ರೆಸಾರ್ಟ್ ಗೆ ಕರೆದುಕೊಂಡು ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಅದರ ಜೊತೆಗೆ ಪ್ರತಿಯೊಬ್ಬ ಸದಸ್ಯರಿಗೂ ಚುನಾವಣೆ ಹಿನ್ನಲೆಯಲ್ಲಿ ವಿಪ್ ಜಾರಿ ಮಾಡಿದ್ದೂ ನಾಳೆ ನಡೆಯುವ ಚುನಾವಣೆ ಭಾರಿ ಕುತೂಹಲ ಮೂಡಿಸಿದೆ. ಅಧ್ಯಕ್ಷರು ಯಾರಾಗ್ತಾರೆ? ನಾಳೆ ಮತ ಚಲಾವಣೆ ಮಾಡುವಾಗ ಏನಾದರು ಬದಲಾವಣೆ ಆಗುತ್ತಾ? ಎಂಬುದೇ ಕುತೂಹಲಕ್ಕೆ ಕಾರಣವಾಗಿದೆ.

ಅಸಾದಿಗೆ ಅದೃಷ್ಟ!? ಜಯಪ್ರಕಾಶ್ ಗೆ ಜಯಲಕ್ಷ್ಮಿ ಆಶೀರ್ವಾದ!?
ಆಪರೇಷನ್ ಕಮಲ ಆಗದಂತೆ ನೋಡಿಕೊಂಡಿರುವ ಕಾಂಗ್ರೆಸ್ ಮುಖಂಡರು ಈಗ ಯಾರಿಗೆ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನ ಕೊಡಿಸುತ್ತಾರೆ ಎಂಬ ಚರ್ಚೆಗೆ ಬರುತ್ತಿರುವ ಮೊದಲ ಹೆಸರು ರಹಮತುಲ್ಲಾ ಅಸಾದಿ. ಹೌದು ಜನರ ಜೊತೆಗೆ ನಿಕಟ ಸಂಪರ್ಕ, ಅಧಿಕಾರಿಗಳ ಜೊತೆಗೆ ಚರ್ಚೆ, ಮಂತ್ರಿಗಳಿಂದ ಕೆಲಸ ಮಾಡಿಸಿಕೊಳ್ಳುವ ಚಾಣಾಕ್ಷತನ, ಹಾಗೂ ಈ ಹಿಂದೆ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದ ಅನುಭವ ಇನ್ನೂ ಹೆಚ್ಚು ಹೆಚ್ಚು ಪಟ್ಟಣದ ಅಬಿವೃದ್ಧಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂಬ ಮನದಾಸೆ ಹೊಂದಿರುವ ಅಸಾದಿಗೆ ಅದೃಷ್ಟ ಲಕ್ಷ್ಮೀ ಒಲಿಯುವ ಸಾಧ್ಯತೆ ಬಹುತೇಕ ಖಚಿತವಾಗಿದೆ ಎಂಬ ಮಾತು ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿದೆ.

ಒಂದು ವೇಳೆ ಮತ ಚಲಾವಣೆಯಲ್ಲಿ ಅಸಾದಿ ಹೊರತು ಪಡಿಸಿದರೆ ಜಯಪ್ರಕಾಶ್ ಶೆಟ್ಟಿಗೆ ಜಯಲಕ್ಷ್ಮಿ ಒಲಿಯುವ ಸಾಧ್ಯತೆ ಹೆಚ್ಚಿದೆ. ಈಗಾಗಲೇ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿರುವ ಜಯಪ್ರಕಾಶ್ ಶೆಟ್ಟಿ ಅಧ್ಯಕ್ಷರಾಗಿ ಕುರ್ಚಿ ಮೇಲೆ ಕೂರಬಹುದು ಎಂಬ ಮಾತು ಕೂಡ ಕೇಳಿ ಬಂದಿದೆ.

ಒಟ್ಟಿನಲ್ಲಿ ನಾಳೆ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ನಡೆಯುವ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆ ಭಾರಿ ಕುತೂಹಲ ಮೂಡಿಸಿದ್ದು ಪಟ್ಟಣ ಪಂಚಾಯಿತಿ ಗದ್ದುಗೆ ಕುರ್ಚಿ ಮೇಲೆ ಯಾರು ಕೂರುತ್ತಾರೆ ಎಂದು ಕಾದು ನೋಡಬೇಕಿದೆ. ಇತ್ತ ಈ ವಿಷಯದಲ್ಲಿ ಪಟ್ಟಣದ ಸಾರ್ವಜನಿಕರು ಕುತೂಹಲದಿಂದ ಚರ್ಚೆ ಮಾಡುತ್ತಿರುವ ಬಗ್ಗೆ ಮಾತು ಕೂಡ ಕೇಳಿ ಬರುತ್ತಿದೆ.

ಇದನ್ನೂ ಓದಿ: ಕೊಟ್ಟಿಗೆಹಾರ: ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ… ವಿದ್ಯಾರ್ಥಿಗಳು, ಪೋಷಕರಿಂದ ಪ್ರತಿಭಟನೆ

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.