![Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ](https://www.udayavani.com/wp-content/uploads/2024/07/CAR-415x217.jpg)
Traffic ನಿಯಮ; ಆಟೋ ಚಾಲಕರಿಗೆ ದೇವರ ಮೇಲೆ ಆಣೆ ಮಾಡಿಸಿದ ಪೊಲೀಸರು
ಶಿವಮೊಗ್ಗದಲ್ಲಿ ಹಲವು ಆಟೋಗಳನ್ನು ವಶಕ್ಕೆ ಪಡೆದ ಪೊಲೀಸರು
Team Udayavani, Jun 29, 2024, 8:03 PM IST
![1-weweewqwqewqewqe](https://www.udayavani.com/wp-content/uploads/2024/06/1-weweewqwqewqewqe-620x351.jpg)
ಶಿವಮೊಗ್ಗ: ಸಂಚಾರ ನಿಯಮ ಉಲ್ಲಂಘಿಸಿದ ಆಟೋ ಚಾಲಕರಿಗೆ “ಇನ್ಮುಂದೆ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡುವುದಿಲ್ಲ” ಎಂದು ದೇವರ ಮೇಲೆ ಆಣೆ ಮಾಡಿಸಿದ ಘಟನೆ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ನಡೆಯಿತು.
ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯ ವಿವಿಧೆಡೆ ಸಂಚಾರ ನಿಯಮ ಉಲ್ಲಂಘಿಸಿದ 25 ಆಟೋಗಳನ್ನು ವಶಕ್ಕೆ ಪಡೆಯಲಾಯಿತು. ಆಟೋಗಳ ದಾಖಲೆ ಪರಿಶೀಲಿಸಿದ ಸಂಚಾರ ಪೊಲೀಸರು, ದಂಡ ವಿಧಿಸಿದರು. ಬಳಿಕ ಆಟೋ ಚಾಲಕರಿಂದ ಪ್ರಮಾಣ ಮಾಡಿಸಿದರು.
“ಇನ್ಮುಂದೆ ಸಂಚಾರ ನಿಯಮ ಉಲ್ಲಂಘನೆ ಮಾಡುವುದಿಲ್ಲ.ಆಟೋಗೆ ಸಂಬಂಧಿಸಿದ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳುತ್ತೇನೆ ಎಂದು ದೇವರ ಮೇಲೆ ಪ್ರಮಾಣ ಮಾಡುತ್ತೇನೆ’ ಎಂದು ಆಟೋ ಚಾಲಕರು ಪ್ರತಿಜ್ಞೆ ಸ್ವೀಕರಿಸುವಂತೆ ಮಾಡಲಾಯಿತು. ದೇವರ ಮೇಲೆ ಪ್ರಮಾಣ ಮಾಡಿದರೆ ಭಯ, ಭಕ್ತಿಯಿಂದ ನಡೆದುಕೊಳ್ಳಬಹುದು ಎಂಬ ನಂಬಿಕೆಯೊಂದಿಗೆ ಪಶ್ಚಿಮ ಸಂಚಾರ ಠಾಣೆ ಪಿಎಸ್ಐ ತಿರುಮಲೇಶ್ ಅವರು ವಿಭಿನ್ನವಾಗಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದರು.
ಕಾರ್ಯಾಚರಣೆಯಲ್ಲಿ ಪಶ್ಚಿಮ ಸಂಚಾರ ಠಾಣೆಯ ಎಎಸ್ಐ ಕೃಷ್ಣಪ್ಪ, ಪ್ರಶಾಂತ್, ಪ್ರಕಾಶ್, ಸುರೇಶ್, ಕಿರಣ್, ಹರೀಶ್, ಪ್ರವೀಣ್, ಚಂದ್ರು ಭಾಗವಹಿಸಿದ್ದರು.
ಟಾಪ್ ನ್ಯೂಸ್
![Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ](https://www.udayavani.com/wp-content/uploads/2024/07/CAR-415x217.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-csaddasd](https://www.udayavani.com/wp-content/uploads/2024/07/1-csaddasd-150x85.jpg)
Hosanagara: ಅಪಘಾತವಾಗಿ ಪಲ್ಟಿಯಾದ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಸರಕಾರಿ ಬಸ್
![1-sagara](https://www.udayavani.com/wp-content/uploads/2024/07/1-sagara-150x94.jpg)
Sagara; ಮರ ಕತ್ತರಿಸುತ್ತಿದ್ದಾಗ ಕೊಂಬೆ ಬಿದ್ದು ವ್ಯಕ್ತಿ ಸಾವು
![Sagara: ತಮ್ಮ ವ್ಯಾಪ್ತಿಯಲ್ಲೇ ಕೆಲಸ ಮಾಡಲು ವಿಎಗಳಿಗೆ ಸೂಚನೆ; ಕಾಗೋಡು ಆಗ್ರಹ](https://www.udayavani.com/wp-content/uploads/2024/07/thimmappa-150x100.jpg)
Sagara: ತಮ್ಮ ವ್ಯಾಪ್ತಿಯಲ್ಲೇ ಕೆಲಸ ಮಾಡಲು ವಿಎಗಳಿಗೆ ಸೂಚನೆ; ಕಾಗೋಡು ಆಗ್ರಹ
![ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಕೆ.ಎಸ್ ಈಶ್ವರಪ್ಪ](https://www.udayavani.com/wp-content/uploads/2024/07/ks-es-150x83.jpg)
Shimoga; ಮಠಾಧೀಶರಿಗೆ ದೇವರ ಸ್ಥಾನ ಕೊಟ್ಟಿದ್ದೇವೆ, ಆದರೆ ಕಾಂಗ್ರೆಸ್ ನವರು….: ಈಶ್ವರಪ್ಪ
![1-hdk](https://www.udayavani.com/wp-content/uploads/2024/06/1-hdk-1-150x88.jpg)
Shivamogga; ಅಪಘಾತದಲ್ಲಿ ಮಡಿದವರ ಎಮ್ಮೆಹಟ್ಟಿಯ ಮನೆಗಳಿಗೆ ಕೇಂದ್ರ ಸಚಿವ ಎಚ್ ಡಿಕೆ ಭೇಟಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.