ಮಲೆನಾಡಲ್ಲಿ ಹೊಸ ರಾಜಕೀಯ ಮನ್ವಂತರ : ಕಾಂಗ್ರೆಸ್‌ಗೆ ಬಣ ರಾಜಕೀಯ ಬಿಸಿ


Team Udayavani, May 17, 2022, 6:15 AM IST

ಮಲೆನಾಡಲ್ಲಿ ಹೊಸ ರಾಜಕೀಯ ಮನ್ವಂತರ : ಕಾಂಗ್ರೆಸ್‌ಗೆ ಬಣ ರಾಜಕೀಯ ಬಿಸಿ

ಶಿವಮೊಗ್ಗ: 2023ರ ಚುನಾವಣೆ ಶಿವಮೊಗ್ಗ ಜಿಲ್ಲೆ ಪಾಲಿಗಷ್ಟೇ ಅಲ್ಲದೆ ರಾಜ್ಯ ರಾಜಕಾರಣದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡುವುದು ನಿಶ್ಚಿತ. ಬಿ.ಎಸ್‌.ಯಡಿಯೂರಪ್ಪ, ಕೆ.ಎಸ್‌.ಈಶ್ವರಪ್ಪ ನಿರ್ಗಮನದಿಂದ ತೆರವಾಗುವ ಕ್ಷೇತ್ರಗಳಿಗೆ ಮುಂದ್ಯಾರು? ಬಣ ರಾಜಕಾರಣದಿಂದ ಕಂಗೆಟ್ಟಿರುವ ಕಾಂಗ್ರೆಸ್‌ ವರಿಷ್ಠರು ಇದಕ್ಕೆ ಮದ್ದು ಅರೆಯುವರೆ? ಜೆಡಿಎಸ್‌ ತನ್ನ ಅಭ್ಯರ್ಥಿಗಳನ್ನು ಉಳಿಸಿಕೊಳ್ಳುವುದೇ? ಎಂಬುದೆಲ್ಲ ಚುನಾವಣೆಗೆ ವರ್ಷವಿರುವಾಗಲೇ ಚರ್ಚೆಗೆ ಗ್ರಾಸವಾಗಿದೆ.

ಉತ್ತರಾಧಿಕಾರಿ ಯಾರು?: ಶಿಕಾರಿಪುರದಿಂದ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಸ್ಪರ್ಧಿಸುವುದಿಲ್ಲ ಎಂಬ ಮಾತು ಪಕ್ಷದೊಳಗೆ ಕೇಳಿ ಬರುತ್ತಿದೆ. ಹಾಗಾದರೆ ಅವರ ಸ್ಥಾನಕ್ಕೆ ಯಾರು? ಹಿರಿಯ ಪುತ್ರ ಬಿ.ವೈ.ರಾಘವೇಂದ್ರ ಸಂಸದರಾಗಿದ್ದು, ಮತ್ತೂಬ್ಬ ಪುತ್ರ ಬಿ.ವೈ.ವಿಜಯೇಂದ್ರ ಕ್ಷೇತ್ರ ಹುಡುಕಾಟದಲ್ಲಿದ್ದಾರೆ. ಹಳೇ ಮೈಸೂರು ಭಾಗದಲ್ಲಿ ಸ್ಪರ್ಧೆ ಮಾಡುತ್ತಾರೆಂಬ ಮಾತುಗಳು ಕೇಳಿಬರುತ್ತಿದ್ದರೂ ಕೊನೇ ಗಳಿಗೆಯಲ್ಲಿ ಶಿಕಾರಿಪುರಕ್ಕೆ ಬಂದರೂ ಅಚ್ಚರಿಯಿಲ್ಲ ಎನ್ನಲಾಗುತ್ತಿದೆ. ವಿಜಯೇಂದ್ರ ಬರದಿದ್ದರೆ ಕಾರ್ಯಕರ್ತರಿಗೆ ಟಿಕೆಟ್‌ ಕೊಡುತ್ತಾರಾ ಅಥವಾ ಬಿಎಸ್‌ವೈ ಕುಟುಂಬಸ್ಥರನ್ನೇ ಕಣಕ್ಕಿಳಿಸಲಾಗುತ್ತಾ ಎಂಬ ಗುಟ್ಟು ರಟ್ಟಾಗಿಲ್ಲ. ಇನ್ನು 10-20 ಸಾವಿರ ಮತಗಳಿಂದ ಸೋಲು ಕಾಣುತ್ತಿರುವ ಕಾಂಗ್ರೆಸ್‌ಗೆ ಈ ಬಾರಿ ವಿಜಯಲಕ್ಷ್ಮೀ ಒಲಿಯುವುದೆ ನೋಡಬೇಕಿದೆ. ಗೋಣಿ ಮಾಲತೇಶ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಜೆಡಿಎಸ್‌ ಇಲ್ಲಿ ಲೆಕ್ಕಕಿಲ್ಲ.

ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಈಗಾಗಲೇ 74 ವರ್ಷ ಪೂರೈಸಿದ್ದು ಬಿಜೆಪಿಯ ಅಲಿಖೀತ ನಿಯಮದ ಪ್ರಕಾರ ಟಿಕೆಟ್‌ನಿಂದ ವಂಚಿತರಾಗುವ ಸಾಧ್ಯತೆಯಿದೆ. ತಮ್ಮ ಜಾಗಕ್ಕೆ ಪುತ್ರ ಕಾಂತೇಶ್‌ರನ್ನು ಕೂರಿಸಲು ಒಂದು ಪ್ರಯತ್ನ ನಡೆಸಲಾಗುತ್ತಿದೆ. ಲಿಂಗಾಯತರೇ ಹೆಚ್ಚಾಗಿರುವ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಈ ಬಾರಿ ಲಿಂಗಾಯತರಿಗೆ ಟಿಕೆಟ್‌ ಕೊಡಬೇಕೆಂದು ಒಂದು ಬಣ ಒಳಗೊಳಗೇ ಸಭೆ ನಡೆಸುತ್ತಿದೆ. ಈ ಕ್ಷೇತ್ರವು ಆರ್‌ಎಸ್‌ಎಸ್‌ ಹಿಡಿತದಲ್ಲಿರುವುದರಿಂದ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂತೋಷ್‌ ಅವರು ಸೂಚಿಸಿ ದವರೆ ಅಭ್ಯರ್ಥಿಯಾಗಬಹುದು. ಕಾಂಗ್ರೆಸ್‌ನಿಂದ ಮಾಜಿ ಶಾಸಕ ಪ್ರಸನ್ನಕುಮಾರ್‌, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಎಚ್‌.ಎಸ್‌. ಸುಂದ ರೇಶ್‌, ಪಾಲಿಕೆ ಸದಸ್ಯ ಯೋಗೀಶ್‌ ಆಕಾಂಕ್ಷಿ ಗಳಾಗಿದ್ದಾರೆ. ಜೆಡಿಎಸ್‌ನಿಂದ ಎಂ.ಶ್ರೀಕಾಂತ್‌ ಸ್ಪರ್ಧಿಸುತ್ತಾರಾ ಅಥವಾ ಕಾಂಗ್ರೆಸ್‌ಗೆ ಹೋಗುತ್ತಾರಾ ಕಾದು ನೋಡಬೇಕಿದೆ.

ಸೊರಬದಲ್ಲಿ ಕೈ ಬಲ: ಸೊರಬ ಕ್ಷೇತ್ರದಲ್ಲಿ ಶಾಸಕ ಕುಮಾರ್‌ ಬಂಗಾರಪ್ಪ ಬಗ್ಗೆ ಬಿಜೆಪಿ ಯೊಳಗೇ ಅಸಮಾಧಾನವಿದೆ. ಮೂಲ ಕಾರ್ಯಕರ್ತರ, ವಲಸಿಗರ ಬಣ ರಾಜ ಕೀಯ ಹೈಕಮಾಂಡ್‌ವರೆಗೂ ಹೋಗಿತ್ತು. ಈಗಲೂ ಪರಸ್ಪರ ಕಾಲೆಳೆದುಕೊಳ್ಳುವುದು ನಿಂತಿಲ್ಲ. ಬಿಜೆಪಿ ಪಾಳಯಕ್ಕೆ ಇದು ಬಿಸಿ ತುಪ್ಪವಾಗಿದೆ. ಶಾಸಕ ಕುಮಾರ್‌ ಬಂಗಾರಪ್ಪ ಅವರಿಗೆ ಮತ್ತೆ ಟಿಕೆಟ್‌ ಸಿಗುವುದೇ ಅನುಮಾನ ಎನ್ನುತ್ತಾರೆ ಕೆಲ ಕಾರ್ಯಕರ್ತರು. ಬಿಜೆಪಿ ಬಣ ರಾಜಕೀಯದಿಂದ ಕಾಂಗ್ರೆಸ್‌ಗೆ ಸ್ವಲ್ಪ ಅನುಕೂಲವಾಗಲಿದೆ ಎಂಬುದು ಸುಳ್ಳಲ್ಲ. ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ ಸೇರಿರುವ ಮಧು ಬಂಗಾರಪ್ಪ ಈ ಬಾರಿ ಗೆದ್ದೇ ಗೆಲ್ಲುತ್ತೇನೆಂಬ ಆತ್ಮವಿಶ್ವಾಸದಲ್ಲಿದ್ದಾರೆ.

ಆಕಾಂಕ್ಷಿಗಳೇ ಹೆಚ್ಚು: ಸಾಗರ ಕ್ಷೇತ್ರದಲ್ಲಿ ಹಾಲಿ ಶಾಸಕ ಹರತಾಳು ಹಾಲಪ್ಪಗೆ ಮತ್ತೆ ಬಿಜೆಪಿ ಟಿಕೆಟ್‌ ಸಿಗುವ ಖಾತ್ರಿಯಿದೆ. ಇನ್ನು ಕಾಂಗ್ರೆಸ್‌ನಿಂದ ಬೇಳೂರು ಗೋಪಾಲಕೃಷ್ಣ, ಪ್ರಶಾಂತ್‌, ಕಾಗೋಡು ಪುತ್ರಿ ರಾಜನಂದಿನಿ, ಕಲಗೋಡು ರತ್ನಾಕರ್‌ ಆಕಾಂಕ್ಷಿಗಳಾ ಗಿದ್ದಾರೆ. ಈ ಕ್ಷೇತ್ರದಲ್ಲೂ ಜೆಡಿಎಸ್‌ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿದೆ.

ಕೈ ಟಿಕೆಟ್‌ಗೆ ಪೈಪೋಟಿ: ತೀರ್ಥಹಳ್ಳಿ ಕ್ಷೇತ್ರದಲ್ಲಿ ಮೊದಲಿನಿಂದಲೂ ಕಾಂಗ್ರೆಸ್‌-ಬಿಜೆಪಿ ಅಧಿಕಾರ ಹಿಡಿದಿದೆ. ಬಿಜೆಪಿಯಿಂದ ಹಾಲಿ ಶಾಸಕ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಟಿಕೆಟ್‌ ಸಿಗಲಿದೆ. ಆದರೆ ಕಾಂಗ್ರೆಸ್‌ನಿಂದ ಯಾರು ಎಂಬ ಗೊಂದಲವಿದೆ. ಮೊದಲು ಹಾವು ಮುಂಗುಸಿಯಂತಿದ್ದ ಕಿಮ್ಮನೆ ರತ್ನಾಕರ್‌ ಹಾಗೂ ಆರ್‌.ಎಂ.ಮಂಜು ನಾಥ್‌ಗೌಡ ಈಗ ಕಾಂಗ್ರೆಸ್‌ನಲ್ಲಿದ್ದು ಇಬ್ಬರೂ ಟಿಕೆಟ್‌ ಆಕಾಂಕ್ಷಿಗಳಾಗಿದ್ದಾರೆ. ಜೆಡಿಎಸ್‌ ಇಲ್ಲಿ ಮತ್ತೆ ಹೊಸ ಅಭ್ಯರ್ಥಿಗೆ ಹುಡುಕಾಟ ನಡೆಸಬೇಕಿದೆ.

ತ್ರಿಕೋನ ಸ್ಪರ್ಧೆ: ಎಸ್‌ಸಿ ಮೀಸಲು ಕ್ಷೇತ್ರವಾದ ಶಿವಮೊಗ್ಗ ಗ್ರಾಮಾಂತರದಲ್ಲಿ ಕಾಂಗ್ರೆಸ್‌ನಿಂದ ಮಾಜಿ ಶಾಸಕ ಕರಿಯಣ್ಣ ಪುತ್ರ ಡಾ| ಶ್ರೀನಿವಾಸ್‌ ಟಿಕೆಟ್‌ ನಿರೀಕ್ಷೆಯಲ್ಲಿದ್ದಾರೆ. ಜೆಡಿಎಸ್‌ನಿಂದ ಶಾರದಾ ಪೂರ್ಯಾನಾಯ್ಕ, ಬಿಜೆಪಿಯ ಹಾಲಿ ಶಾಸಕ ಅಶೋಕ್‌ ನಾಯ್ಕ ಮತ್ತೆ ಟಿಕೆಟ್‌ ಸಿಗುವ ವಿಶ್ವಾಸದಲ್ಲಿದ್ದಾರೆ.

ಕಮಲ ಅರಳ್ಳೋದು ಕಷ್ಟ: ಜಿಲ್ಲೆಯ ಏಳರಲ್ಲಿ ಆರು ಕ್ಷೇತ್ರ ಗೆದ್ದಿರುವ ಬಿಜೆಪಿಗೆ ಭದ್ರಾವತಿ ಕ್ಷೇತ್ರ ಒಮ್ಮೆಯೂ ದಕ್ಕಿಲ್ಲ. ಮುಂದಿನ ಬಾರಿಯೂ ಗೆಲ್ಲುವುದಿಲ್ಲ ಎನ್ನುತ್ತಾರೆ ಸ್ವಪಕ್ಷದ ಕಾರ್ಯಕರ್ತರು. ಇಲ್ಲಿ ಅಭ್ಯರ್ಥಿ ಹುಡುಕಾಟದಲ್ಲೇ ಬಿಜೆಪಿ ಸೋತಿದೆ. ಕಾಂಗ್ರೆಸ್‌-ಜೆಡಿಎಸ್‌ ನೇರ ಹಣಾಹಣಿ ಹೊಂದಿರುವ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಬಿ.ಕೆ. ಸಂಗಮೇಶ್‌ಗೆ ಟಿಕೆಟ್‌ ಸಿಗುವ ವಿಶ್ವಾಸವಿದೆ. ಶಾರದಾ ಅಪ್ಪಾಜಿಗೌಡ ಅಭ್ಯರ್ಥಿ ಎಂದು ಈಗಾಗಲೇ ಜೆಡಿಎಸ್‌ ಘೋಷಿಸಿದೆ.

ಕಾಂಗ್ರೆಸ್‌ಗೆ ಬಣ ರಾಜಕೀಯ ಬಿಸಿ
ಜಿಲ್ಲೆಯಲ್ಲಿ ಕಾಂಗ್ರೆಸ್‌ ಬಣ ರಾಜಕೀಯ ಜೋರಾಗಿದ್ದು ಟಿಕೆಟ್‌ಗಾಗಿ ಈಗಲೇ ಕೋಲ್ಡ್‌ ವಾರ್‌ ನಡೆಯುತ್ತಿದೆ. ಶಿವಮೊಗ್ಗ, ತೀರ್ಥಹಳ್ಳಿ, ಸಾಗರದಲ್ಲಿ ಬಣ ಜಗಳಕ್ಕೆ ವಿರಾಮ ಹೇಳಿದರೆ ಗೆಲ್ಲುವ ಅವಕಾಶಗಳು ಹೆಚ್ಚಿವೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.