ಗೃಹಸಚಿವರ ಸ್ವಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆ ಮತದಾನ ಬಹಿಷ್ಕಾರ!
Team Udayavani, Feb 21, 2023, 5:29 PM IST
ತೀರ್ಥಹಳ್ಳಿ : ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಸ್ವಕ್ಷೇತ್ರವಾದ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಶತಮಾನಕ್ಕೂ ಹಳೆಯದಾದ ಮೇಗರವಳ್ಳಿ ಸಮೀಪದ ಅಣ್ಣುವಳ್ಳಿಗೆ ಸಂಪರ್ಕ ಕಲ್ಪಿಸುವ ದಾರಿ ಮತ್ತು ಹಳ್ಳದ ಕಾಲುಸೇತುವೆಯನ್ನು ಕಳೆದ ನಾಲೈದು ವರ್ಷಗಳಿಂದ ಬಂದ್ ಮಾಡಲಾಗಿದೆ. ಪ್ರಸ್ತುತ ಸುಮಾರು 3-4 ಕಿ.ಮೀ. ದೂರ ಕ್ರಮಿಸಿ ಮೇಗರವಳ್ಳಿ ತಲುಪಬೇಕಾಗಿದೆ.
ಇದರಿಂದ ಶಾಲಾ ಮಕ್ಕಳು, ವೃದ್ಧರು, ಅನಾರೋಗ್ಯ ಪೀಡಿತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಸಾಕಷ್ಟು ಬಾರಿ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿ ದಾರಿಯನ್ನು. ಕಲ್ಪಿಸಿಕೊಡುವಂತೆ ಕೋರಿದರೂ ಈವರೆಗೂ ನಮ್ಮ ಸಮಸ್ಯೆಗೆ ಪರಿಹಾರ ದೊರಕಿರುವುದಿಲ್ಲ. ಅಲ್ಲದೇ ಅಣ್ಣುವಳ್ಳಿಯಿಂದ ಮೇಗರವಳ್ಳಿಗೆ ಸಂಪರ್ಕ ಕಲ್ಪಿಸುವ ಕೆಳಗಿನ ಅಣ್ಣುವಳ್ಳಿ ರಸ್ತೆ ಕಳೆದ 10 ವರ್ಷಗಳಿಂದ
ಸಂಪೂರ್ಣ ಹಾಳಾಗಿದ್ದು ವಾಹನ ಸಂಚಾರಕ್ಕೆ ಯೋಗ್ಯವಾಗಿಲ್ಲ. ಈ ಬಗ್ಗೆಯೂ ಸಹ ಸಾಕಷ್ಟು ಬಾರಿ ಗ್ರಾಮಸ್ಥರು ಮನವಿ ಮಾಡಿಕೊಂಡರೂ ರಸ್ತೆಯನ್ನು ದುರಸ್ತಿಪಡಿಸಿರುವುದಿಲ್ಲ. ಈ ಕಾರಣದಿಂದ ಈ ಬಾರಿಯ ವಿಧಾನಸಭಾ ಚುನಾವಣೆ ಮತದಾನವನ್ನು ಅಣ್ಣುವಳ್ಳಿ ಗ್ರಾಮಸ್ಥರು ಬಹಿಷ್ಕಾರ ಮಾಡಲು ನಿರ್ಧರಿಸಿದ್ದಾರೆ.
ಅಣುವಳ್ಳಿಯಲ್ಲಿ 30 ಕ್ಕೂ ಹೆಚ್ಚು ಮನೆಗಳಿದ್ದು 200 ಕ್ಕೂ ಹೆಚ್ಚು ಮತಗಳಿವೆ. ಗ್ರಾಮಸ್ಥರ ಬೇಡಿಕೆ ಈಡೇರುವವರೆಗೂ ಮತ ಕೇಳಲೂ ಬರಬೇಡಿ. ಯಾವುದೇ ರಾಜಿ ಸಂಧಾನ ಮನವೊಲಿಕೆಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಅಂತಾರಾಷ್ಟ್ರೀಯ ಮಾತೃಭಾಷಾ ದಿನದ ವಿಶೇಷ: ಕನ್ನಡದ ಕ್ರಿಯೇಟರ್ ಗೆ ಪ್ರೋತ್ಸಾಹ ನೀಡಿದ ಯೂಟ್ಯೂಬ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.