ರಾಘವೇಂದ್ರಗೆ ಭರ್ಜರಿ ಗೆಲುವು


Team Udayavani, May 24, 2019, 1:03 PM IST

24-May-19

ಶಿವಮೊಗ್ಗ: ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಕುಟುಂಬದವರು ಸಿಹಿ ತಿನ್ನಿಸಿದರು.

ಶಿವಮೊಗ್ಗ: ಮೋದಿ ಅಲೆ, ಸಂಘಟನೆ ಶಕ್ತಿಯಿಂದ ಈ ಬಾರಿಯೂ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಭರ್ಜರಿ ಜಯ ಗಳಿಸಿದ್ದಾರೆ. ಒಂದೂವರೆ ಲಕ್ಷದ ಮತಗಳ ಅಂತರದಿಂದ ಗೆಲ್ಲುತ್ತೇವೆ ಎನ್ನುತ್ತಿದ್ದ ಬಿಜೆಪಿಗೆ ನಿರೀಕ್ಷೆಗೂ ಮೀರಿ ಮತಗಳು ಬಂದಿವೆ.

ಉಪ ಚುನಾವಣೆಯಲ್ಲಿ ಮೋದಿ ಅಲೆ, ಹಿಂದುತ್ವದ ಯಾವುದೇ ವಿಷಯಗಳು ಇಲ್ಲದ ವೇಳೆಯೂ 52 ಸಾವಿರ ಮತಗಳ ಅಂತರದ ಗೆಲುವು ಸಿಕ್ಕಿತ್ತು. ಇದನ್ನೇ ಕಡಿಮೆ ಮತ ಬಂದ ಬೂತ್‌ಗಳ ಮೇಲೆ ಹೆಚ್ಚು ನಿಗಾ ವಹಿಸಿದ ಪರಿಣಾಮ ಬಿಜೆಪಿ ಮತ್ತೂಂದು ದಾಖಲೆಯ ಗೆಲುವು ಸಾಧಿಸಿದೆ. ಉಪ ಚುನಾವಣೆಯಲ್ಲಿ ಸೋಲಿನ ಅಂತರವನ್ನು ತಗ್ಗಿಸಿಕೊಂಡು ಗೆಲುವಿನ ಕನಸು ಕಾಣುತ್ತಿದ್ದ ಜೆಡಿಎಸ್‌ ಅಭ್ಯರ್ಥಿ ಮಧು ಬಂಗಾರಪ್ಪ ಅವರು ಆಘಾತಕಾರಿ ಸೋಲು ಅನುಭವಿಸಿದ್ದಾರೆ.

ಸಹ್ಯಾದ್ರಿ ಕಲಾ ಕಾಲೇಜು ಕಟ್ಟಡದಲ್ಲಿ ಗುರುವಾರ ನಡೆದ ಮತ ಎಣಿಕೆಯಲ್ಲಿ ಆರಂಭದಿಂದಲೂ ಮುನ್ನಡೆ ಗಳಿಸಿದ ರಾಘವೇಂದ್ರ ಅವರು ಅಂತಿಮವಾಗಿ 2,23,360 ಮತಗಳಿಂದ ಜಯಭೇರಿ ಭಾರಿಸಿದರು. ಉಪ ಚುನಾವಣೆಯಲ್ಲಿ 52 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ರಾಘವೇಂದ್ರ ಅವರು 7,29,872 ಲಕ್ಷ ಮತ ಗಳಿಸಿದರೆ, ಮಧು ಬಂಗಾರಪ್ಪ ಅವರು 5,06,512 ಲಕ್ಷ ಮತಗಳನ್ನು ಪಡೆದರು. 50ರಿಂದ 1 ಲಕ್ಷ ಮತಗಳ ಅಂತರದಿಂದ ಜಯ ಗಳಿಸುತ್ತೇವೆ ಎಂದು ಹೇಳುತ್ತಿದ್ದರಾದರೂ ಆಂತರಿಕವಾಗಿ ಅಂತರ ಬಹಳ ಕಡಿಮೆಯಾಗಲಿದೆ ಎಂದು ಮಾತನಾಡಿಕೊಂಡಿದ್ದರು. ಆರಂಭದಲ್ಲಿ ಒಂದೂವರೆ ಲಕ್ಷ ಅಂತರ ಎಂದು ಹೇಳುತ್ತಿದ್ದ ಬಿಜೆಪಿ ಮುಖಂಡರ ಮತಗಟ್ಟೆ ಸಮೀಕ್ಷೆ ಆಧಾರದ ಮೇಲೆ 70 ಸಾವಿರ ಅಂತರಕ್ಕೆ ಬಂದಿದ್ದರು. ಆದರೆ ಮತದಾರ 2 ಲಕ್ಷಕ್ಕೂ ಹೆಚ್ಚು ಅಂತರದಿಂದ ಗೆಲ್ಲಿಸಿ ಹೊಸ ಸಂದೇಶ ನೀಡಿದ್ದಾನೆ.

ಎರಡನೇ ದೊಡ್ಡ ಗೆಲುವು: ಈವರೆಗೆ ಶಿವಮೊಗ್ಗ ಲೋಕಸಭೆ ಚುನಾವಣೆ ದಾಖಲೆ ಅಂತರದಿಂದ ಗೆಲುವು ಸಾಧಿಸಿರುವುದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ. ಈ ಹಿಂದೆ 2014ರ ಚುನಾವಣೆಯಲ್ಲಿ ಯಡಿಯೂರಪ್ಪ ಅವರು 3.62 ಲಕ್ಷ ಮತಗಳ ಅಂತರದಿಂದ ವಿಜಯ ಗಳಿಸಿದ್ದು ಸಾರ್ವಕಾಲಿಕ ದಾಖಲೆಯಾಗಿತ್ತು. ಈಗ ಎರಡನೇ ದೊಡ್ಡ ಗೆಲುವು ರಾಘವೇಂದ್ರ ಅವರ ಪಾಲಾಗಿದೆ. ರಾಘವೇಂದ್ರ ಅವರು ಗಳಿಸಿದ 7 ಲಕ್ಷ ಮತಗಳು ಸಹ ಹೊಸ ದಾಖಲೆ ನಿರ್ಮಿಸಿದೆ. 2014ರ ಚುನಾವಣೆಯಲ್ಲಿ ಅವರ ತಂದೆ ಯಡಿಯೂರಪ್ಪ ಅವರು 6.06 ಲಕ್ಷ ಮತ ಗಳಿಸಿದ್ದು ದಾಖಲೆಯಾಗಿತ್ತು. ಅವರಿಗಿಂತ 1.23 ಲಕ್ಷ ಮತಗಳನ್ನು ಪಡೆಯುವ ಮೂಲಕ ಅತಿ ಹೆಚ್ಚು ಮತಗಳನ್ನು ಗಳಿಸಿದ ಸಂಸದ ಎಂಬ ಕೀರ್ತಿಗೆ ರಾಘವೇಂದ್ರ ಪಾತ್ರರಾಗಿದ್ದಾರೆ.

ಪರಾಜಿತ ಅಭ್ಯರ್ಥಿಗಳು ಗಳಿಸಿದ ಮತಗಳಲ್ಲೂ ಮಧು ಬಂಗಾರಪ್ಪ ಗಳಸಿದ ಮತಗಳು ಹೊಸ ದಾಖಲೆಯಾಗಿದೆ. ಈ ಹಿಂದೆ 2009ರ ಚುನಾವಣೆಯಲ್ಲಿ ಮಾಜಿ ಸಿಎಂ ಎಸ್‌. ಬಂಗಾರಪ್ಪ ಅವರು ರಾಘವೇಂದ್ರ ಅವರ ಎದುರು 4.29ಲಕ್ಷ ಮತಗಳನ್ನು ಗಳಿಸಿದ್ದರು. ಮಧು ಅವರು ತಮ್ಮ ತಂದೆಯವರಿಗಿಂತ 80 ಸಾವಿರ ಅಧಿಕ ಮತಗಳನ್ನು ಪಡೆದುಕೊಂಡಿದ್ದಾರೆ.

ಟಾಪ್ ನ್ಯೂಸ್

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

9

Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

9

Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.