ರಸ್ತೆಯಲ್ಲಿ ಗುಂಡಿಯೋ? ಗುಂಡಿಯಲ್ಲಿ ರಸ್ತೆಯೋ?

ವಾಹನ ಚಾಲನೆಯೇ ದೊಡ್ಡ ಸರ್ಕಸ್‌ ಶಿವಮೊಗ್ಗ ನಗರದ ರಸ್ತೆ ದುರವಸ್ಥೆಗೆ ವಾಹನ ಚಾಲಕರ ಆಕ್ರೋಶ

Team Udayavani, Sep 21, 2019, 6:16 PM IST

21-Sepctember–17

ಶರತ್‌ ಭದ್ರಾವತಿ

ಶಿವಮೊಗ್ಗ: ರಸ್ತೆಯಲ್ಲಿ ಗುಂಡಿಗಳಿವೆಯೋ, ಗುಂಡಿಗಳ ಮಧ್ಯೆ ಅಲ್ಲಲ್ಲಿ ಸ್ವಲ್ಪ ಡಾಂಬರು ಹಾಕಲಾಗಿದೆಯೋ..’ ರಸ್ತೆಯ ಅವಸ್ಥೆ ಕಂಡು ಆಟೋ ಚಾಲಕ ಮಂಜುನಾಥ್‌ ಪ್ರಶ್ನೆ ಇದು.

ಶಿವಮೊಗ್ಗದ ಎಲ್‌ಎಲ್‌ಆರ್‌ ರೋಡ್‌ನ‌ಲ್ಲಿ ಎಲ್ಲಿ ನೋಡಿದರೂ ಗುಂಡಿಗಳೇ. ರಸ್ತೆಯ ಆರಂಭದಿಂದ ಅಂತ್ಯದವರೆಗೆ ಸಾಲು ಸಾಲು ಗುಂಡಿಗಳಿವೆ. ಈ ರಸ್ತೆ ಮಳೆಗಾಲಕ್ಕೂ ಮುನ್ನವೇ ಹಾಳಾಗಿದ್ದು ಡಾಂಬರು ಕಂಡು ಹಲವು ವರ್ಷಗಳೇ ಆಗಿವೆ. ಮಳೆ ಬಂದ ನಂತರವಂತೂ ಇದು ಒಂದು ರಸ್ತೆಯೇ ಎಂಬ ಅನುಮಾನ ಬರುವಷ್ಟರ ಮಟ್ಟಿಗೆ ಹಾಳಾಗಿದೆ. ಪ್ರತಿಷ್ಠಿತ ಹೊಟೇಲ್‌ ಹಾಗೂ ವಾಣಿಜ್ಯ ಮಳಿಗೆಗಳನ್ನು ಹೊಂದಿರುವ ಈ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಬೈಕ್‌ನಿಂದ ಹಿಡಿದು ಲಾರಿಗಳ ಸಂಚಾರ ಸಾಮಾನ್ಯವಾಗಿದೆ. ಖಾಸಗಿ ಹಾಗೂ ಕೆಎಸ್‌ಆರ್‌ಟಿಸಿ ನಿಲ್ದಾಣಕ್ಕೆ ಹೋಗಲು ಇದು ಸಮೀಪದ ರಸ್ತೆ ಕೂಡ ಆಗಿರುವುದರಿಂದ ಆಟೋಗಳು ಸಹ ಸರ್ವೇ ಸಾಮಾನ್ಯವಾಗಿದೆ. ಈ ರಸ್ತೆಗೆ ಪ್ರವೇಶಿಸುತ್ತಿದ್ದಂತೆ ಗುಂಡಿಗಳನ್ನು ತಪ್ಪಿಸಿಕೊಂಡು ವಾಹನ ಚಲಾಯಿಸುವುದು ವಾಹನ ಚಾಲಕರಿಗೆ ಅತಿ ದೊಡ್ಡ ಸವಾಲಾಗಿದೆ.

ವಾಹನ ಚಾಲಕರು ಬೀಳ್ಳೋದು, ಗಾಯಗೊಳ್ಳುವುದು, ವಾಹನಗಳಿಗೆ ಡ್ಯಾಮೇಜ್‌ ಅಗುವುದೆಲ್ಲ ಎಲ್‌ಎಲ್‌ಆರ್‌ ರೋಡ್‌ನ‌ಲ್ಲಿ ಸಾಮಾನ್ಯವಾಗಿದೆ ಅನ್ನುತ್ತಾರೆ ವ್ಯಾಪಾರಿ ಜಗದೀಶ್‌. ಈ ರಸ್ತೆಯಲ್ಲಿರುವ ಗುಂಡಿಗಳು ವಾಹನ ಚಾಲಕರಿಗಷ್ಟೇ ಅಲ್ಲ, ಸ್ಥಳೀಯರು, ವ್ಯಾಪಾರಿಗಳಿಗೂ ಕಿರಿಕಿರಿ ಉಂಟು ಮಾಡುತ್ತಿದೆ. ಗುಂಡಿಯಿಂದ ಏಳುವ ಧೂಳು ಮನೆ, ಮಳಿಗೆಗಳಿಗೆ ನುಗ್ಗುತ್ತಿವೆ. ಇದರಿಂದ ವ್ಯಾಪಾರ, ವಹಿವಾಟಿಗೂ ತೊಂದರೆಯಾಗುತ್ತಿದೆ. ಆರೋಗ್ಯದ ಸಮಸ್ಯೆ ಎದುರಾಗುತ್ತಿವೆ.

ಕೂಡಲೆ ಎಲ್‌ಎಲ್‌ಆರ್‌ ರಸ್ತೆಗೆ ಡಾಂಬರು ಬರಲಿ ಅಂತಾ ಜನರು ಆಗ್ರಹಿಸಿದ್ದಾರೆ. ಆದರೆ ಜನಪ್ರತಿನಿಧಿ ಗಳು, ಅಧಿಕಾರಿಗಳ್ಯಾರೂ ಇದಕ್ಕೆ ಕ್ಯಾರೇ ಅನ್ನದಿರುವುದು ಸ್ಥಳೀಯರು ಆಕೋಶಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.