ಬಸ್‌ ಸೌಕರ್ಯ ಇಲ್ಲದೇ ಪರದಾಟ

ಚರಂಡಿ ಸೌಲಭ್ಯ ಇಲ್ಲದ್ದಕ್ಕೆ ರಸ್ತೆಯಲ್ಲೇ ಹರಿವ ಕೊಳಚೆ ನೀರು ••ಬಯಲೇ ಶೌಚಾಲಯ

Team Udayavani, Jul 8, 2019, 5:36 PM IST

08-July-47

ಸಿರವಾರ: ಕಡದಿನ್ನಿ ಗ್ರಾಮದಲ್ಲಿ ಚರಂಡಿ ವ್ಯವಸ್ಥೆ ಇಲ್ಲದ್ದರಿಂದ ರಸ್ತೆಯಲ್ಲೇ ಹರಿಯುತ್ತಿರುವ ಕೊಳಚೆ ನೀರು.

ಸಿರವಾರ: ಸಮೀಪದ ಕಡದಿನ್ನಿ ಗ್ರಾಮದಲ್ಲಿ ಚರಂಡಿ, ಸಿಸಿ ರಸ್ತೆ, ಬಸ್‌ ಸೌಕರ್ಯ, ಶುದ್ಧ ನೀರು, ಶೌಚಾಲಯ, ಸೇರಿ ಮೂಲ ಸೌಕರ್ಯ ಕೊರತೆ ಇದೆ.

ಚಾಗಬಾವಿ ಗ್ರಾಪಂ ವ್ಯಾಪ್ತಿಯ ಈ ಗ್ರಾಮದಲ್ಲಿ 1500 ಜನಸಂಖ್ಯೆ ಇದ್ದು, ಐವರು ಗ್ರಾಪಂ ಸದಸ್ಯರಿದ್ದಾರೆ.

ಬಸ್‌ ವ್ಯವಸ್ಥೆ: 1500 ಜನಸಂಖ್ಯೆ ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಈ ಗ್ರಾಮಕ್ಕೆ ಬಸ್‌ ಸೌಕರ್ಯವಿಲ್ಲ. ಕಳೆದ 6 ವರ್ಷಗಳ ಹಿಂದೆ ಗ್ರಾಮಕ್ಕೆ ಬಸ್‌ ಬಿಡಲಾಗಿತ್ತು. ರಸ್ತೆ ಸರಿ ಇಲ್ಲದ್ದರಿಂದ ಬಸ್‌ ಬಂದ್‌ ಮಾಡಲಾಗಿದೆ. ಈಗ ರಸ್ತೆ ಸರಿ ಇದ್ದರೂ ಬಸ್‌ ವ್ಯವಸ್ಥೆ ಇಲ್ಲ. ಹೀಗಾಗಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿರವಾರ ಇಲ್ಲವೇ ಸಮೀಪದ ಪಟ್ಟಣ ಪ್ರದೇಶಗಳಿಗೆ ಶಾಲೆ-ಕಾಲೇಜಿಗೆ ತೆರಳಲು ಖಾಸಗಿ ವಾಹನ ಅವಲಂಬಿಸುವಂತಾಗಿದೆ.

ಚರಂಡಿ ಸಮಸ್ಯೆ: ಗ್ರಾಮದಲ್ಲಿ ಸರಿಯಾಗಿ ಚರಂಡಿ ವ್ಯವಸ್ಥೆ ಇಲ್ಲದೆ ಮÙ ನೀರು, ಮನೆ ಬಳಕೆ ನೀರು ರಸ್ತೆಯಲ್ಲೇ ಹರಿಯುತ್ತಿದ್ದು, ರಸ್ತೆಗಳು ಕೆಸರುಗದ್ದೆಯಂತಾಗಿವೆ. ಸೊಳ್ಳೆಗಳ ಹಾವಳಿ ಹೆಚ್ಚಿ ಸಾಂಕ್ರಾಮಿಕ ರೋಗಗಳ ಭೀತಿ ಗ್ರಾಮಸ್ಥರನ್ನು ಕಾಡುತ್ತಿದೆ.

ಶೌಚಾಲಯ ಸಮಸ್ಯೆ: ಗ್ರಾಮದಲ್ಲಿ ಮಹಿಳೆಯರಿಗೆ, ಪುರುಷರಿಗೆ ಸಾರ್ವಜನಿಕ ಶೌಚಾಲಯವಿಲ್ಲದ್ದರಿಂದ ಹೊಲ, ಬಯಲು ಪ್ರದೇಶದಲ್ಲಿ ಬಹಿರ್ದೆಸಗೆಗೆ ಹೋಗಬೇಕಿದೆ. ಕೆಲ ಮನೆಗಳವರು ಮಾತ್ರ ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಂಡಿದ್ದಾರೆ.

ಜೋತು ಬಿದ್ದ ತಂತಿಗಳು: ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಿಂದ ಮೋನಪ್ಪ ದೇವಸ್ಥಾನದವರೆಗೆ ವಿದ್ಯುತ್‌ ತಂತಿಗಳು ಮನೆಗಳಿಗೆ ಹೊಂದಿಕೊಂಡು ಮಾಳಿಗೆಗಳ ಮೇಲೆಯೇ ಜೋತುಬಿದ್ದಿವೆ. ಮನೆಗಳ ಮೇಲೆ ಹತ್ತಿದಾಗ ತಾಗಿದರೆ ಜೀವಕ್ಕೆ ಅಪಾಯವಾಗುವ ಸಂಭವವಿದೆ. ಹಲವು ಬಾರಿ ಜೆಸ್ಕಾಂ ಸಿಬ್ಬಂದಿ ಗಮನಕ್ಕೆ ತಂದರೂ ಇವುಗಳನ್ನು ಸರಿಪಡಿಸಲು ಮುಂದಾಗುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಗ್ರಾಮದಲ್ಲಿನ ಸಮಸ್ಯೆ ಪರಿಹಾರಕ್ಕೆ ಜನಪ್ರತಿನಿಧಿಗಳು, ಅಧಿಕಾರಿಗಳು ಮುಂದಾಗಬೇಕಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.