ಧರ್ಮದ ತಳಹದಿಯಲ್ಲಿ ನಡೆದರೆ ಬದುಕು ಸುಂದರ

ಮಕ್ಕಳಿಗೆ ಧಾರ್ಮಿಕ ಸಂಸ್ಕಾರ ಕಲಿಸಿ

Team Udayavani, Apr 13, 2019, 3:01 PM IST

13-April-19

ಸಿರುಗುಪ್ಪ: ಧಾರ್ಮಿಕ ವಸಂತ ಶಿಬಿರ ಕಾರ್ಯಕ್ರಮವನ್ನು ಪೂರ್ಣಪ್ರಜ್ಞಾವಿದ್ಯಾಪೀಠದ ಉಪನ್ಯಾಸಕ ಭೀಮಸೇನ ಆಚಾರ್ಯ ಉದ್ಘಾಟಿಸಿದರು.

ಸಿರುಗುಪ್ಪ: ಹಿಂದೂ ಧರ್ಮದ ಸಂಸ್ಕೃತಿ, ಪರಂಪರೆ, ಭಾಗವತ
ವೇದಗಳಲ್ಲಿ ತಿಳಿಸಿದ ನೀತಿ ಪಾಠಗಳನ್ನು ಹಾಗೂ ಸಜ್ಜನರ ಸಂಗದಿಂದ
ನಮ್ಮಲ್ಲಿ ಹೇಗೆ ಉತ್ತಮ ಗುಣಗಳು ಬೆಳೆಯುತ್ತವೆ ಎನ್ನುವುದನ್ನು ಮಕ್ಕಳಿಗೆ ತಿಳಿಸಿಕೊಡುವುದು ಧಾರ್ಮಿಕ ವಸಂತ ಶಿಬಿರದ ಉದ್ದೇಶವಾಗಿದೆ
ಎಂದು ಪೂರ್ಣಪ್ರಜ್ಞಾ ವಿದ್ಯಾಪೀಠದ ಉಪನ್ಯಾಸಕ ಭೀಮಸೇನ ಆಚಾರ್ಯ
ತಿಳಿಸಿದರು.

ನಗರದ ವೇಣುಗೋಪಾಲಸ್ವಾಮಿ ದೇವಸ್ಥಾನದ ಆವರಣದಲ್ಲಿ
ಗುರುರಾಜ ಅಷ್ಟೋತ್ತರ ಮಂಡಳಿ ಹಾಗೂ ಪೂರ್ಣಪ್ರಜ್ಞಾ ವಿದ್ಯಾಪೀಠ
ಬೆಂಗಳೂರು ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಧಾರ್ಮಿಕ ವಸಂತ
ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರು ತಮ್ಮ ಜೀವನವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕಾದರೆ
ಧರ್ಮದ ತಳಹದಿ ಹೊಂದಿರುವುದು ಅವಶ್ಯಕವಾಗಿದೆ. ಶ್ರೀಪೇಜಾವರ
ವಿಶ್ವೇಶ್ವರ ತೀರ್ಥರು ಸಾಮಾನ್ಯ ಜನರು ಕೂಡ ಆಧ್ಯಾತ್ಮವನ್ನು ತಮ್ಮ ಜೀವನದಲ್ಲಿ ಒಳಪಡಿಸಿಕೊಳ್ಳುವುದನ್ನು ಕಲಿಸುವ ಉದ್ದೇಶದಿಂದ ಬೇಸಿಗೆ
ಕಾಲದಲ್ಲಿ ಧಾರ್ಮಿಕ ವಸಂತ ಶಿಬಿರ ಆಯೋಜಿಸಲಾಗುತ್ತಿದೆ. ಮಹಾಭಾರತ,
ರಾಮಾಯಣ ಗ್ರಂಥಗಳನ್ನು ಶಾಸ್ತ್ರಿಯವಾಗಿ ಅಧ್ಯಾಯನ ಮಾಡುವುದರಿಂದ ಈ ಗ್ರಂಥಗಳಲ್ಲಿನ ಮಹನೀಯರ ಜೀವನ ಆದರ್ಶ ತತ್ವಗಳನ್ನು, ನೀತಿ ಧರ್ಮಗುಣಗಳು ನಮಗೆ ತಿಳಿಯುತ್ತವೆ. ಮಹಿಳೆಯರಿಗೆ, ಬಾಲಕಿಯರಿಗೆ ಸ್ತ್ರೀ ಧರ್ಮ ಕುರಿತು ಬೋಧನೆ, ಉಪನ್ಯಾಸ ಕಾರ್ಯಕ್ರಮ 100 ದಿನಗಳ ಕಾಲ ನಡೆಸಲಾಗುವುದು ಎಂದು ತಿಳಿಸಿದರು.

ಉಪನ್ಯಾಸಕ ಸಂಜೀವ್‌ ಆಚಾರ್ಯ ಮಾತನಾಡಿ, ಇಂದು ನಮ್ಮ ಮಕ್ಕಳು
ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವಕ್ಕೆ ಒಳಪಟ್ಟು ನಮ್ಮ ಸಂಸ್ಕೃತಿಯಿಂದ
ಬದಲಾಗುತ್ತಿರುವ ಈ ಸಮಯದಲ್ಲಿ ದಾಸವರಣ್ಯರು, ಮಹನೀಯರು,
ಸಂತರು, ಮಹಾತ್ಮರು ನೀಡಿದ ನಮ್ಮ ಸನಾತನ ಸಂಸ್ಕೃತಿಯನ್ನು
ಮುಂದಿನ ಪೀಳಿಗೆಗೆ ಉಳಿಸುವ ಉದ್ದೇಶದಿಂದ ಶಿಬಿರದಲ್ಲಿ ಮಕ್ಕಳಿಗೆ ಅನೇಕ ವಿಷಯಗಳನ್ನು ತಿಳಿಸಲಾಗುತ್ತದೆ. ಹರಿಸರ್ವೋತ್ತಮ, ವಾಯುಜೀವೋತ್ತಮ ಎನ್ನುವ ಸತ್ಯವನ್ನು ನಾವೆಲ್ಲರೂ ನಂಬಿ ಪಾಲಿಸಿ ಈ ಭಗವಂತನ ನಾಮಸ್ಮರಣೆ
ಮಾಡಿದರೆ ಪಿತೃದೇವತೆಗಳು ಸಂತೃಪ್ತಿ ಹೊಂದುತ್ತಾರೆ ಎಂದು ತಿಳಿಸಿದರು.

ಪೂರ್ಣಪ್ರಜ್ಞಾ ವಿದ್ಯಾಪೀಠದ ಉಪನ್ಯಾಸಕ ವೆಂಕಟೇಶ ಆಚಾರ್ಯ, ಗುರು ಅಷ್ಟೋತ್ತರ ಮಂಡಳಿಯ ಗೌರವಾಧ್ಯಕ್ಷ ಎಚ್‌.ಜಿ.ವೆಂಕಟೇಶ
ಆಚಾರ್ಯ, ಉಪಾಧ್ಯಕ್ಷ ರಮೇಶ್‌ ಕುಲಕರ್ಣಿ, ಶಿಬಿರಾರ್ಥಿಗಳು ಇದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.