ದೇವರ ಮೂರ್ತಿಗಾಗಿ ಬಡಿದಾಟ

11 ಗ್ರಾಮಗಳ ಭಕ್ತರ ನಡುವೆ ಬಡಿಗೆಯಿಂದ ಹೊಡೆದಾಟಭಕ್ತಿಯ ಪರಾಕಾಷ್ಠೆ ಸಂಕೇತ

Team Udayavani, Oct 10, 2019, 1:00 PM IST

10-October-11

ಸಿರುಗುಪ್ಪ: ತಾಲೂಕಿನ ಗಡಿಗ್ರಾಮ ಸೀಮಾಂಧ್ರ ಪ್ರದೇಶದ ಕರ್ನೂಲ್‌ ಜಿಲ್ಲೆಯ ಆಲೂರು ತಾಲೂಕಿನ ಹೊಳಗುಂದ ಮಂಡಲದ ನೇರಣಿಕೆ ದೇವರಗುಡ್ಡದಲ್ಲಿ ಪ್ರತಿವರ್ಷದಂತೆ ಈ ವರ್ಷವು ವಿಯಜದಶಮಿಯಂದು ದೇವರ ಮೂರ್ತಿಗಳಿಗಾಗಿ ಹೊಡೆದಾಡುವ ಹಬ್ಬ ನಡೆಯಿತು.

ದೇವರಗುಡ್ಡದಲ್ಲಿನ ಮಲ್ಲಯ್ಯ ಮತ್ತು ಮಾಳಮ್ಮನ ಮೂರ್ತಿಗಳನ್ನು ಕೊಂಡ್ಯೊಯ್ಯಲು 11 ಗ್ರಾಮಗಳ ಭಕ್ತರ ನಡುವೆ ಪ್ರತಿವರ್ಷದಂತೆ ಈ ಬಾರಿಯೂ ಬಡಿಗೆಗಳಿಂದ ಹೊಡೆದಾಟವಾಯಿತು. ಹೀಗೆ ಹೊಡೆದಾಟದಲ್ಲಿ ಪರಸ್ಪರ ಗಾಯ, ರಕ್ತಸೋರಿಕೆ ಕಾಣಿಸಿದರೂ ಭಕ್ತರು ಮುನಿಸಿಕೊಳ್ಳಲಿಲ್ಲ, ಭಕ್ತಿಯ ಪರಾಕಾಷ್ಠೆಯ ಸಂಕೇತವೇ ಈ ಹಬ್ಬ.

ಸೀಮಾಂಧ್ರದ ನೇರಣಿಕಿ ಗ್ರಾಮಸ್ಥರು ವಿಜಯದಶಮಿಯ ರಾತ್ರಿ ಬಡಿಗೆಗಳ ಸಮೇತ ಪಂಜಿನ ಮೆರವಣಿಗೆಯೊಂದಿಗೆ ಉತ್ಸವ ಮೂರ್ತಿಗಳನ್ನು ಹೊತ್ತು ದೇವರಗುಡ್ಡಕ್ಕೆ ಆಗಮಿಸುತ್ತಾರೆ. ಈ ವೇಳೆ ದೇವರ ಮೂರ್ತಿಗಳನ್ನು ತಮ್ಮೂರಿಗೆ ಕೊಂಡ್ಯೊಯ್ಯಲು ಸುತ್ತಮುತ್ತಲಿನ 11 ಗ್ರಾಮಗಳ ಗ್ರಾಮಸ್ಥರು ಯತ್ನಿಸುತ್ತಾರೆ.

ಇದಕ್ಕೆ ಅವಕಾಶ ನೀಡದ ನೇರಣಿಕೆ ಗ್ರಾಮಸ್ಥರು ಬಡಿಗೆಗಳ ಮೂಲಕ ಪ್ರತಿರೋಧ ಒಡ್ಡುತ್ತಾರೆ. ಈ ವೇಳೆ ಪರಸ್ಪರ ಹೊಡೆದಾಟ ನಡೆಯುತ್ತದೆ. ಉತ್ಸವ ಮೂರ್ತಿ ಎದುರು ನಡೆಯುವ ಈ ಕಾದಾಟ ನೋಡುವ ಪೊಲೀಸರು ಈವರೆಗೂ ಮಧ್ಯ ಪ್ರವೇಶಿಸಿಲ್ಲ. ಗಾಯಗೊಂಡವರ ಮೈಯಿಂದ ರಕ್ತ ಸುರಿಯುತ್ತಿದ್ದರೂ ಇಲ್ಲಿ ಲೆಕ್ಕಕ್ಕಿಲ್ಲ. ಗಾಯಕ್ಕೆ ಭಂಡಾರ ಲೇಪಿಸಿಕೊಂಡು ಮಲ್ಲಯ್ಯ ಉಧೋ, ಉಧೋ ಚಾಂಗುಬಲ ಉಧೋ ಮಲ್ಲಯ್ಯ, ಡುರ್ರೇ
ಡುರ್ರು ಎನ್ನುವ ಘೋಷಣೆಗಳನ್ನು ಕೂಗುತ್ತಾ ಹೊಡೆದಾಡುತ್ತಾರೆ.

ಮೂರ್ತಿ ವಶಪಡಿಸಿಕೊಳ್ಳಲು ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗಿನ ಜಾವದವರೆಗೆ ಕಾದಾಟ ನಡೆಯಿತು. ಈ ಬಡಿಗೆ ಜಾತ್ರೆ ನೋಡಲು ಕರ್ನಾಟಕ ಮಾತ್ರವಲ್ಲ, ಸೀಮಾಂಧ್ರ, ತೆಲಂಗಾಣ, ಮಹರಾಷ್ಟ್ರದಿಂದಲೂ ಭಕ್ತರು 2 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.