ಕನ್ನಿಕಾ ಪರಮೇಶ್ವರಿ ಜಯಂತಿ ಆಚರಣೆ

ಮೂರ್ತಿಗೆ ಅಲಂಕಾರ•ಕುಂಕುಮಾರ್ಚನೆ, ಪುಷ್ಪಾರ್ಚನೆ•ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸತ್ಕಾರ

Team Udayavani, May 15, 2019, 5:30 PM IST

15-May-33

ಸುರಪುರ: ಕನ್ನಿಕಾ ಪರಮೇಶ್ವರಿ ಜಯಂತ್ಯುತ್ಸವ ನಿಮಿತ್ತ ಆರ್ಯ ವೈಶ್ಯ ಸಮಾಜದ ಮುತ್ತೈದೆಯರಿಗೆ ಉಡಿ ತುಂಬಲಾಯಿತು.

ಸುರಪುರ: ರಂಗಂಪೇಟೆಯ ನಗರೇಶ್ವರ ದೇವಸ್ಥಾನದಲ್ಲಿ ಆರ್ಯವೈಶ್ಯ ಸಮಾಜ ಬಾಂಧವರಿಂದ ಮಂಗಳವಾರ ಕನ್ನಿಕಾ ಪರಮೇಶ್ವರಿ ಜಯಂತ್ಯುತ್ಸವ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

ಜಯಂತ್ಯುತ್ಸವ ನಿಮಿತ್ತ ದೇವಸ್ಥಾನಕ್ಕೆ ಸುಣ್ಣ ಬಣ್ಣ ಬಳಿದು ತಳಿರು ತೋರಣ ಕಟ್ಟಿ ವಿದ್ಯುತ್‌ ದೀಪಗಳಿಂದ ಅಲಂಕರಿಸಲಾಗಿತ್ತು. ಬೆಳಗ್ಗೆ 5:00 ಗಂಟೆಯಿಂದ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು ಜರುಗಿದವು.

ಬೆಳಗ್ಗೆ 6:00 ಗಂಟೆಗೆ ನಿರ್ಮಾಲ್ಯ ವಿಸರ್ಜನೆ, ಕನ್ನಿಕಾ ಪರಮೇಶ್ವರಿ ಮೂರ್ತಿಗೆ ಅಲಂಕಾರ, ದೇವಿಯ ಅಷ್ಟೋತ್ತರ ಪಾರಾಯಣ, ಸಹಸ್ರನಾಮಾವಳಿ ಸಹಿತ ಕುಂಕುಮಾರ್ಚನೆ, ಪುಷ್ಪಾರ್ಚನೆ, ಮಂಗಳಾರತಿ, ಮಹಾ ಮಂಗಳಾರತಿ, ಮಂತ್ರ ಪುಷ್ಪ, ತೀರ್ಥ ಪ್ರಸಾದ ವಿನಿಯೋಗವಾಯಿತು. ಅರ್ಚಕ ರಾಘವೇಂದ್ರ ರಾಜಪುರೋಹಿತ ಪೌರೋಹಿತ್ಯ ವಹಿಸಿದ್ದರು.

ಇದೇ ವೇಳೆ 21 ಜನ ಕುಮಾರಿಯರಿಗೆ 21 ಜನ ಮುತ್ತೈದಿಯರಿಗೆ ಉಡಿ ತುಂಬಿ ವಸ್ತ್ರ ಸಮರ್ಪಣೆ ಮಾಡಲಾಯಿತು. ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಿ ಸತ್ಕರಿಸಲಾಯಿತು. ಈ ವೇಳೆ ಸಮಾಜದ ಮುಖಂಡ ಲಕ್ಷ ್ಮಯ್ಯ ಕಲಕೊಂಡ ಮಾತನಾಡಿ, 33 ಕೋಟಿ ದೇವತೆಗಳಲ್ಲಿ ಕನ್ನಿಕಾ ಪರಮೇಶ್ವರಿಯ ಮಹತ್ವ ಅಪಾರವಾಗಿದೆ ಎಂದರು. ಶ್ರೀ ವಲ್ಲಭ ಕಡಬೂರ ಮಾತನಾಡಿ, ಸಮಾಜ ಬಾಂಧವರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಬೇಕು ಎಂದು ಸಲಹೆ ನೀಡಿದರು.

ಸಂಜೆ ವಾಹನೋತ್ಸವ, ತೊಟ್ಟಿಲು ಸೇವೆ, ಭಜನೆ, ಸಂಗೀತ ಮಂಗಳಾರತಿ, ಮಂತ್ರ ಪುಷ್ಪ ತೀರ್ಥ ಪ್ರಸಾದ ವಿನಿಯೋಗವಾಯಿತು. ಯುವಕ ಯುವತಿಯರಿಗೆ ವಿವಿಧ ಕ್ರೀಡೆಗಳು ಜರುಗಿದವು. ಹಲವಾರು ಯುವಕ ಯುವತಿಯರು ಕ್ರೀಡೆಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ವಿಜೇತರಿಗೆ ಪಾರಿತೋಷಕ ವಿತರಣೆ ಮಾಡಲಾಯಿತು.

ಸಮಾಜದ ಪ್ರಮುಖರಾದ ಕೃಷ್ಟಯ್ಯ ಕಲಕೊಂಡ, ರಾಮಾಂಜನೇಯ ಪೋಲಂಪಲ್ಲಿ, ಗೋಪಾಲಯ್ಯ ಗೌಡಗೇರಿ, ತಿಪ್ಪಯ್ಯ ಪೋಲಂಪಲಿ, ವಾಸುದೇವ ಹೋಬಳಶೆಟ್ಟಿ, ಗುರುರಾಜ ಪೋಲಂಪಲ್ಲಿ, ಶ್ರೀರಾಮ ಕಡಬೂರ, ಗುರುರಾಜ ಪೋಲಂಪಲ್ಲಿ (ಮಂಡಾಳ), ಜೈರಾಮ ಕಡಬೂರ, ಶ್ರೀನಿವಾಸ ಚಿತ್ರಾಲ, ನರಸಯ್ಯ ಹಯ್ನಾಳ, ರಘುರಾಮ ಕಡಬೂರ ಇದ್ದರು.

ಟಾಪ್ ನ್ಯೂಸ್

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.