ಧರೆಗುರುಳಿದ 200 ಅಡಕೆ, 50 ತೆಂಗಿನ ಮರ!


Team Udayavani, Mar 10, 2020, 3:00 AM IST

dharegurulida

ತುಮಕೂರು: ಒತ್ತುವರಿ ತೆರವು ನೆಪದಲ್ಲಿ ಫ‌ಲವತ್ತಾದ ತೋಟ ಧ್ವಂಸ ಮಾಡುವ ಮೂಲಕ ಬಡ ಕುಟುಂಬವನ್ನು ಬೀದಿಪಾಲು ಮಾಡಿದ ಗುಬ್ಬಿ ತಾಲೂಕು ಆಡಳಿತದ ಕ್ರಮ ಖಂಡಿಸಿ ವಾಲ್ಮೀಕಿ ನಾಯಕ ಸಮಾಜದ ಬಂಧುಗಳು ಕಚೇರಿ ಮುಂದೆ ಅನಿರ್ದಿಷ್ಟಾವಧಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಗುಬ್ಬಿ ತಾಲೂಕಿನ ತಿಪ್ಪೂರಿನ ಕೋಡಿಕೆಂಪಮ್ಮ ದೇವಾಲಯದ ಅರ್ಚಕ ವೃತ್ತಿ ಮಾಡುವ ಕುಟುಂಬ ಇನಾಮಿ ಜಮೀನಿನಲ್ಲಿ ಬೆಳೆದಿದ್ದ 200 ಅಡಕೆ ಗಿಡ ಮತ್ತು 50 ತೆಂಗಿನ ಮರಗಳನ್ನು ಅಧಿಕಾರಿಗಳು ಮನುಷ್ಯತ್ವ ಮರೆತು ಮಾ.6ರಂದು ಧರೆಗುರುಳಿಸಿದ್ದು, ಇದರಿಂದ ಕುಟುಂಬ ಬೀದಿಗೆ ಬೀಳುವಂತಾಗಿದೆ. ತಾಲೂಕು ಆಡಳಿತ ನೇರ ಹೊಣೆ ಎಂದು ಪ್ರತಿಭಟನಾಕಾರರು ದೂರಿದರು.

ಅಮಾನವೀಯ ಕೃತ್ಯ: ತಿಪ್ಪೂರು ಗ್ರಾಮದಲ್ಲಿ ಅರ್ಚಕರ ವೃತ್ತಿ ಮಾಡಿಕೊಂಡು ಜೀವನ ಸಾಗಿಸುವ ಅರ್ಚಕ ಕುಟುಂಬದ ಸಿದ್ದಮ್ಮ ಮತ್ತು ಸಣ್ಣಕೆಂಪಯ್ಯ ಅವರಿಗೆ ಸಂಬಂಧಿಸಿದ ಜಮೀನನಲ್ಲಿ 30 ವರ್ಷದಿಂದ ಬೆಳೆದು ಫ‌ಸಲು ನೀಡುತ್ತಿದ್ದ ಅಡಕೆ ಮತ್ತು ತೆಂಗಿನ ಮರಗಳನ್ನು ಗ್ರಾಮಲೆಕ್ಕಾಧಿಕಾರಿ ಮುರಳಿ ಒತ್ತುವರಿ ತೆರವು ಆದೇಶವಿದೆ ಎಂದು ಪೊಲೀಸರ ಸಮಕ್ಷಮದಲ್ಲಿ ಕಡಿದು ಹಾಕಿಸಿದ್ದಾರೆ.

ನೊಟೀಸ್‌ ನೀಡದೆ ಮರ ಕಡಿದು ಹಾಕಿರುವುದು ಅಮಾನವೀಯ ಕೃತ್ಯ ಎಂದು ಕಿಡಿಕಾರಿದರು. ತಹಶೀಲ್ದಾರ್‌ ಎಂ.ಮಮತಾ ಗಮನಕ್ಕೂ ತಂದರೂ ಧರಣಿ ಸ್ಥಳಕ್ಕೆ ಬಾರದಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಫ‌ಲವತ್ತಾದ ತೆಂಗು, ಅಡಕೆ ಮರ ಕಡಿದ ಗ್ರಾಮಲೆಕ್ಕಿಗ, ಕಂದಾಯ ನಿರೀಕ್ಷಕ ಹಾಗೂ ತಹಶೀಲ್ದಾರ್‌ ಅವರನ್ನು ಅಮಾನತು ಮಾಡಬೇಕೆಂದು ಪಟ್ಟು ಹಿಡಿದರು.

ಪೂರ್ವಪರ ತಿಳಿಯಬೇಕಿತ್ತು: ತಾಲೂಕು ವಾಲ್ಮೀಕ ನಾಯಕ ಸಮಾಜದ ಅಧ್ಯಕ್ಷ ಕೆ.ಆರ್‌.ಗುರುಸ್ವಾಮಿ ಮಾತನಾಡಿ, ಸರ್ವೆ ನಂ.113 ಮತ್ತು 114 ರಲ್ಲಿ ತೆಂಗು, ಅಡಕೆ ಮರ ಕಡಿದಿರುವ ತಾಲೂಕು ಆಡಳಿತದಲ್ಲಿನ ದೇವಾಲಯದ ಜಮೀನು ಒತ್ತುವರಿ ತೆರವು ಮಾಡಲು ಮುಂದಾದ ತಹಶೀಲ್ದಾರ್‌ ಪೂರ್ವಪರ ತಿಳಿಯಬೇಕಿತ್ತು ಎಂದು ಹೇಳಿದರು.

ವಿವಾದಿತ ಜಮೀನು ಪ್ರಕರಣ ಹೈಕೋರ್ಟ್‌ ಮೆಟ್ಟಿಲೇರಿ ನಂತರ ಜಿಲ್ಲಾಧಿಕಾರಿ ಕೋರ್ಟ್‌ನಲ್ಲಿದ್ದು, ಯಥಾಸ್ಥಿತಿ ಮುಂದುವರಿಸುವಂತೆ ಹೇಳಿದ್ದರೂ, ಎರಡು ಕುಟುಂಬಕ್ಕೆ ಆಧಾರವಾಗಿದ್ದ ತೆಂಗು ಮತ್ತು ಅಡಕೆ ಮರ ಧರೆಗುರುಳಿಸಿದ್ದಾರೆ. ತಹಶೀಲ್ದಾರ್‌, ಕಂದಾಯ ನಿರೀಕ್ಷಕ ಮತ್ತು ಗ್ರಾಮ ಲೆಕ್ಕಿಗರನ್ನು ಅಮಾನತು ಮಾಡಬೇಕು. ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಧರಣಿ ಸ್ಥಳಕ್ಕೆ ಯಾವ ಅಧಿಕಾರಿ ಆಗಮಿಸದ್ದಕ್ಕೆ ಅಸಮಾಧಾನಗೊಂಡ ಪ್ರತಿಭಟನಾಕಾರರು ಕಚೇರಿಗೆ ಬೀಗ ಜಡಿಯಲು ಮುಂದಾದರು. ಪೊಲೀಸರು ಧರಣಿ ನಿರತರನ್ನು ಸಮಾಧಾನ ಪಡಿಸಿದರು. ಸಂಜೆ ಸ್ಥಳಕ್ಕೆ ಆಗಮಿಸಿದ ಉಪವಿಭಾಗಾಧಿಕಾರಿ ಅಜಯ್‌ ಮಾತನಾಡಿ, ದಾಖಲೆ ಮತ್ತು ಸ್ಥಳ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ಮುಖಂಡರಾದ ಸಾಕಸಂದ್ರ ದೇವರಾಜು, ಎ.ನರಸಿಂಹಮೂರ್ತಿ, ಎನ್‌.ಲಕ್ಷಿರಂಗಯ್ಯ, ಹೇರೂರು ನಾಗಣ್ಣ, ಜಿ.ಎನ್‌.ಎಚ್‌.ಡಿ.ಯಲ್ಲಪ್ಪ, ಕೃಷ್ಣಮೂರ್ತಿ, ಡಿ.ದೇವರಾಜು, ಜಯಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಅರುಣ್‌, ವಿನಯ್‌, ರೈತಸಂಘದ ಕೆ.ಎನ್‌.ವೆಂಕಟೇಗೌಡ, ದಲಿತ ಮುಖಂಡ ಮಾರನಹಳ್ಳಿ ಶಿವಯ್ಯ ಇತರರಿದ್ದರು.

ಅಸ್ವಸ್ಥಗೊಂಡ ಮಹಿಳೆ: ಸೋಮವಾರ ಬೆಳಗ್ಗೆಯಿಂದಲೇ ಆರಂಭವಾದ ಉಪವಾಸ ಸತ್ಯಾಗ್ರಹ ಸಂಜೆ ವೇಳೆಗೆ ಆಕ್ರೋಶ ಕಟ್ಟೆ ಒಡೆಯಿತು. ಆಹಾರ ಸೇವಿಸದ ಸಂತ್ರಸ್ತ ಮಹಿಳೆ ಸಿದ್ದಮ್ಮ ತೀವ್ರ ಅಸ್ವಸ್ಥಗೊಂಡರು. ಸ್ಥಳಕ್ಕೆ ಆಗಮಿಸಿದ ವೈದ್ಯರು ತುರ್ತು ಚಿಕಿತ್ಸೆ ಆಗತ್ಯವಿದೆ, ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಬೇಕೆಂದು ಹೇಳಿದ ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಸಾಗಿಸಲಾಯಿತು. ಸುಮಾರು 7 ತಾಸು ಧರಣಿ ನಡೆದರೂ ಅಹವಾಲು ಸ್ವೀಕರಿಸದೆ ಕಿಂಚಿತ್ತೂ ಕಾಳಜಿ ತೋರದ ತಹಶೀಲ್ದಾರ್‌ ಮಮತ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ರೈತರ ಮೇಲಿನ ಅಧಿಕಾರಿಗಳ ದರ್ಪ ಸರಿಯಲ್ಲ. ಬಡ ಕುಟುಂಬಕ್ಕೆ ಆಸರೆಯಾಗಿದ್ದ ತೆಂಗು ಮತ್ತು ಅಡಕೆ ಮರಗಳು ಕಡಿಯಲು ಅಧಿಕಾರಿಗಳಿಗೆ ಹಕ್ಕಿಲ್ಲ. ಜಮೀನು ಒತ್ತುವರಿ ಬಗ್ಗೆ ನೊಟೀಸ್‌ ನೀಡದೆ ಏಕಾಏಕಿ ಮರ ಕಡಿದ ಅಧಿಕಾರಿಗಳಿಗೆ ಶಿಕ್ಷೆಯಾಗಬೇಕು. ಜಿಲ್ಲಾಧಿಕಾರಿ ಆದೇಶದಂತೆ ಯಥಾಸ್ಥಿತಿ ಕಾಪಾಡಬೇಕಿತ್ತು. ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿ ದರ್ಪ ಮೆರೆದಿರುವುದು ರೈತರಿಗೆ ಆದ ಅನ್ಯಾಯವಾಗಿದೆ. ಮೇಲಾಧಿಕಾರಿಗಳು ಸೂಕ್ತ ಕ್ರಮವಹಿಸಬೇಕು. ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಬೇಕು.
-ಎ.ಗೋವಿಂದರಾಜು, ರೈತಸಂಘದ ಜಿಲ್ಲಾಧ್ಯಕ್ಷ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.