ವೈಭವದ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ


Team Udayavani, Apr 20, 2019, 12:50 PM IST

14

ಹುಳಿಯಾರು: ಹೋಬಳಿ ದಸೂಡಿ ಗ್ರಾಮದ ಶ್ರೀ ಆಂಜನೇಯಸ್ವಾಮಿಯ ಬ್ರಹ್ಮರಥೋತ್ಸವವು ಭಾರೀ ಜನಸ್ತೋಮದ ನಡುವೆ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.

ರಥೋತ್ಸವದ ಅಂಗವಾಗಿ ಮುಂಜಾನೆಯಿಂದಲೇ ಸ್ವಾಮಿಯವರ ಧಾರ್ಮಿಕ ಕೈಂಕರ್ಯಗಳು ನಡೆದವು. ಸ್ವಾಮಿಯ ಪೂಜೆಯಿಂದ ಹಿಡಿದು, ಪತ್ತು, ನಗಾರಿ, ಧ್ವಜ, ಸೂರ್ಯಪಾನ, ಚಂದ್ರಪಾನ, ಚಾಮರ, ಮಕರ ತೋರಣ ಹೀಗೆ ಎಲ್ಲಾ ವಿವಿಧ ಕೈಂಕರ್ಯವನ್ನು ಪುರೋಹಿತ ವರ್ಗ ನೆರವೇರಿಸಿದ್ದು, ವಿಶೇಷವಾಗಿತ್ತು. ಆಂಜನೇಯಸ್ವಾಮಿಯವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ನಂತರ ಗೌಡಗೆರೆಯ ದುರ್ಗಮ್ಮದೇವರು ಹಾಗೂ ಆಂಜನೇಯಸ್ವಾಮಿಯ ಉತ್ಸವ ಮೂರ್ತಿಯನ್ನು ವಿವಿಧ ಹೂಗಳಿಂದ ಅಲಂಕರಿಸಿ ಸಕಲ ವಾದ್ಯಮೇಳದೊಂದಿಗೆ ದೇವಾಲಯವನ್ನು ಪ್ರದಕ್ಷಿಣೆ ಹಾಕಿ ಬಂದ ನಂತರ ಕೆಂಚರಾಯಸ್ವಾಮಿ, ದೂತರಾಯ ಸ್ವಾಮಿ ಹಾಗೂ ನಗಾರಿ ಹೊತ್ತ ಬಸವನೊಂದಿಗೆ ರಥದ ಬಳಿ ಕರೆತರಲಾಯಿತು. ಜೈಕಾರದೊಂದಿಗೆ ಶುಭಲಗ್ನದಲ್ಲಿ ಆಂಜನೇಯ ಸ್ವಾಮಿಯವರನ್ನು ಬ್ರಹ್ಮರಥದ ಮೇಲೆ ಪ್ರತಿಷ್ಠಾಪಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

ರಥದ ಮುಂದೆ ನೆಟ್ಟಿದ್ದ ಕದಳಿ ಮರವನ್ನು ತುಂಡರಿಸಿದ ನಂತರ ಫಲಪುಷ್ಪಾದಿಗಳಿಂದ, ರಂಗಿನ ಬಾವುಟ, ತಳಿರು ತೋರಣಗಳಿಂದ ಅಲಂಕೃತಗೊಂಡ ರಥವನ್ನು ಮಂಗಳವಾದ್ಯ, ವೇದ ಘೋಷಗಳ ನಡುವೆ, ಜೈ ಹನುಮಾನ್‌ ಉದ್ಘೋಷದೊಂದಿಗೆ ಭಕ್ತರು ರಥವನ್ನು ಎಳೆದರು. ಭಕ್ತರು ದೂರದಿಂದಲೇ ಬಾಳೆಹಣ್ಣನ್ನು ರಥದ ಕಲಶಕ್ಕೆ ಎಸೆಯುವ ಮೂಲಕ ತಮ್ಮ ಭಕ್ತಿಯನ್ನು ಸಮರ್ಪಿಸಿದರು. ಮಹಿಳೆಯರು ಸ್ವಾಮಿಗೆ ಹಣ್ಣುಕಾಯಿ ಅರ್ಪಿಸಿದರು. ಮೂವತ್ತು ಅಡಿಗೂ ಎತ್ತರದ ರಥೋತ್ಸವವನ್ನು ವೀಕ್ಷಿಸಲು ಅಪಾರ ಭಕ್ತರು ಆಗಮಿಸಿದ್ದರು.

ರಥೋತ್ಸವದ ನಂತರ ಬ್ರಾಹ್ಮಣರಿಗೆ ಸಂತರ್ಪಣೆ ನಡೆಯಿತಲ್ಲದೆ, ದೇವಾಲಯ ಸಮಿತಿ, ಆರ್ಯವೈಶ್ಯ ಜನಾಂಗದವರಿಂದ, ಯುವಕ ಸಂಘದವರಿಂದ ಭಕ್ತಾಗಳಿಗೆ ಪಾನಕ, ಫಲಾಹಾರ ಸೇವೆ ನಡೆಯಿತು. ರಥಕ್ಕೆ ಹಾಗೂ ಶ್ರೀ ಸ್ವಾಮಿಯವರಿಗೆ ಹಾಕಿದ ಹಾರಗಳನ್ನು ಹರಾಜಿನಲ್ಲಿ ಸಹಸ್ರಾರು ರೂ.ಗಳಿಗೆ ಕೊಳ್ಳುವುದರ ಮೂಲಕ ಭಕ್ತಿಭಾವ ಸಮರ್ಪಿಸಿದರು.

ಆರ್ಯವೈಶ್ಯ ಮಹಿಳಾ ಮಂಡಳಿ, ಶ್ರೀ ಮಾರುತಿ ಭಜನಾಮಂಡಳಿ ಹಾಗೂ ಎಮ್ಮೆಕರಕೆಹಟ್ಟಿ ”ಶ್ರೀರಾಮ ಭಜನಾ ಮಂಡಳಿ”ಯವರಿಂದ ಅಖಂಡ ಭಜನೆ ಹಾಗೂ ಕೆಳಗಲ ಗೊಲ್ಲರಹಟ್ಟಿ ಯಾದವ ತಂಡಗಳ ವಿಶೇಷ ಕೋಲಾಟ ಭಕ್ತರ ಗಮನ ಸೆಳೆಯಿತು. ಊರಿನ ತುಂಬೆಲ್ಲಾ ಕೇಸರಿ ಬಣ್ಣದ ಮಾರುತಿ ಧ್ವಜ ರಾರಾಜಿಸುತ್ತಿತ್ತು. ಶ್ರೀಸೇನೆಯ ಸ್ವಯಂಸೇವಕರು ಶಿಸ್ತಿನಿಂದ ಸಕಲ ಕಾರ್ಯಗಳಲ್ಲೂ ತೊಡಗಿಕೊಂಡು ನಿರ್ವಹಿಸಿದರು. ಬೇಸಿಗೆ ಬಿಸಿಲಿನ ಝಳವನ್ನು ಲೆಕ್ಕಿ ಸದೆ ದಬ್ಬಗುಂಟೆ, ರಂಗನಕೆರೆ, ಹೊಯ್ಸಳಕಟ್ಟೆ, ಕಲ್ಲೇನ ಹಳ್ಳಿ, ಮರೆನಡು, ಹುಳಿಯಾರು, ಬೆಳ್ಳಾರ ಸೇರಿದಂತೆ ದಸೂಡಿ ಸುತ್ತಮುತ್ತಲ ಹತ್ತಾರೂ ಹಳ್ಳಿಗಳ ಜನರು ಆಗಮಿಸಿ ಸ್ವಾಮಿಯ ದರ್ಶನ ಪಡೆದರು.

ಇಂದಿನಿಂದ ಕೊಲ್ಲಾಪುರದಮ್ಮನ ವಾರ್ಷಿಕೋತ್ಸವ

ಹುಳಿಯಾರು: ಇಲ್ಲಿನ ಹೊಸಹಳ್ಳಿಯ ಶ್ರೀ ಮಹಾಲಕ್ಷ್ಮೀ ಕೊಲ್ಲಾಪುರದ ಕರಿಯಮ್ಮ ದೇವಿಯವರ ಮೊದಲ ವರ್ಷದ ವಾರ್ಷಿಕೋತ್ಸವ ಮತ್ತು ಆರತಿ ಬಾನವನ್ನು ಶನಿವಾರದಿಂದ ಏ.26 ಶುಕ್ರವಾರದವರೆಗೆ ಏರ್ಪಡಿಸಲಾಗಿದೆ ಎಂದು ದೇಗಲದ ಅಧ್ಯಕ್ಷ ಜಯಣ್ಣ ತಿಳಿಸಿದರು. ಶನಿವಾರ ಸಂಜೆ ವಜ್ರತೀರ್ಥ ಸ್ನಾನ, ಮಹಾಮಂಗಳಾರತಿ ಮತ್ತು ಪ್ರಸಾಸ ವಿನಿಯೋಗ. ಸಂಜೆ 6 ಕ್ಕೆ ನೂರೊಂದೆಡೆ ಸೇವೆ ನಡೆಯಲಿದೆ. ಮಂಗಳವಾರ ಶ್ರೀ ಅಮ್ಮನವರಿಗೆ ಕುಂಕುಮಾರ್ಷನೆ, ಅಭಿಷೇಕ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ಸಂಜೆ 8 ಕ್ಕೆ ಆರತಿ ಬಾನ ನಡೆಯಲಿದೆ. ಶುಕ್ರವಾರ ಬೆಳಗ್ಗೆ ಗಣಪತಿ ಪೂಜೆ, ಪುಣ್ಯಾಹ, ದೇವನಾಂದಿ, ಗಣಪತಿ, ನವಗ್ರಹ ಹೋಮ, ಅಮ್ಮನವರಿಗೆ ಮೂಲಮಂತ್ರ ಹೋಮ, ಮಹಾಲಕ್ಷ್ಮೀ ಹೋಮ, 12-30 ಕ್ಕೆ ಪುರ್ಣಾಹುತಿ ನಂತರ ಮಹಾಮಂಗಳಾರತಿ ನಂತರ ಅನ್ನಸಂತರ್ಪಣೆ, ರಾತ್ರಿ 8 ಕ್ಕೆ ಉಯ್ನಾಲೋತ್ಸವ ನಡೆಯಲಿದೆ. ಎಂದು ಅಧ್ಯಕ್ಷ ಎಚ್.ಜಯಣ್ಣ, ಕನ್ವೀನರ್‌ ಎಚ್.ಎನ್‌.ನಾಗೋಜಿರಾವ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಸಲಮ್ಮ ದೇವಿ ಸಿಡಿ, ರಥೋತ್ಸವ ಇಂದು

ತುರುವೇಕೆರೆ: ಪಟ್ಟಣದ ಗ್ರಾಮದೇವೆತೆ ಉಡುಸಲಮ್ಮ ದೇವಿ ಸಿಡಿ ಮತ್ತು ರಥೋತ್ಸವವು ಶನಿವಾರ ನಡೆಯಲಿದ್ದು, 21 ರಂದು ಭಾನುವಾರ ಹಗಲುಪರಿಷೆ ,ರಾತ್ರಿ ಆನೆ ಉತ್ಸವ ನಡೆಯಲಿದೆ. 22 ರ ಸೋಮವಾರ ಮದ್ಯಾಹ್ನ 1 ಗಂಟೆ ಮಹಾ ರಥೋತ್ಸವ ನಡೆಯಲಿದೆ, ಶನಿವಾರ 20 ರಂದು ನಡೆಯುವ ಸಿಡಿಯಲ್ಲಿ ಮೂಡ್ಲಿಗಿರಿಗೌಡರ ಕುಲಸ್ಥರಾದ ಅತ್ತಿಕುಳ್ಳೆ ಪಾಳ್ಯ,ಹರಿಶಿಣದಹಳ್ಳಿ ಚಿಕ್ಕತುರುವೇಕೆರೆ ಆನಂದಪಾಳ್ಯ, ಭೂವನಹಳ್ಳಿ ಪಾಳ್ಯದವರು ಸಿಡಿ ಕಂಬ ಏರಿಲಿದ್ದು, ಭಕ್ತರು ಭಾಗವಹಿಸಲು ದೇಗುಲದ ಧರ್ಮದರ್ಶಿ ಶ್ರೀನಿವಾಸ್‌ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.