PDOಗಳಿಗೆ ಒಂದೇ ದಿನ ಸೇವೆ ಪರಿಗಣಿಸಿ ಜ್ಯೇಷ್ಠತಾ ಪಟ್ಟಿ ಪ್ರಕಟಿಸಲು ಬಿ.ಸುರೇಶ್ ಆಗ್ರಹ


Team Udayavani, Jun 19, 2024, 11:23 PM IST

PDOಗಳಿಗೆ ಒಂದೇ ದಿನ ಸೇವೆ ಪರಿಗಣಿಸಿ ಜ್ಯೇಷ್ಠತಾ ಪಟ್ಟಿ ಪ್ರಕಟಿಸಲು ಬಿ.ಸುರೇಶ್ ಆಗ್ರಹ

ಕುಣಿಗಲ್: ಗ್ರಾಮೀಣಾಭಿವೃದ್ದಿ ಆಯುಕ್ತಾಲಯದ ಕರಡು ಜ್ಯೇಷ್ಠತಾ ಪಟ್ಟಿ ಯಥಾವತ್ ಜಾರಿಯಾದರೇ ರಾಜ್ಯದ 16 ಜಿಲ್ಲೆಯ ಐದು ಸಾವಿರ ನೌಕರರ ಬಡ್ತಿಗೆ ಹಿನ್ನಡೆಯಾಗಲಿದ್ದು ಹಾಗಾಗಿ ಸರ್ಕಾರ 2009 ರ ಒಂದೇ ಅಧಿಸೂಚನೆಯಡಿಯಲ್ಲಿ ನೇರ ನೇಮಕಾತಿ ಹೊಂದಿದ್ದ 30 ಜಿಲ್ಲೆಗಳ ಎಲ್ಲಾ ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳಿಗೆ ಒಂದೇ ಜ್ಯೇಷ್ಠತಾ ದಿನಾಂಕವನ್ನು ಪರಿಗಣಿಸಿ ಜ್ಯೇಷ್ಠತಾ ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಕ್ಷೇಮಾಭಿವೃದ್ದಿ ಸಂಘದ ರಾಜ್ಯ ಪರಿಷತ್ ಸದಸ್ಯ ಬಿ.ಸುರೇಶ್ ಸರ್ಕಾರವನ್ನು ಅಗ್ರಪಡಿಸಿದ್ದಾರೆ.

ಪಟ್ಟಣದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿ 13 ಜಿಲ್ಲೆಗಳ ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳು ತಾವು ಮಾಡದ ತಪ್ಪಿನಿಂದ್ದಾಗಿ ಸರ್ಕಾರವು ಕರ್ನಾಟಕ ಆಡಳಿತ ನ್ಯಾಯ ಮಂಡಲಿಯ ಮಧ್ಯ ಪ್ರವೇಶದಿಂದ್ದಾಗಿ ವಿವಿಧ ದಿನಾಂಕಗಳಂದು ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದ ಪರಿಣಾಮವಾಗಿ ಸೇವೆಗೆ ಸೇರದ ದಿನಾಂಕವನ್ನು ಪರಿಗಣಿಸಿ ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ಜ್ಯೇಷ್ಠತಾ ಪಟ್ಟಿಯನ್ನು ಆರ್‌ಡಿಪಿಆರ್ ಇಲಾಖೆ ಪ್ರಕಟಿಸಿರುವರಿಂದ 13 ಜಿಲ್ಲೆಗಳ ಪಿಡಿಓ, ಕೆಳ ಹಂತದ ಗ್ರೇಡ್ 1 ಕಾರ್ಯದರ್ಶಿ, ಗ್ರೇಡ್ -2 ಕಾರ್ಯದರ್ಶಿ, ಬಿಲ್ ಕಲೆಕ್ಟರ್‌ಗಳಿಗೆ ಮುಂದಿನ 20 ವರ್ಷದ ಅವದಿಯಲ್ಲಿ ಮುಂಬಡ್ತಿ ಇಲ್ಲದಂತ್ತಾಗುತ್ತದೆ, ಪಿಡಿಓ ಹುದ್ದೆಗಳನ್ನು ಹೊಸದಾಗಿ ಸೃಜನೆ ಮಾಡಿ 2009 ರಲ್ಲಿ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನಿಸಲಾಗಿತ್ತು ಪರೀಕ್ಷೆ ಎಲ್ಲರೂ ಒಂದೇ ಬಾರಿ ಬರೆದಿದ್ದರು, ತಾತ್ಕಾಲಿಕ ಆಯ್ಕೆ ಪಟ್ಟಿಯೂ ಒಂದೇ ಭಾರಿ ಬಿಡುಗಡೆ ಮಾಡಲಾಗಿತ್ತು, ಅಂತಿಮ ಆಯ್ಕೆ ಪಟ್ಟಿಯು ಬಿಡುಗಡೆ ಆಗುವ ಸಂದರ್ಭದಲ್ಲಿ ಕೆಲವು ಆಯ್ಕೆಯಾಗದಂತೆ ಅಭ್ಯರ್ಥಿಗಳು ನ್ಯಾಯಾಲಯದ ಮೊರೆ ಹೊದ ಪರಿಣಾಮವಾಗಿ ಕರ್ನಾಟಕ ಆಡಳಿತ ನ್ಯಾಯ ಮಂಡಲಿಯು ಮೊದಲು ಎಲ್ಲ ಜಿಲ್ಲೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲು ತಡೆಯಾಜ್ಞೆ ನೀಡಲಾಗಿತ್ತು ನ್ಯಾಯಾಲಯವು 30 ಜಿಲ್ಲೆಗಳ ಪೈಕಿ 17 ಜಿಲ್ಲೆಗಳಿಗೆ ಮೊದಲ ಹಂತದಲ್ಲಿ ತಡೆಯಾಜ್ಞೆಯನ್ನು ತೆರವುಗೊಳಿಸಿ ನಂತರ ಇನ್ನೂ 13 ಜಿಲ್ಲೆಗಳ ತಡೆಯಾಜ್ಞೆಯನ್ನು ವಿವಿಧ ದಿನಾಂಕದಂದು ತೆರವುಗೊಳಿಸಿತ್ತು, ಜ್ಯೇಷ್ಠತಾ ಪಟ್ಟಿಯ ನಿಯಮಗಳ ಬಗ್ಗೆ ಸರ್ಕಾರಕ್ಕೆ ಸ್ಪಷ್ಟ ನಿಲುವು ಇದ್ದರೂ ಕೂಡ ಕರ್ನಾಟಕ ಆಡಳಿತ ನ್ಯಾಯ ಮಂಡಲಿಯು ತಡೆಯುವ ಹೆಜ್ಜೆಯನ್ನು ತೆರವುಗೊಳಿಸಿದಂತೆ ಆಯಾ ಜಿಲ್ಲೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ಸರ್ಕಾರವು ಬಿಡುಗಡೆಗೊಳಿಸಿದ್ದು, ಸರ್ಕಾರದ ತಪ್ಪಗಿರುತ್ತದೆ, ಸರ್ಕಾರವು ಆ ಹಂತದಲ್ಲೇ ನ್ಯಾಯಾಲಯದಲ್ಲಿ ಬಾಕಿ ಇದ್ದ ಎಲ್ಲಾ ಪ್ರಕರಣಗಳು ತಿರುವಳಿ ಆಗುವವರೆಗೂ ಅಥವಾ ತಿರುಗುಗೊಳಿಸುವ ವರೆಗೂ ಕಾಯ್ದೆಯು 30 ಜಿಲ್ಲೆಗಳ ಎಲ್ಲಾ ಪಂಚಾಯ್ತಿಗಳ ಎಲ್ಲಾ ಪಂಚಾಯ್ತಿ ಅಭಿವೃದ್ದಿ ಅಧಿಕಾರಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಒಂದೇ ಸಾರಿ ಬಿಡುಗಡೆಗೊಳಿಸಿದರೇ ಈ ಸಮಸ್ಯೆ ಉದ್ಬವವಾಗುತ್ತಿರಲಿಲ್ಲ, ಆದರೆ ಸರ್ಕಾರವು ಈ ನಿಯಮವನ್ನು ಪಾಲಿಸಿರುವುದಿಲ್ಲ, ಇದರಿಂದ ನ್ಯಾಯಾಲಯದ ಪ್ರಕರಣಗಳಿಂದ ನೇಮಕಾತಿ ಪ್ರಕ್ರಿಯೆ ತಡವಾದರಿಂದ ಹಲವು ಜಿಲ್ಲೆಗಳ ಪಿಡಿಓಗಳು ಬಡ್ತಿಯ ಅವಕಾಶ ಇಲ್ಲದೆ ಜೀವನ ಪರಿಯಂತ ತೊಂದರೆ ಅನುಭವಿಸುವ ವಾತಾವರಣ ನಿರ್ಮಾಣವಾಗಿದೆ ಹಾಗಾಗಿ 2009 ರ ಅಧಿ ಸೂಚನೆಯಲ್ಲಿ ನೇಮಕಗೊಂಡ ಪಿಡಿಓಗಳಿಗೆ ಒಂದೇ ದಿನ ಸೇವೆ ಪರಿಗಣಿಸಿ ಜ್ಯೇಷ್ಠತಾ ಪಟ್ಟಿ ಪ್ರಕಟಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸಾಮಾಜಿಕ ಅಸಮತೋಲ, ಅನ್ಯಾಯ ಉಂಟಾಗಿದೆ : ಮೈಸೂರು, ಮಂಡ್ಯ, ರಾಮನಗರ, ಕೊಪ್ಪಳ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಯಾದಗಿರಿ, ಕಲಬುರಗಿ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಹಾವೇರಿ ಜಿಲ್ಲೆ ಸೇರಿದಂತೆ ಇತರೆ ಜಿಲ್ಲೆಯ ಪಿಡಿಓ ಮತ್ತು ಅವರ ಕೆಳ ಹಂತದ ಅಧಿಕಾರಿಗಳಿಗೆ ಜ್ಯೇಷ್ಠತಾ ಪಟ್ಟಿಯಲ್ಲಿ ಅನ್ಯಾಯವಾಗಿದೆ ಕೂಡಲೇ ಸರ್ಕಾರ ಈ ಸಂಬಂಧ ಕ್ರಮತೆಗೆದುಕೊಳ್ಳಬೇಕೆಂದು ಹಿಂದಿನ ಸರ್ಕಾರಕ್ಕೆ ಹೀಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.15- 2022 ರಂದು ಪತ್ರ ಬರೆದಿದ್ದರೂ ಆದರೆ ಈಗ ಅವರದೇ ಸರ್ಕಾರ ಇರುವುದರಿಂದ ಈ ತಾರತಮ್ಯವನ್ನು ಹೋಗಲಾಡಿಸಿ 16 ಜಿಲ್ಲೆಯ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ ಅನ್ಯಾಯವಾಗದಂತೆ ಬಡ್ತಿ ಸಂಬಂಧ ಪ್ರಕ್ರಿಯೆಗಳನ್ನು ಕೂಡಲೇ ಕೈಗೊಂಡು ಸಾಮಾಜಿಕ ನ್ಯಾಯ ಒದಗಿಸಬೇಕೆಂದು ಸುರೇಶ್ ಮನವಿ ಮಾಡಿದರು.

ಟಾಪ್ ನ್ಯೂಸ್

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

1-sadsad

Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್

koo

Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

MUST WATCH

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

ಹೊಸ ಸೇರ್ಪಡೆ

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

1-sadsad

Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್

koo

Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.