ಬರಗೂರು-ಮದಲೂರು ರಸ್ತೆ ಕಾಮಗಾರಿ ಆರಂಭ
ಉದಯವಾಣಿ ವರದಿಗೆ ಸ್ಪಂದಿಸಿದ ಮುಖ್ಯ ಎಂಜಿನಿಯರ್ ವೀರಭದ್ರಪ್ಪ
Team Udayavani, Jan 31, 2021, 5:39 PM IST
ಬರಗೂರು: ಬರಗೂರು ಮಾರ್ಗವಾಗಿ ಮದಲೂರು ವರೆಗಿನ ಡಾಂಬರೀಕರಣ ರಸ್ತೆ ಕಾಮಗಾರಿ ಪ್ರಾರಂಭವಾಗಿ ಒಂದು ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲದಿರುವುದು ನಮ್ಮ ಗಮನಕ್ಕೆ ಬಂದಿದ್ದು ಇನ್ನು ನಾಲ್ಕೆçದು ದಿನಗಳಲ್ಲಿ ಕೆಲಸ ಪ್ರಾರಂಭಿಸಿ ತುರ್ತಾಗಿ ಕಾಮಗಾರಿ ಮುಗಿಸುವಂತೆ ಬೆಂಗಳೂರು ಎಸ್ಎಸ್ಡಿಪಿ ಚೀಫ್ ಎಂಜಿನಿಯರ್ ವೀರಭದ್ರಪ್ಪ ಗುತ್ತಿಗೆದಾರರಿಗೆ ತಾಕೀತು ಮಾಡಿದರು.
ಶಿರಾ ತಾಲೂಕು ಬರಗೂರಿನಿಂದ ಮದಲೂರು ಮಾರ್ಗವಾಗಿ ಕೈಗೊಂಡಿರುವ ಸುಮಾರು 17.7 ಕೋಟಿ ರೂ. ವೆಚ್ಚದ ಕಾಮಗಾರಿ ಕುಂಟಿತಗೊಂಡು ಸಾಗುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು. ರಸ್ತೆ ಕಾಮಗಾರಿ ಕುಂಟಿತಗೊಂಡಿರುವ ಬಗ್ಗೆ ಉದಯವಾಣಿ ವರದಿ ಪ್ರಕಟಿಸಿತ್ತು.
ಲೋಕೋಪಯೋಗಿ ಇಲಾಖೆ ಎಂಜಿನಿಯರ್ಗಳಿಗೆ ಕನ್ನಡ ಪರ ಸಂಘಟನೆಗಳು ಹಾಗೂ ಗ್ರಾಮಸ್ಥರು ದೂರವಾಣಿ ಕರೆ ಮಾಡಿ ದೂರು ನೀಡಿರುವುದು ನಮ್ಮ ಗಮನಕ್ಕೆ ಬಂದ ಕಾರಣ ರಸ್ತೆ ಕಾಮಗಾರಿ ಸ್ಥಳ ಪರಿಶೀಲಿಸಿಲಾಗಿದೆ.
2020ರ ಜನವರಿ ಯಲ್ಲಿ ಈ ಕಾಮಗಾರಿ ಪ್ರಾರಂಭವಾಗಿತ್ತು. ಕೊರೊನಾ ಸೇರಿದಂತೆ ಹಲವು ಸಮಸ್ಯೆ ಗಳಿಂದ ಕಾಮಗಾರಿಗೆ ಅಡ್ಡಿಯಾಗಿತ್ತು. ಗುತ್ತಿಗೆದಾರರ ನಿರ್ಲಕ್ಷ್ಯದಿಂದಾಗಿ ಕಾಮಗಾರಿ ಕುಂಟಿತಗೊಂಡಿದೆ. ರಸ್ತೆ ಕಾಮಗಾರಿಯಲ್ಲಿ ಇನ್ನೂ ಹಲವು ಲೋಪಗಳಿದ್ದು ಗುತ್ತಿಗೆದಾರರಿಗೆ ತಿಳಿಸಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಕೆಲಸ ಪ್ರಾರಂಭಿಸಿ ಕಾಮಗಾರಿ ತುರ್ತಾಗಿ ಪೂರ್ಣಗೊಳಿ ಸಲಾಗುವುದೆಂದು ತಿಳಿಸಿದರು.
ಇದನ್ನೂ ಓದಿ:ಸುರಕ್ಷತೆಗಾಗಿ ಹೆಲ್ಮೆಟ್ಕಡ್ಡಾಯ: ಶಿವಮೂರ್ತಿ
ಬೆಂಗಳೂರು ಎಸ್ಎಸ್ಡಿಪಿ ಸಹಾಯಕ ಎಂಜಿನಿಯರ್ ಶ್ರೀನಿವಾಸ್, ಮಧುಗಿರಿ ಲೋಕೋಪ ಯೋಗಿ ಇಲಾಖೆ ಎಂಜಿನಿಯರ್ ಪ್ರಕಾಶ್, ಶಿರಾ ಲೋಕೋಪಯೋಗಿ ಇಲಾಖೆ ಉಪವಿಭಾಗದ ಎಇಇ ಮಲ್ಲೇಶ್, ಸಹಾಯಕ ಎಂಜಿನಿಯರ್ ಗೋವಿಂದಪ್ಪ, ಸ್ವಾಮಿ ನಾಯಕ್, ಗುತ್ತಿಗೆದಾರ ಪರವಾಗಿ ಸಂತೋಷ್ ಇತರರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ
Puttur: ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ
Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್ ಧ್ವನಿ; ಹೀರೋ ಮೇಲೆ ಆರೋಪ
JDS: ಎಡಿಜಿಪಿ ವಿರುದ್ಧ ಜೆಡಿಎಸ್ ಪ್ರತಿಭಟನೆ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.