ಬಿಜೆಪಿ ರಾಜ್ಯದಲ್ಲಿ ಸುನಾಮಿ ರೀತಿ ಮತ್ತೆ ಅಧಿಕಾರಕ್ಕೆ : ಸಿಎಂ ಬೊಮ್ಮಾಯಿ

ಜನ ಸಂಕಲ್ಪ ಯಾತ್ರೆ ; ಈ ಬಾರಿ ಕೊರಟಗೆರೆ ಕ್ಷೇತ್ರದಲ್ಲಿ ಕಮಲ ಅರಳುತ್ತದೆ

Team Udayavani, Dec 7, 2022, 7:20 PM IST

1dsadsdsa

ಕೊರಟಗೆರೆ: 2023 ರ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಗುಜರಾತ್ ರಾಜ್ಯದಂತೆ ಸುನಾಮಿ ರೀತಿ ಮತ್ತೆ 132 ಸ್ಥಾನಗಳನ್ನು ಗಳಿಸಿ ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕೊರಟಗೆರೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಬುಧವಾರ ನಡೆದ ಬಿಜೆಪಿ ”ಜನ ಸಂಕಲ್ಪ” ಯಾತ್ರೆಯಲ್ಲಿ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ದುರಾಡಳಿತವನ್ನು ಜನರು ಗಮನಿಸಿದ್ದಾರೆ. ಧರ್ಮಗಳ ಮತ್ತು ಜಾತಿಗಳ ಮಧ್ಯ ವಿಷಬೀಜ ಬಿತ್ತಿ ಸಮಾಜವನ್ನು ಒಡೆದು ಅದರಲ್ಲಿ ಅಧಿಕಾರವನ್ನು ಅನುಭವಿಸುವ ಕೆಟ್ಟ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ.ಮುಸ್ಲಿಮರ ಒಲೈಕೆಯ ನಾಟಕವಾಡುವ ಕಾಂಗ್ರೆಸ್ ನಾಯಕರುಗಳು ಅವರ 5 ಸಾವಿರ ಕೋಟಿ ವಕ್ಫ್ ಬೋರ್ಡ್ ಆಸ್ತಿಯನ್ನು ಕಬಳಿಸಿದ್ದಾರೆ, ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಕಣ್ಣು ಒರೆಸಿಕೊಂಡು ಮೋಸಮಾಡಿಕೊಂಡು ಬರುತ್ತಿದ್ದಾರೆ.ನಾವುಗಳು ಎಸ್ಸಿ ಎಸ್ಟಿ ಸಮುದಾಯಕ್ಕೆ ಅವರ ಮೀಸಲಾತಿಯನ್ನು ಶೇ.17 ಮತ್ತು ಶೇ.7 ರಷ್ಟು ಹೆಚ್ಚಿಸಿದ್ದೇವೆ. ಅದರೆ ಸಿದ್ದರಾಮಯ್ಯನವರಿಗೆ ಈ ಬದ್ದತೆ ಇರಲ್ಲಿಲ್ಲ.ಬಯಲು ಸೀಮೆಯ ಈ ಭಾಗಕ್ಕೆ ಎತ್ತಿನಹೊಳೆ ನೀರಾವರಿ ಯೋಜನೆಯನ್ನು ಪ್ರಾರಂಭಿಸಿದ್ದು ಬಿಜೆಪಿ ಸರ್ಕಾರ ಅದನ್ನು ಪೂರ್ಣಗೋಳಿಸುವುದು ನಾವೆ, ಈ ಯೋಜನೆಯ ಕಾಮಗಾರಿಗಾಗಿ ನನ್ನ ಅವದಿಯಲ್ಲಿ 3 ಸಾವಿರ ಕೋಟಿ ಹಣ ಬಿಡುಗಡೆ ಮಾಡಿದ್ದೇನೆ.ರಾಜ್ಯದಲ್ಲಿ 100 ಕ್ಕೂ ಹೆಚ್ಚು ಅಂಬೇಡ್ಕರ್ ವಸತಿ ಶಾಲೆ, ಕನಕ ವಸತಿ ಶಾಲೆಗಳನ್ನು ನಿರ್ಮಿಸಿದ್ದೇವೆ, ಈ ಕಾರಣಕ್ಕಾಗಿ ಬಿಜೆಪಿಗೆ ಮತ ನೀಡಿ ರಾಜ್ಯದ ಅಭಿವೃದ್ಧಿಗೆ ಕೈಜೋಡಿಸಿ ಎಂದು ಕರೆ ನೀಡಿದರು.

ಕೊರಟಗೆರೆ ವಿಧಾನ ಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಪಕ್ಷವನ್ನು ಗೆಲ್ಲಿಸಿ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತನ್ನಿ, ನಂತರ ಆ ಅವಧಿಯಲ್ಲಿ ಈ ಕ್ಷೇತ್ರವನ್ನು ಅಭಿವೃದ್ದಿಯತ್ತ ಕೊಂಡೊಯ್ಯಲಾಗುವುದು. ಈ ಕ್ಷೇತ್ರದ ಶಾಸಕ ಡಾ.ಜಿ.ಪರಮೇಶ್ವರ್ ರವರ ಸೋಲಿಗೆ ನೀವು ತಲೆ ಕೆಡಿಸಿಕೊಳ್ಳಬೇಡಿ, ಅವರನ್ನು ಕಾಂಗ್ರೆಸ್ ಪಕ್ಷದವರೇ ಸೋಲಿಸುತ್ತಾರೆ.ನಮ್ಮ ಅಭ್ಯರ್ಥಿ ಗೆಲುವಿಗೆ ನೀವುಗಳು ಶ್ರಮಪಟ್ಟರೆ ಸಾಕು ಈ ಬಾರಿ ಕೊರಟಗೆರೆ ಕ್ಷೇತ್ರದಲ್ಲಿ ಕಮಲ ಅರಳುತ್ತದೆ ಎಂದರು.

ಸಚಿವ ಗೋವಿಂದಕಾರಜೋಳ ಮಾತನಾಡಿ, ಕಾಂಗ್ರೆಸ್ ಪಕ್ಷ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದಷ್ಟು ಬೇರೆ ಯಾರು ಮಾಡಿಲ್ಲ. ಅವರನ್ನು ಲೋಕಸಬಾ ಚುನಾವಣೆಯಲ್ಲಿ ಪಕ್ಷದಿಂದ ಅಭ್ಯರ್ಥಿ ಮಾಡಲಿಲ್ಲ, ಕುಯಿಕ್ತಿಯಿಂದ ಸೋಲಿಸಿದರು, ಅವರ ಜೀವಿತಾವಧಿಯಲ್ಲಿ ಸಂವಿಧಾನ ಬದಲಾಯಿಸಿದರು. ಅವರು ಮರಣ ಹೊಂದಿದಾಗ ಅವರ ಶವಸಂಸ್ಕಾರಕ್ಕೆ ದೆಹಲಿಯಲ್ಲಿ ಸ್ಥಳ ನೀಡಲ್ಲಿಲ್ಲ, ಆದರೆ ಈಗ ಅಂಬೇಡ್ಕರ್ ಬಗ್ಗೆ ನಾಟಕದ ಮಾತುಗಳನ್ನು ಆಡುತ್ತಿದ್ದಾರೆ ಎಂದರು.

ಗೃಹ ಸಚಿವ ಅರಗ ಜ್ಞಾನೇಂದ್ರ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರ ತಿಂಗಳಿಗೆ 80 ಸಾವಿರ ಬಡವರಿಗೆ ಉಚಿತ ಅಕ್ಕಿಯನ್ನು ನೀಡುತ್ತಿದೆ. ರಾಜ್ಯ ಸರ್ಕಾರವು ಸಹ ನೀಡುತ್ತಿರುವ ಅಕ್ಕಿಯಲ್ಲಿ ಕೇಂದ್ರ ಸರ್ಕಾರದ ಬಹುಪಾಲು ಹಣವಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಕಿಯ ಚೀಲವನ್ನು ಸಹ ನೀಡಲಿಲ್ಲ ಕೇಂದ್ರ ಸರ್ಕಾರದ ಹಣದ ಅಕ್ಕಿಯನ್ನು ಸಿದ್ದರಾಮಯ್ಯ ನೀಡಿದ್ದಾರೆ. ಬಡವರ ಅಭಿವೃಧ್ದಿ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದರು.

ಬಿಜೆಪಿಯಲ್ಲಿ ಅಶಿಸ್ತಿನ ವರ್ಥನೆ

ಬಿಜೆಪಿ ಪಕ್ಷ ಶಿಸ್ತು ಬದ್ದ ಎಂದು ಬೀಗುತ್ತಿರುತ್ತದೆ, ಆದರೆ ಮುಖ್ಯಮಂತ್ರಿ ಮತ್ತು ಸಚಿವರುಗಳ ಭಾಷಣದ ಮಧ್ಯ ಟಿಕೆಟ್ ಆಕಾಕ್ಷಿಗಳಾದ ಅನಿಲ್ ಕುಮಾರ್ ಮತ್ತು ಡಾ.ಲಕ್ಷ್ಮೀಕಾಂತ್ ರವರ ಬೆಂಬಲಿಗರು ಅವರ ಪರ ಪದೆ ಪದೆ ಕೂಗಾಡಿ ಕಾರ್ಯಕ್ರಮದಲ್ಲಿ ಕಿರಿ ಕಿರಿ ಮಾಡುತ್ತಿದ್ದರು.

ಕಾರ್ಯಕ್ರಮದಲ್ಲಿ ಸಚಿವರಾದ ಬಿ.ಸಿ.ನಾಗೇಶ್, ಶಾಸಕ ರಾಜೇಶ್‌ಗೌಡ, ಸಂಸದ ಜಿ.ಎಸ್.ಬಸವರಾಜು, ಮಾಜಿ ಸಂಸದ ಮುದ್ದಹನುಮೇಗೌಡ, ವಿಧಾನ ಪರಿಷತ್ ಸದಸ್ಯರು ಗಳಾದ ವೈ.ಎ.ನಾರಾಯಣಸ್ವಾಮಿ, ಚಿದಾನಂದಗೌಡ, ಜಿಲ್ಲಾ ಅಧ್ಯಕ್ಷರುಗಳಾದ ಬಿ.ಕೆ.ಮಂಜುನಾಥ್, ರವಿಕುಮಾರ್, ಮಂಡಲ ಅಧ್ಯಕ್ಷ ಪವನ್‌ಕುಮಾರ್ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.