ಪೊದೆಯಲ್ಲಿ ಕೊಳತ ಶವ ಕೇಸ್ : ಅನೈತಿಕ ಸಂಬಂಧಕ್ಕಾಗಿ ಆತ್ಮಹತ್ಯೆ

ಕೊರಟಗೆರೆಯಲ್ಲಿ ನಡೆದ ಪ್ರಕರಣಕ್ಕೆ ರಣರೋಚಕ ತಿರುವು

Team Udayavani, Jul 30, 2022, 9:59 PM IST

crime

ಕೊರಟಗೆರೆ: ನಿರ್ಜನ ಪ್ರದೇಶದ ದಟ್ಟ‌ ಪೊದೆಯಲ್ಲಿ ಅನುಮಾನಾಸ್ಪದವಾಗಿ ಕೊಳತ ಸ್ಥಿತಿಯಲ್ಲಿ ಪತ್ತೆಯಾದ ಶಿವಕುಮಾರ್ ಎಂಬಾತನ ಸಾವಿಗೆ ರಣ ರೋಚಕ ತಿರುವು ದೊರಕಿದ್ದು, ಆತ್ಮಹತ್ಯೆ ಎಂದು ತಿಳಿದು ಬಂದಿದೆ. ಡೆತ್ ನೋಟ್ ನಲ್ಲಿ, ನನ್ನ ಸಾವಿಗೆ ಹಣಕಾಸಿನ ವ್ಯವಹಾರ ಹಾಗೂ ಅನೈತಿಕ ಸಂಬಂಧವೇ ಕಾರಣ ಎಂದು ಬರೆದಿರುವುದು ಕಂಡು ಬಂದಿದ್ದು, ಪ್ರಕರಣಕ್ಕೆ ಹೊಸ ತಿರುವು ದೊರಕಿದೆ.

ಕೋಳಾಲ ಹೋಬಳಿಯ ತಿಮ್ಮಸಂದ್ರ ಗ್ರಾಮದ ಶಿವಕುಮಾರ್ (47 ) ಕಳೆದ 2 ದಿನಗಳ ಹಿಂದೆ ಇದೇ ಗ್ರಾಮದ ನಿರ್ಜನ ಪ್ರದೇಶದ ಪೊದೆಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಹಿಂದೆ ಹಣಕಾಸಿನ ಬೆದರಿಕೆ ಹಾಗೂ ಮಹಿಳೆಯ ಅನೈತಿಕ ಸಂಬಂಧದ ಬೇಸರದಿಂದ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾನೆ ಎನ್ನಲಾಗಿದೆ.

ಮೃತ ಶಿವಕುಮಾರ್, ತನ್ನೊಂದಿಗೆ ಅನೈತಿಕ ಸಂಬಂಧವಿದ್ದ ಮಹಿಳೆ ಹಾಗೂ ಆಕೆಯ ಸ್ನೇಹಿತನಿಗೆ 1 ಲಕ್ಷ ರೂ ಹಣ ಸಾಲ ಎಂದು ಕೊಡಿಸಲಾಗಿತ್ತು. ಈ ಹಣ ಕೇಳಿದ್ದಕ್ಕೆ ನನಗೆ ಜೀವ ಬೆದರಿಕೆ ಹಾಕಿದ್ದು, ಹಣ-ಬಡ್ಡಿ ಎರಡೂ ಹಿಂದಿರುಗಿಸದೆ ಕೇಳಿದರೆ ನನಗೆ ಬಾಯಿಗೆ ಬಂದಂತೆ ಬೈದು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ ಕಾರಣ ನಾನು ಬೇಸರದಿಂದ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ ಎಂದು ಬರೆದಿದ್ದಾನೆ ಎನ್ನಲಾಗಿದೆ.

ಆತ್ಮಹತ್ಯೆಗೆ ಶರಣಾದ ಶಿವಕುಮಾರ್ ಕಳೆದ ಸುಮಾರು ವರ್ಷಗಳಿಂದ ಮಹಿಳೆಯ ಕುಟುಂಬಕ್ಕೆ ಆಶ್ರಯವಾಗಿದ್ದು, ಈತನ ಮೊದಲ ಹೆಂಡತಿಯ ಆತ್ಮಹತ್ಯೆಗೆ ಈ ಅನೈತಿಕ ಸಂಬಂಧವೇ ಕಾರಣ ಎನ್ನಲಾಗುತ್ತಿದ್ದು ಈ ಹಿಂದೆ ಸಿಪಿಐ ಕನಕಲಕ್ಷ್ಮಿಯವರು ಈ ಪ್ರಕರಣವನ್ನು ದಾಖಲಿಸಿಕೊಂಡಿದ್ದರು ಎನ್ನಲಾಗಿದ್ದು, ಇವೆಲ್ಲವುಗಳ ನಡುವೆ ಬಹಳ ವರ್ಷಗಳಿಂದ ಜತೆಯಲ್ಲಿದ್ದ ಮಹಿಳೆ ಈಗ ಇನ್ನೊಬ್ಬ ವ್ಯಕ್ತಿಯ ಜತೆ ಹೆಚ್ಚು ಸಲುಗೆಯಿಂದ ಇದ್ದು ನನಗೆ ಮೋಸ ಮಾಡಿದ್ದಾಳೆ, ಆದ್ದರಿಂದ ನನಗೆ ಇವೆರಡೂ ವಿಚಾರಗಳಲ್ಲಿ ಬೇಸರವಾಗಿ ಸಾಲವನ್ನೂ ಹಿಂದಿರುಗಿಸದೆ ಜತೆಗೆ ಪ್ರೀತಿಯಲ್ಲೂ ಮೋಸ ಮಾಡಿದ ಕಾರಣ ನಾನು ಮನನೊಂದು ಆತ್ಮಹತ್ಯೆಗೆ ಕೈ ಹಾಕಿದ್ದೇನೆ ಎಂದು ಡೆತ್ ನೋಟ್ ನಲ್ಲಿ ಶಿವಕುಮಾರ್ ಬರೆದಿದ್ದಾನೆ ಎನ್ನಲಾಗಿದೆ.

ಈ ಸಂಬಂಧ ಕೊರಟಗೆರೆಯ ಕೋಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಪಿಐ ಸಿದ್ದರಾಮೇಶ್ವರ ಹಾಗೂ ಪಿಎಸ್ಐ ಮಹಾಲಕ್ಷ್ಮಿಮ್ಮ ಕೂಲಂಕಷವಾಗಿ ಪರಿಶೀಲನೆ ನಡೆಸಿ ಮಹಿಳೆ ಸೇರಿ ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.

ಟಾಪ್ ನ್ಯೂಸ್

10

Tollywood: ʼಪುಷ್ಪ-3 ಬರುವುದು ಕನ್ಫರ್ಮ್..‌ ನಿರ್ಮಾಪಕರೇ ಬಿಟ್ಟು ಕೊಟ್ರು ಗುಟ್ಟು

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

MS Dhoni Sends ‘shocking’ Message To Chennai Super Kings

IPL 2025: ಸಿಎಸ್‌ ಕೆ ಅಭಿಮಾನಿಗಳಿಗೆ ಶಾಕಿಂಗ್‌ ಸುದ್ದಿ ಕೊಟ್ಟ ಎಂ.ಎಸ್.ಧೋನಿ

9

Actor Suriya: ತಾಯಿ ಮಾಡಿದ 25 ಸಾವಿರ ರೂ. ಸಾಲ ತೀರಿಸಲು ಸಿನಿಮಾ ರಂಗಕ್ಕೆ ಬಂದ ಸೂರ್ಯ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Kunigal: ಅಪ್ರಾಪ್ತೆಯ ಅಪಹರಣ, ಲೈಂಗಿಕ ದೌರ್ಜನ್ಯ; ಗುಜರಾತ್ ನಲ್ಲಿ ಬಂಧನ

Jeeda

Tumakuru: ದೇವರಾಯನದುರ್ಗದಲ್ಲಿ ಹೊಸ ಮಾದರಿ ಜೇಡ ಪತ್ತೆ

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

3-tumkur-dasara

Dasara: ಇದೇ ಮೊದಲ ಬಾರಿಗೆ ತುಮಕೂರು ಜಿಲ್ಲಾಡಳಿತದ ವತಿಯಿಂದ ಅದ್ಧೂರಿ ದಸರಾ ಆಚರಣೆ

12-koratagere

Koratagere: ಮೈಸೂರು ದಸರಾದಲ್ಲಿ ಸಿದ್ದರಬೆಟ್ಟ ಸ್ತಬ್ದಚಿತ್ರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

10

Tollywood: ʼಪುಷ್ಪ-3 ಬರುವುದು ಕನ್ಫರ್ಮ್..‌ ನಿರ್ಮಾಪಕರೇ ಬಿಟ್ಟು ಕೊಟ್ರು ಗುಟ್ಟು

8

KSRTC ನಿಲ್ದಾಣ-ಲಾಲ್‌ಭಾಗ್‌ ರಸ್ತೆ ಫುಟ್‌ಪಾತ್‌ ಇಲ್ಲದೆ ಪಾದಚಾರಿಗಳ ಪರದಾಟ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

MS Dhoni Sends ‘shocking’ Message To Chennai Super Kings

IPL 2025: ಸಿಎಸ್‌ ಕೆ ಅಭಿಮಾನಿಗಳಿಗೆ ಶಾಕಿಂಗ್‌ ಸುದ್ದಿ ಕೊಟ್ಟ ಎಂ.ಎಸ್.ಧೋನಿ

7

Thekkatte: ಹೆದ್ದಾರಿ ಹೊಡೆತದಿಂದ ತೆಕ್ಕಟ್ಟೆ ಕನ್ನಡ ಶಾಲೆ ಉಳಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.