ಜಲ ಸಂರಕ್ಷಣಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ತಂಡ

ಮಧುಗಿರಿ ತಾಲೂಕು ಚಿನಕವಜ್ರ ಗ್ರಾಮಕ್ಕೆ ಭೇಟಿ • ಮಾಹಿತಿ ನೀಡಿದ ಪಿಡಿಒ ಉತ್ತಮ್‌

Team Udayavani, Aug 9, 2019, 4:29 PM IST

tk-tdy-1

ತುಮಕೂರು ಜಿಲ್ಲೆಯಲ್ಲಿ ಕೈಗೊಂಡಿರುವ ನೀರು ಸಂರಕ್ಷಣಾ ಕಾಮಗಾರಿ ಕುರಿತು ಮಾಹಿತಿ ಪಡೆದ ಜಲಶಕ್ತಿ ಅಭಿಯಾನ ಕೇಂದ್ರ ತಂಡದ ಜಿಲ್ಲಾ ನೋಡಲ್ ಅಧಿಕಾರಿ ಆರ್‌.ಕೆ. ಚಂಡೋಲಿಯಾ ಮತ್ತು ತಂಡ.

ತುಮಕೂರು: ಬೆಟ್ಟ-ಗುಡ್ಡ ಪ್ರದೇಶಗಳಲ್ಲಿ ನೀರು ಉಕ್ಕುವ ತಲಪುರಗಿ ನೀರಿನ ಬಾವಿ ಕಾಮಗಾರಿಗೆ ಆದ್ಯತೆ ನೀಡಬೇಕೆಂದು ಜಲಶಕ್ತಿ ಅಭಿಯಾನ ಕೇಂದ್ರ ತಂಡದ ಜಿಲ್ಲಾ ನೋಡಲ್ ಅಧಿಕಾರಿ ಆರ್‌.ಕೆ. ಚಂಡೋಲಿಯಾ ಸಲಹೆ ನೀಡಿದರು.

ಮಧುಗಿರಿ ತಾಲೂಕು ಚಿನಕವಜ್ರ ಗ್ರಾಮಕ್ಕೆ ಭೇಟಿ ನೀಡಿ ಜಲ ಸಂರಕ್ಷಣಾ ಕಾಮಗಾರಿ ಪರಿಶೀಲಿಸಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉತ್ತಮ್‌ರಿಂದ ಮಾಹಿತಿ ಪಡೆದು ಮಾತನಾಡಿದರು. ಬೇಸಿಗೆ ಕಾಲದಲ್ಲಿಯೂ ನೀರು ಇಂಗದಿರುವ ನೀರು ಸಂರಕ್ಷಣಾ ಕಾಮಗಾರಿ ಕೈಗೊಂಡಲ್ಲಿ ನೀರಿನ ಬವಣೆ ತಲೆದೋರದು ಎಂದು ತಿಳಿಸಿದರು.

ಕೃಷಿ ಚಟುವಟಿಕೆಗೆ ನೀರು ಬಳಕೆ: ಮಳೆಗಾಲದಲ್ಲಿ ತಲಪುರಗಿಯ ಸುತ್ತಲೂ ಇರುವ ಬೆಟ್ಟಗಳ ಬುಡದಲ್ಲಿ ಮಳೆ ನೀರು ಇಂಗಿ ಭೂಮಿ ಮೂಲಕ ಬಸಿದು ಈ ತಲಪುರಗಿಯಲ್ಲಿ ಉಕ್ಕುತ್ತದೆ. ಹತ್ತಾರು ಅಡಿಗಳ ಆಳದಲ್ಲಿಯೇ ನೀರು ದೊರೆಯುವ ಈ ತಲಪುರಗಿ ನೀರನ್ನು ಸದ್ಯ ಸುತ್ತಮುತ್ತಲಿನ ರೈತರು ಕೃಷಿ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ಮಳೆಗಾಲದಲ್ಲಿ ಈ ತಲಪುರಗಿ ತುಂಬಿ ಚೋಳೆನಹಳ್ಳಿ ಕೆರೆ-ಮಧುಗಿರಿ ಕೆರೆ-ಬಿಜವರ ಕೆರೆಗೆ ನೀರು ಹರಿದು ಹೋಗುತ್ತದೆ ಎಂದು ಉತ್ತಮ್‌ ಹೇಳಿದರು.

ಮುಂದಿನ ದಿನಗಳಲ್ಲಿ ತಲಪುರಗಿ ನೀರನ್ನು ಓವರ್‌ ಹೆಡ್‌ಟ್ಯಾಂಕ್‌ಗೆ ತುಂಬಿಸಿ ಚಿನಕವಜ್ರ ಗ್ರಾಮಕ್ಕೆ ಸರಬರಾಜು ಮಾಡುವ ಉದ್ದೇಶವಿದ್ದು, ನೀರಿನ ಸರಬರಾಜಿಗೆ ಅಗತ್ಯವಿರುವ ಕೊಳವೆ ಮಾರ್ಗ ಈಗಾಗಲೇ ಅಳವಡಿಸಲಾಗಿದೆ. ತಲಪುರಗಿ ಕಾಮಗಾರಿ ನರೇಗಾ ಯೋಜನೆಯಡಿ 8.85 ಲಕ್ಷ ರೂ. ವೆಚ್ಚದಲ್ಲಿ ಕೈಗೊಂಡು 2016-17ರಲ್ಲಿ ಪೂರ್ಣಗೊಳಿಸಲಾಗಿದೆ ಎಂದು ಹೇಳಿದರು.

ನಂತರ ದಬ್ಬೆಘಟ್ಟ ಗ್ರಾಮದಲ್ಲಿ ತೋಟಗಾರಿಕೆ ಇಲಾಖೆಯಿಂದ ರಾಷ್ಟ್ರೀಯ ತೋಟಗಾರಿಕಾ ಯೋಜನೆಯಡಿ 75 ಸಾವಿರ ರೂ. ಸಹಾಯಧನ ಒಳಗೊಂಡಂತೆ ಒಟ್ಟು 1.50 ಲಕ್ಷ ರೂ. ವೆಚ್ಚದಲ್ಲಿ ಕೃಷಿಕ ಶಿವಣ್ಣ ಅವರ ಜಮೀನಿನಲ್ಲಿ ನಿರ್ಮಿಸಲಾದವೈಯಕ್ತಿಕ ಕೃಷಿ ಹೊಂಡ ವೀಕ್ಷಿಸಿದ ತಂಡ ಮಧುಗಿರಿ ಹಿರಿಯ ಸಹಾಯಕ ಕೃಷಿ ನಿರ್ದೇಶಕ ವಿಶ್ವನಾಥಗೌಡರಿಂದ ಮಾಹಿತಿ ಪಡೆಯಿತು.

ನಾಲಾ ಬದು ಕಾಮಗಾರಿ ವೀಕ್ಷಣೆ: 13ಲಕ್ಷ ಲೀ. ಸಂಗ್ರಹ ಸಾಮರ್ಥ್ಯವಿರುವ ಈ ಕೃಷಿ ಹೊಂಡದ ನೀರನ್ನು ತೋಟಗಾರಿಕೆ ಬೆಳೆಗೆ ಬಳಸಲಾಗುತ್ತಿದೆ ಎಂದು ವಿಶ್ವನಾಥಗೌಡ ತಿಳಿಸಿದರು. ನರೇಗಾ ಯೋಜನೆಯಡಿ 3 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ 30 ಮೀ. ಉದ್ದದ ನಾಲಾ ಬದು ಕಾಮಗಾರಿ ವೀಕ್ಷಿಸಿತು. ಕೋಟೆಕಲ್ಲಪ್ಪನ ಬೆಟ್ಟದಲ್ಲಿ ಅರಣ್ಯ ಇಲಾಖೆಯಿಂದ 2017-18 ಹಾಗೂ 2018-19ನೇ ಸಾಲಿನಲ್ಲಿ 1.73 ಲಕ್ಷ ರೂ. ವೆಚ್ಚದಲ್ಲಿ ರಸ್ತೆಬದಿ ನಿರ್ಮಿಸಲಾಗಿರುವ ನೆಡುತೋಪು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿತು.

ಮಧುಗಿರಿ ವಲಯ ಅರಣ್ಯಾಧಿಕಾರಿ ತಾರಕೇಶ್ವರಿ ಮಾತನಾಡಿ, 10 ಮೀ. ಅಂತರದಲ್ಲಿ ಒಂದು ಸಸಿಯಂತೆ 3 ಕಿ.ಮೀ. ದೂರ ಸುಮಾರು 1500 ಬೇವು, ಆಲ, ಹತ್ತಿ, ಹಿಪ್ಪೆ, ಅರಳಿ, ನೇರಳೆ, ಜಂಬುನೇರಳೆ ಸಸಿ ನೆಡಲಾಗಿದೆ ಎಂದು ಹೇಳಿದರು. ಬಳಿಕ ತಂಡವು ಮಧುಗಿರಿ ಪುರಸಭೆಯಿಂದ 14ನೇ ಹಣಕಾಸು ಯೋಜನೆಯಡಿ ಸಿದ್ದಾಪುರ ಪ್ರದೇಶದಲ್ಲಿ 90ಸಾವಿರ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದ ಕೊಳವೆಬಾವಿ ಮರುಪೂರಣ ಕಾಮಗಾರಿ ವೀಕ್ಷಿಸಿ ಗುತ್ತಿಗೆದಾರರಿಂದ ಮಾಹಿತಿ ಪಡೆಯಿತು.

ತಂಡದ ಬಲರಾಮ್‌ ಪ್ರಸಾದ ಭಿಮಲ್, ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ದೊಡ್ಡಸಿದ್ದಯ್ಯ, ಕೃಷಿ ಉಪನಿರ್ದೇಶಕ ಉಮೇಶ್‌, ಕೃಷಿ ಸಹಾಯಕ ನಿರ್ದೇಶಕ ಡಿ. ಹನುಮಂತರಾಯಪ್ಪ, ಜಿಲ್ಲಾ ಪಂಚಾಯಿತಿ ಸಾಮಾಜಿಕ ಪರಿಶೋಧಕ ಚಂದ್ರಶೇಖರ್‌, ಮತ್ತಿತರರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.